ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು
ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿನ ಮೇಲೆ ಚಿರತೆ ದಾಳಿ
Team Udayavani, Sep 27, 2020, 6:51 PM IST
ಹುಣಸೂರು: ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿನ ಮೇಲೆ ಶನಿವಾರ ರಾತ್ರಿ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಹಬ್ಬೂರಿನಲ್ಲಿ ನಡೆದಿದ್ದು ಇದರಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.
ಗ್ರಾಮದ ನಿವಾಸಿ ಬೀರೇಗೌಡರು ತಮ್ಮ ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿನ ಮೇಲೆ ರಾತ್ರಿ ಸುಮಾರು ಎರಡು ಗಂಟೆ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ದಾಳಿ ನಡೆಸಿದಾಗ ಕರು ಕಿರುಚಾಡುವುದನ್ನು ಕೇಳಿದ ಮನೆ ಮಾಲಿಕ ಬಿರೇಗೌಡರು ಗಾಬರಿಯಿಂದ ಹೊರಬಂದು ನೋಡಿದಾಗ ಚಿರತೆ ಕರುವಿನ ಮೇಲೆ ದಾಳಿ ನಡೆಸುತ್ತಿತ್ತು. ಅವರು ಕೂಗಿಕೊಂಡ ವೇಳೆ ಅಕ್ಕಪಕ್ಕದ ಮನೆಯವರೆಲ್ಲಾ ಸೇರಿ ಕೂಗಾಡಿದ್ದರಿಂದ ಚಿರತೆಯು ಕರುವನ್ನು ಕೊಂದು ಸ್ಥಳದಲ್ಲೇ ಬಿಟ್ಟು ಪಕ್ಕದಲ್ಲೇ ಇರುವ ಶೆಟ್ಟಹಳ್ಲಕಿ ಕಾಡಿನತ್ತ ಪರಾರಿಯಾಗಿದೆ ಎಂದು ಬೀರೇಗೌಡ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಾಡುಪ್ರಾಣಿಗಳ ಹಾವಳಿ ತಡೆಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ವಿಫಲರಾಗಿದ್ದು ಚಿರತೆ ಸೆರೆಗೆ ಬೋನಿಡಬೇಕೆಂದು ಅಬ್ಬುರು ಗ್ರಾಮದ ಕುಮಾರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