ವೈದ್ಯಕೀಯ ಶಿಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿ: ಟಿ.ಎಸ್‌. ನಾಗಾಭರಣ


Team Udayavani, May 22, 2021, 6:52 PM IST

ವೈದ್ಯಕೀಯ ಶಿಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿ: ಟಿ.ಎಸ್‌. ನಾಗಾಭರಣ

ಬೆಂಗಳೂರು: ಆರೋಗ್ಯ ಇಲಾಖೆಯ ಪ್ರಕಟಣೆಗಳು ಮತ್ತು ಮಾರ್ಗ ಸೂಚಿಗಳು ಸ್ಥಳೀಯರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಕನ್ನಡದಲ್ಲಿ ಪ್ರಕಟವಾಗಬೇಕಾದ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಹೇಳಿದ್ದಾರೆ.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 25ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಆನ್‌ಲೈನ್‌ ನಲ್ಲಿ ಹಮ್ಮಿಕೊಂಡಿದ್ದ ಕನ್ನಡ ವೈದ್ಯ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್‌ ಸಂಬಂಧಿಸಿದ ಮಾರ್ಗಸೂಚಿಗಳು ಮತ್ತು ಪ್ರಕಟಣೆಗಳು ಆಂಗ್ಲ ಭಾಷೆಯಲ್ಲಿ ಪ್ರಕಟವಾಗುತ್ತಿವೆ. ಶೇ 70 ರಷ್ಟು ಮಂದಿಗೆ ಈ ಪ್ರಕಟಣೆಗಳ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕನ್ನಡದಲ್ಲಿ ಪ್ರಕಟಣೆಗಳನ್ನ ಹೊರಡಿಸಲಿ ಎಂದು ಸಲಹೆ ನೀಡಿದರು.

ಪಾರಂಪರಿಕ ಜ್ಞಾನದ ಜತೆಗೆ ವಿಜ್ಞಾನ ಮೇಳೈಸಿದಾಗ ಮಾತ್ರ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರವಾದುದನ್ನು ಸಾಧಿಸಬಹುದಾಗಿದೆ. ನಮ್ಮ ಪೂರ್ವಿಕರು ಆರೋಗ್ಯ ರಕ್ಷಣೆಗಾಗಿ ಪಾರಂಪರಿಕವಾಗಿ ಬಳಸುತ್ತಿದ್ದ ಗಿಡಮೂಲಿಕೆಗಳು ಇಂದಿಗೂ ನಮಗೆ ಸಂಜೀವಿನಿಯಾಗಿ ಕಾಣಸಿಗುತ್ತವೆ ಎಂದು ಹೇಳಿದರು.

ಭಾಷೆ ಕೇವಲ ಸಂವಹನ ಅಷ್ಟೇ ಅಲ್ಲ; ಅದು ಜ್ಞಾನವನ್ನು ಕೂಡ ಸಮೃದ್ಧಿಯಾಗಿಸುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣವು ಪ್ರಾದೇಶಿಕ ಭಾಷೆಯಲ್ಲಿ ದೊರೆಯುವಂತಾದರೆ ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಜತೆಗೆ ಜನಸಾಮಾನ್ಯರೊಂದಿಗೆ ಹೃದಯಸ್ಪರ್ಶಿಯಾಗಿ ಸ್ಪಂದಿಸಿ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡವನ್ನು ಬೆಳಸುವ ನಿಟ್ಟಿನಲ್ಲಿ ವಿವಿಯು ಶ್ಲಾಘನೀಯ ಕೆಲಸ ಮಾಡುತ್ತಿದೆ. ವೈದ್ಯಕೀಯ ಕ್ಷೇತ್ರಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಕನ್ನಡ ನಿಘಂಟು ಹೊರತರಲಿ ಎಂದರು.

ಇದನ್ನೂ ಓದಿ :ತಾಯಿಯಾದ ಗಾಯಕಿ : ಶ್ರೇಯಾ ಘೋಷಾಲ್ ಮನೆಗೆ ಹೊಸ ಅತಿಥಿ ಆಗಮನ

ವಿವಿ ಕುಲಪತಿ ಸಚ್ಚಿದಾನಂದ ಮಾತನಾಡಿ, ಕನ್ನಡ ವೈದ್ಯಕೀಯ ಸಾಹಿತ್ಯ ಸಾಕಷ್ಟು ಬೆಳೆಯ ಬೇಕಾಗಿದೆ. ಆ ನಿಟ್ಟಿನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ ಹಲವು ಯೋಜನೆ ರೂಪಿದೆ ಎಂದು ಹೇಳಿದರು.

ಸಮ್ಮೇಳನ ಅಧ್ಯಕ್ಷತೆ ವಹಿಸಿದ್ದ ಕಲಬುರ್ಗಿಯ ಕೆಪಿಎಂ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ನಾಡೋಜ ಪಿ.ಎಸ್‌. ಶಂಕರ್‌, ಬೆಳಗಾವಿಯಲ್ಲಿ ಪ್ರಥಮ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ ನಡೆಯಿತು. ಆನಂತರ ದಿನಗಳಲ್ಲಿ ಅದು ಅಪರೂಪವಾಯಿತು ಎಂದು ಹೇಳಿದರು. ವಿವಿ ಕುಲಸಚಿವ ಡಾ.ಎನ್‌.ರಾಮಕೃಷ್ಣ ರೆಡ್ಡಿ, ಉಪಕುಲಸಚಿವ ಡಾ.ಬಿ.ವಸಂತ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.