ಲಸಿಕೆ ಪಡೆಯುವಲ್ಲಿ ಜನಪ್ರತಿನಿಧಿಗಳೇ ಮಾದರಿಯಾಗಲಿ


Team Udayavani, Feb 25, 2021, 6:17 AM IST

ಲಸಿಕೆ ಪಡೆಯುವಲ್ಲಿ ಜನಪ್ರತಿನಿಧಿಗಳೇ ಮಾದರಿಯಾಗಲಿ

ಕೊರೊನಾ ನಿಯಮಾವಳಿ ಪಾಲಿಸದ ಹೊರತು, ಈ ಸೋಂಕು ಹೋಗುವುದಿಲ್ಲ ಎಂಬ ಕೇಂದ್ರ ಸರಕಾರದ ಎಚ್ಚರಿಕೆ ನಡುವೆಯೇ ಎರಡನೇ ಹಂತದ ಲಸಿಕಾ ಪ್ರಕ್ರಿಯೆಗೆ ದೇಶ ಸಿದ್ಧವಾಗುತ್ತಿದೆ. ಮಾರ್ಚ್‌ 1ರಿಂದಲೇ 60 ವರ್ಷ ಮೇಲ್ಪಟ್ಟ ಹಾಗೂ ಇತರ ರೋಗಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯ ಆರಂಭವಾಗಲಿದೆ.

ಜನವರಿ 16ರಿಂದ ಕೊರೊನಾ ಲಸಿಕೆ ನೀಡಲು ಶುರು ಮಾಡಲಾಗಿತ್ತು. ಆದರೆ ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ, ಅನಂತರದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಆದರೆ ಈ ವರೆಗೆ ನಡೆದ ಲಸಿಕೆ ನೀಡಿಕೆ ಪ್ರಕ್ರಿಯೆ ಗಮನಿಸಿದರೆ ಆರೋಗ್ಯ ಕಾರ್ಯಕರ್ತರಲ್ಲಿಯೇ ನಿರಾಸಕ್ತಿಯೋ, ಅಪನಂಬಿಕೆಯೋ ಕಾಣಿಸಿಕೊಂಡ ಹಾಗಿದೆ. ಸರಕಾರ ನಿರೀಕ್ಷಿಸಿದ್ದ ಮಟ್ಟಿಗೆ ಲಸಿಕೆ ನೀಡುವಲ್ಲಿ ಯಶಸ್ಸು ಸಿಕ್ಕಿಲ್ಲ. ಲಸಿಕೆ ಪಡೆಯುವಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರೇ ಹಿಂದೆ ಬಿದ್ದಿರುವುದನ್ನು ಇಲ್ಲಿ ಗಮನಿಸಬಹುದು.

