ಎಲೆಮಚ್ಚೆ ರೋಗ; ಬೆಲೆ ಕಳೆದುಕೊಂಡ ಉಳ್ಳಾಗಡ್ಡಿ

ಬಸವನಬಾಗೇವಾಡಿ ಹಾಗೂ ಕೂಡಗಿ ಭಾಗದಲ್ಲೂ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ.

Team Udayavani, Sep 21, 2021, 6:13 PM IST

ಎಲೆಮಚ್ಚೆ ರೋಗ; ಬೆಲೆ ಕಳೆದುಕೊಂಡ ಉಳ್ಳಾಗಡ್ಡಿ

ವಿಜಯಪುರ: ಕಳೆದ ನಾಲ್ಕು ತಿಂಗಳಿಂದ ಮಾರುಕಟ್ಟೆಯಲ್ಲಿ ಸಾಮಾನ್ಯ ಬೆಲೆ ಹೊಂದಿದ್ದ ಈರುಳ್ಳಿ ಪ್ರಕೃತಿ ವೈಪರಿತ್ಯದ ಪರಿಣಾಮ ಇದೀಗ ಏಕಾಏಕಿ ಬೆಲೆ ಕುಸಿಯುವಂತೆ ಮಾಡಿದೆ. ಅತಿವೃಷ್ಟಿ ಹಾಗೂ ವಾತಾವರಣ ಬದಲಾವಣೆಯ ಕಾರಣದಿಂದ ತಿರುಗುಣಿ, ಎಲೆಮಚ್ಚೆ ರೋಗಕ್ಕೆ ಸಿಲುಕಿದ್ದು, ಗಾತ್ರದ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ವಿಜ್ಞಾನಿಗಳು ಕೂಡ ಅಧ್ಯಯನ ನಡೆಸಿದ್ದು, ಪರಿಹಾರ ಸೂಚಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ 20-24 ಸಾವಿರ ಹೆಕ್ಟೇರ್‌ ಪ್ರದೇಶದ ವರೆಗೆ ಈರುಳ್ಳಿ ಬೆಳೆಯಲಾಗುತ್ತದೆ. ಈ ಬಾರಿ 33 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಇಂಡಿ, ಸಿಂದಗಿ, ಮುದ್ದೇಬಿಹಾಳ, ವಿಜಯಪುರ ತಾಲೂಕಿನಲ್ಲಿ ಹೆಚ್ಚಿನ ಈರುಳ್ಳಿ ಬೆಳೆಯಲಾಗುತ್ತದೆ.

ಆದರೆ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ಭಾಗದ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಗುಣಮಟ್ಟದಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ಗರಿಷ್ಟ ಗುಣಮಟ್ಟ ಹೊಂದಿದೆ. ಪರಿಣಾಮ ಜಿಲ್ಲೆಯಿಂದ ಸಗಟು ವ್ಯಾಪಾರಿಗಳ ಮೂಲಕ ತೆಲಂಗಾಣ, ಸೀಮಾಂಧ್ರ, ಕೇಳರ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ವಿಜಯಪುರ ಜಿಲ್ಲೆಯ ರವಾನೆ ಆಗುತ್ತದೆ. ಆದರೆ ಅತಿವೃಷ್ಟಿ, ವಾತಾವರಣದಲ್ಲಿ ಕಂಡುಬಂದ ದಿಢೀರ ಬದಲಾವಣೆಯಿಂದಾಗಿ ಗಾತ್ರ ಹಾಗೂ ಗುಣಮಟ್ಟದಲ್ಲಿ ಕುಸಿತವಾಗಿರುವ ಈರುಳ್ಳಿಯನ್ನು ಇದೀಗ ಮಾರುಕಟ್ಟೆಯಲ್ಲಿ ಕೇಳುವವರೇ ಇಲ್ಲವಾಗಿದೆ.

ಜಿಲ್ಲೆಯಲ್ಲಿ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ರವಿವಾರ ಹಾಗೂ ಬುಧವಾರ ಎರಡು ದಿನ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ. ಕಳೆದ ಮೇ ತಿಂಗಳಿಂದ ಆಗಸ್ಟವರೆಗೆ ವಿಜಯಪುರ ಮಾರುಕಟ್ಟೆಗೆ 36,625 ಕ್ವಿಂಟಲ್‌ ಈರುಳ್ಳಿ ಆವಕವಾಗಿದೆ. ಈ ಅವ ಕಯಲ್ಲಿ ಗುಣಮಟ್ಟಕ್ಕೆ ತಕ್ಕಂತೆ 200-2000 ರೂ. ಬೆಲೆ ಸಿಕ್ಕಿದೆ.

