ನಾಯಿಗಳು ಬೊಗಳುತ್ತವೆಂದು ಕಚ್ಚಲು ಹೋಗಬಾರದು: ಸವದಿ
Team Udayavani, Jan 6, 2020, 10:36 PM IST
– ಗಡಿ ವಿವಾದ ಕೆಣಕಿದ ಮಹಾ ಸಿಎಂ ಠಾಕ್ರೆಗೆ ತಿರುಗೇಟು
– ಶೀಘ್ರವೇ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ
ಬೆಳಗಾವಿ: ನಾಯಿಗಳು ಬೊಗಳುತ್ತವೆ ಎಂದು ನಾವು ಅವುಗಳನ್ನು ಕಚ್ಚಲು ಹೋಗಬಾರದು. ಅವು ತಮ್ಮ ಪಾಡಿಗೆ ಬೊಗಳುತ್ತಿರುತ್ತವೆ ಎಂದು ಗಡಿ ವಿವಾದ ಕೆಣಕುವ ಮಹಾರಾಷ್ಟ್ರ ನಾಯಕರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಟಿ ಬೀಸಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಗಡಿ ವಿಚಾರವಾಗಿ ಅವಿವೇಕದ ಹೇಳಿಕೆ ನೀಡುವ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಈ ರೀತಿ ಮಾತನಾಡುವ ಮುನ್ನ ತಮ್ಮ ತಂದೆ ಶಿವಸೇನೆ ವರಿಷ್ಠರಾಗಿದ್ದ ಬಾಳಾ ಠಾಕ್ರೆ ಹಾಗೂ ಸಂಬಂಧಿ ರಾಜ್ ಠಾಕ್ರೆ ಅವರ ಮಾತುಗಳನ್ನು ಅವಲೋಕನ ಮಾಡಬೇಕು. ಜವಾಬ್ದಾರಿ ಅರಿಯಬೇಕು. ಅವಿವೇಕತನದ ಹೇಳಿಕೆ ಮುಖ್ಯಮಂತ್ರಿಗಳಿಗೆ ಶೋಭೆ ತರುವಂಥದಲ್ಲ ಎಂದರು.
ಗಡಿ ವಿವಾದ ಮುಗಿದು ಹೋದ ಅಧ್ಯಾಯ. ಯಾರು ಏನೇ ಹೇಳಿದರೂ ಅಥವಾ ಯಾರೇ ಬಂದರೂ ಬೆಳಗಾವಿ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ.
ಮಹಾರಾಷ್ಟ್ರದವರು ಅನಗತ್ಯವಾಗಿ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಅಲ್ಲಿ ನಮಗೆ ನ್ಯಾಯ ಸಿಗುವ ಸಂಪೂರ್ಣ ವಿಶ್ವಾಸ ಇದೆ. ಆದಷ್ಟು ಶೀಘ್ರ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಆಗಲಿದೆ ಎಂದರು.
ಪ್ರಚೋದನಕಾರಿ ಹೇಳಿಕೆ ನೀಡಿ ಪುರುಷತ್ವ ಪ್ರದರ್ಶನ: ಈಶ್ವರಪ್ಪ
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿಚಾರ ಹಾಗೂ ಭಾಷೆಯ ವಿಷಯದಲ್ಲಿ ಮಹಾರಾಷ್ಟ್ರ ಹಾಗೂ ಇಲ್ಲಿನ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿ ಪುರುಷತ್ವದ ಪ್ರದರ್ಶನ ಮಾಡುತ್ತಿದ್ದಾರೆ. ಆದರೆ ಇದರಿಂದ ಏನೂ ಪ್ರಯೋಜನವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಸುದ್ದಿಗಾರರ ಜತೆ ಮಾತನಾಡಿ, ಕೆಲವರು ಗಡಿ ಹಾಗೂ ಭಾಷೆ ವಿಷಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಬಿಜೆಪಿ ಒಪ್ಪುವುದಿಲ್ಲ. ಯಾವುದೇ ಕಾರಣಕ್ಕೂ ಕರ್ನಾಟಕದ ನೆಲ, ಗಡಿ ಹಾಗೂ ಭಾಷೆ ವಿಚಾರದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ಸರ್ಕಾರ ಬೆಂಬಲ ನೀಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್