ಸರಕಾರದ ಅಂಕಿ -ಅಂಶಗಳ ಪ್ರಕಾರ, ಇದುವರೆಗೆ 1.20 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ 64 ಲಕ್ಷ ಮಂದಿ ಆರೋಗ್ಯ ಕಾರ್ಯಕರ್ತರು, ಉಳಿದವರು ಮುಂಚೂಣಿ ಕಾರ್ಯಕರ್ತರಾಗಿದ್ದಾರೆ. ಅಂದರೆ ನೋಂದಣಿಯಾದವರಲ್ಲಿ ಶೇ.62ರಷ್ಟು ಆರೋಗ್ಯ ಕಾರ್ಯಕರ್ತರು ಹಾಗೂ ಶೇ.42ರಷ್ಟು ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ ಶೇ. 90ಕ್ಕೂ ಹೆಚ್ಚು ಮಂದಿ ಲಸಿಕೆ ಪಡೆಯಬಹುದೆನ್ನುವ ನಿರೀಕ್ಷೆ ಇತ್ತು. ಇದು ಸಾಧ್ಯವಾಗದೆ ಇರುವುದಕ್ಕೆ ಹಲವು ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಒಂದು ಹಂತದಲ್ಲಿ ಸ್ವತಃ ಕೇಂದ್ರ ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು ಕೈ ಮುಗಿದು ಕೇಳಿ ಕೊಂಡಿದ್ದರು. ಈಗಾಗಲೇ ಮುಂಚೂಣಿ ವೈದ್ಯರು ಲಸಿಕೆ ಪಡೆದು ಕೊಂಡು ಜನರಲ್ಲಿ ಮನವಿ ಮಾಡಿದ್ದಾರೆ. ಲಸಿಕೆ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಲು ತಂತ್ರಜ್ಞಾನದ ಸಮಸ್ಯೆ ಜತೆಗೆ ಲಸಿಕೆ ಬಗ್ಗೆ ಉದಾಸೀನ ಅಥವಾ ಅಪ ನಂಬಿಕೆ ಕಾರಣವಿರಲೂಬಹುದು ಎನ್ನಲಾಗು ತ್ತಿದೆ. ಒಂದು ವೇಳೆ ಅಪನಂಬಿಕೆ ಇದ್ದಲ್ಲಿ ಅದನ್ನು ನೀಗಿಸುವುದು ಸರಕಾರ ಮತ್ತು ನಾಯಕರ ಕರ್ತವ್ಯ. ಈಗ ಲಸಿಕೆ ಸಾರ್ವಜನಿಕರಿಗೆ ಮುಕ್ತವಾಗುವ ಹಂತದಲ್ಲಿ ಪ್ರಮು ಖ ನಾಯಕರು ಮೊದಲು ತಾವು ಲಸಿಕೆ ಪಡೆದು ಜನರಲ್ಲಿ ವಿಶ್ವಾಸ ಮೂಡಿಸಲಿ.

ವಿದೇಶಗಳಲ್ಲಿ ಆಯಾ ರಾಷ್ಟ್ರದ ಪ್ರಮುಖ ಜನ ಪ್ರತಿನಿಧಿಗಳು ಮೊದಲು ಲಸಿಕೆ ಪಡೆದು ಜನರಲ್ಲಿ ಲಸಿಕೆ ಬಗ್ಗೆ ವಿಶ್ವಾಸ ಮೂಡಿಸಿದ್ದಾರೆ. ಹಾಗೆಯೇ, ಮುಂದಿನ ಹಂತಗಳಲ್ಲಾದರೂ ಕೇಂದ್ರ ಹಾಗೂ ಆಯಾ ರಾಜ್ಯ ಸರಕಾರಗಳ ಮುಖ್ಯಸ್ಥರು, ಸಚಿವರು, ಸಂಸದರು, ಶಾಸಕರಾದರೂ ಮೊದಲು ಲಸಿಕೆ ಪಡೆಯುವಂಥ‌ ವ್ಯವಸ್ಥೆಯಾಗಲಿ. ಈ ಬಗ್ಗೆ ಕೇಂದ್ರ ಸರಕಾರ ತನ್ನ ಮಾರ್ಗ ಸೂಚಿಯನ್ನು ಬದಲಿಸಿಕೊಳ್ಳುವುದು ಒಳಿತು. ಕೊರೊನಾ ನಿರ್ಮೂಲನೆಗೆ ಎಲ್ಲರೂ ಜತೆಗೂಡಿ ಹೋರಾಟ ಮಾಡಿದಾಗ ಮಾತ್ರ ನಿರೀಕ್ಷಿತ ಫ‌ಲ ಸಿಗಲು ಸಾಧ್ಯ. ಈಗಾಗಲೇ ಲಸಿಕೆ ಪಡೆದ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ತೊಡಗಿಸಿ ಕೊಳ್ಳಬೇಕಿದೆ. ನಾಡಿನ ವಿವಿಧ ಸಂಘ ಸಂಸ್ಥೆಗಳು ಲಸಿಕೆ ಅಭಿಯಾನವನ್ನು ಎಲ್ಲರಿಗೂ ಯಶಸ್ವಿಯಾಗಿ ತಲುಪಿಸಿಲು ಕೈಜೋಡಿಸಬೇಕಾಗಿದೆ.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.