ಸಿಗದ ಚಿರತೆ; ತಪ್ಪದ ಆತಂಕ


Team Udayavani, Dec 5, 2022, 7:20 AM IST

ಸಿಗದ ಚಿರತೆ; ತಪ್ಪದ ಆತಂಕ

ಬೆಂಗಳೂರು/ಮೈಸೂರು: ಚಿರತೆ ಕಂಡುಬಂದು ಆತಂಕಕ್ಕೆ ಗುರಿಯಾಗಿರುವ ಬೆಂಗಳೂರು, ಮೈಸೂರಿನಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಆದರೆ ಬೆಂಗಳೂರು ಪರಿಸರದ ಚಿರತೆ ಅರಣ್ಯ ಪ್ರದೇಶ ಸೇರಿರುವ ಸಾಧ್ಯತೆ ಇದೆ ಎಂದು ಅರಣ್ಯಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಟಿ.ನರಸೀಪುರದಲ್ಲಿ ಇಬ್ಬರನ್ನು ಬಲಿ ಪಡೆದಿರುವ ಚಿರತೆಯನ್ನು ಸೆರೆ ಹಿಡಿಯಲು 13 ತಂಡಗಳನ್ನು ರಚಿಸಲಾಗಿದೆ. ಮೈಸೂರು, ಬಂಡೀಪುರದಿಂದ ವಿಶೇಷ ತಂಡಗಳನ್ನು ಕರೆಸಿಕೊಳ್ಳಲಾಗಿದ್ದು, ಇದರಲ್ಲಿ 120ಕ್ಕಿಂತ ಅಧಿಕ  ಸಿಬಂದಿ ಇದ್ದಾರೆ.  ಪ್ರತಿ ತಂಡದಲ್ಲಿ ಒಬ್ಬ ಶಾರ್ಪ್‌ ಶೂಟರ್‌ ಇದ್ದು, ಅವರಿಗೆ ಅಗತ್ಯ ಪರಿಕರ ನೀಡಲಾಗಿದೆ. 20 ಡ್ರೋನ್‌  ಕೆಮರಾ ತರಿಸಿಕೊಂಡು ಚಿರತೆ ಸಂಚಾರದ ಗ್ರಾಮಗಳಲ್ಲಿ ಅಳವಡಿಸಲಾಗಿದೆ.

ಕೆಮರಾ ಟ್ರ್ಯಾಪ್‌ನಲ್ಲಿ  ಸೆರೆ?:

ಚಿರತೆ ಮೊದಲ ಬಲಿ ಪಡೆದ ಪ್ರದೇಶದಲ್ಲಿ ಇಲಾಖೆ ಇರಿಸಿದ್ದ  ಕೆಮರಾ ಟ್ರ್ಯಾಪ್‌ನಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಅದರ ಹೆಜ್ಜೆ ಗುರುತು, ಎರಡೂ ಘಟನೆಗಳಲ್ಲಿ ಕಂಡುಬಂದ ಹೆಜ್ಜೆ ಗುರುತುಗಳಲ್ಲಿ ಸಾಮ್ಯತೆ ಇರುವುದರಿಂದ ಅದುವೇ ಮನುಷ್ಯಹಂತಕ ಚಿರತೆ ಎನ್ನಲಾಗಿದೆ.  ಚಿರತೆ ಇರುವ ಸ್ಥಳವನ್ನು ಇಲಾಖೆ ಖಾತ್ರಿಪಡಿಸಿಕೊಂಡಿದ್ದು, ಒಂದೆರೆಡು ದಿನ

ಗಳಲ್ಲಿ  ಅದನ್ನು ಸೆರೆ ಹಿಡಿಯುವ ನಿರೀಕ್ಷೆ ಇದೆ. ಇನ್ನೊಂದೆಡೆ, ಚಿರತೆ ಬೋನಿಗೆ ಬೀಳದೇ ಇದ್ದರೆ ಗುಂಡು ಹಾರಿಸಿ ಕೊಲ್ಲುವ ಆದೇಶದ ಬಗ್ಗೆ ಪ್ರಾಣಿ ಪ್ರಿಯರು ಆಕ್ಷೇಪಿಸಿದ್ದಾರೆ.

ಬೆಂಗಳೂರಿನಲ್ಲಿ ಚಿರತೆಯ ಶೋಧಕ್ಕಾಗಿ 3 ದಿನಗಳಿಂದ ಪ್ರಯತ್ನಿಸಲಾಗುತ್ತಿದೆ. ತುರಹಳ್ಳಿ, ದೇವನಹಳ್ಳಿಯ ಐಟಿಸಿ ಕಾರ್ಖಾನೆ ಪ್ರದೇಶ ಹಾಗೂ ಕೆಂಗೇರಿಯ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಚಿರತೆಯನ್ನು ಪತ್ತೆ ಹಚ್ಚಲು 30ಕ್ಕೂ ಅಧಿಕ ಅರಣ್ಯ ಸಿಬಂದಿಯ ತಂಡವು  ಕಾರ್ಯಾಚರಣೆ ನಡೆಸುತ್ತಿದೆ. ಆದರೆ ಚಿರತೆಯು ಬನ್ನೇರುಘಟ್ಟದ ಕಾಡಿಗೆ ಹೋಗಿರುವ ಸಾಧ್ಯತೆಗಳಿವೆ. ಬೇರೆ ಕಾಡಿಗೆ ಸಂಚರಿಸುತ್ತಿದ್ದಾಗ ಆಹಾರಕ್ಕಾಗಿ ನಗರ ಪ್ರದೇಶಕ್ಕೆ ಬಂದಿರುವ ಸಾಧ್ಯತೆಗಳಿವೆ ಎಂದು ಅರಣ್ಯ ಇಲಾಖೆ ಸಿಬಂದಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಕಾಡುಗಳಿಗೆ ಹೊಂದಿಕೊಂಡಿರುವ ನಗರಗಳಿಗೆ ಹಿಂದೆಯೂ ಚಿರತೆಗಳು ಬರುತ್ತಿದ್ದವು. ಇದು ಹೊಸ ವಿಚಾರವಲ್ಲ. ತುರಹಳ್ಳಿ, ಐಟಿಸಿ ಕಾರ್ಖಾನೆ ಬಳಿ ಹಿಂದೆ ಕುರುಚಲು ಗಿಡ, ಕಾಡುಗಳಿತ್ತು. ಅದೇ ಪ್ರದೇಶಗಳಲ್ಲಿ ಜನ ಸಾಮಾನ್ಯರು ಬಡಾವಣೆ ಮಾಡಿದ್ದಾರೆ. ಹೀಗಾಗಿ ಚಿರತೆ ಕೆಲವೊಮ್ಮೆ ಬಂದು ಹೋಗುವುದು ಸಹಜವಾಗಿದ್ದು, ಜನರು  ಆತಂಕಪಡುವ ಅಗತ್ಯವಿಲ್ಲ. ಮನುಷ್ಯನನ್ನು ಚಿರತೆ ಕೊಂದ ಪ್ರಕರಣಗಳು ವಿರಳ.– ಚರಣ್‌, ಸಹಾಯಕ ಅರಣ್ಯಾಧಿಕಾರಿ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.