ಬಸವನ ಬಾಗೇವಾಡಿ ಹಾಗೂ ಕೂಡಗಿ ಭಾಗದಲ್ಲೂ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ. ಆದರೆ ಈಚೆಗೆ ಪ್ರಕೃತಿ ವಿಕೋಪದಿಂದಾಗಿ ಈರುಳ್ಳಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲವಾಗಿದೆ. ಇದರಿಂದಾಗಿ ಜಿಲ್ಲೆಯ ರೈತರು ವಿಜಯಪುರ ಮಾರುಕಟ್ಟೆ ಹೊರತಾಗಿ ಹೊರಗಿನ ಮಾರುಕಟ್ಟೆಗೆ ಕೊಂಡೊಯ್ದ ಈರುಳ್ಳಿಗೆ ಸಾಗಾಣಿಕೆ ವೆಚ್ಚವೂ ಸಿಗದಂತೆ ಬೆಲೆ ಕುಸಿತ ಅನುಭವಿಸಿದ್ದಾರೆ.

ಈ ಮಧ್ಯೆ ಜಿಲ್ಲೆಯ ಈರುಳ್ಳಿ ಬೆಳೆಯಲ್ಲಿ ಕಾಣಿಸಿಕೊಂಡ ರೋಗದ ಕುರಿತು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ರೋಗತಜ್ಞರಾದ ರಮೇಶ ರಾಠೊಡ, ಕೀಟತಜ್ಞರಾದ ಸತ್ಯನಾರಾಯಣ ನೇತೃತ್ವದಲ್ಲಿ ಸೆ. 17ರಂದು ತಳೆವಾಡ, ಬಳೂತಿ ಕೊಲ್ಹಾರ ಭಾಗದ ರೈತರ ಈರುಳ್ಳಿ ತೋಟಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್‌.ಎಂ. ಬರಗಿಮಠ, ಎಸ್‌ಎಡಿಎಚ್‌ಒ ಸಿ.ಬಿ. ಪಾಟೀಲ, ಪ್ರಗತಿಪರ ರೈತರಾದ ನಂದಬಸಪ್ಪ ಚೌಧರಿ, ಯಶವಂತ ದಳವಾಯಿ, ಪುಂಡಲೀಕ ಛಬ್ಬಿ ಅವರ ಜೊತೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ, ಈ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತೂ ಸಲಹೆ ನೀಡಿದ್ದಾರೆ.

ಜಿಲ್ಲೆಯ ಈರುಳ್ಳಿಗೆ ಹೊರ ರಾಜ್ಯದಲ್ಲಿ ಭಾರಿ ಬೇಡಿಕೆ ಇದೆ. ಆದರೆ ಈ ಬಾರಿ ಗಾತ್ರ, ಗುಣಮಟ್ಟದಲ್ಲಿ ಕುಸಿತದಿಂದಾಗಿ ಸಹಜವಾಗಿ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಕುಸಿತವಾಗಿದೆ. ಖರೀದಿಸಿದ ಈರುಳ್ಳಿ ಕೂಡ ಕೊಳೆಯುತ್ತಿದ್ದು, ನಮಗೂ ನಷ್ಟವಾಗುತ್ತಿದೆ.
ಗುರು ಶಿರೋಳಕರ, ಈರುಳ್ಳಿ ಸಗಟು
ವ್ಯಾಪಾರಿ, ಎಪಿಎಂಸಿ, ವಿಜಯಪುರ

ರೈತರು ಈರುಳ್ಳಿ ರೋಗದ ಕುರಿತು ನಮ್ಮ ಗಮನಕ್ಕೆ ತರುತ್ತಲೇ ವಿಜ್ಞಾನಿಗಳನ್ನು ಕರೆಸಿ ಅಧ್ಯಯನ ಮಾಡಿಸಿದ್ದೇವೆ. ಅಲ್ಲದೇ ಪ್ರಕೃತಿ ವೈಪರಿತ್ಯದಿಂದಾಗಿ ಕಂಡುಬಂದಿರುವ ಈ ರೋಗದ ಕುರಿತು ರೈತರು ಕೈಗೊಳ್ಳಬೇಕಾದ ಸಲಹೆಗಳನ್ನೂ ನೀಡಿದ್ದೇವೆ.
ಎಸ್‌.ಎಂ.ಬರಗೀಮಠ
ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ

ಜಿ.ಎಸ್‌. ಕಮತರ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.