ನಮ್ಮ ದಾರಿ ನಮಗೆ: ದೇವೇಗೌಡ ಸ್ಪಷ್ಟ ನುಡಿ
ಕಾಂಗ್ರೆಸ್ ನಾಯಕರಿಗೆ ದೇವೇಗೌಡ ಖಡಕ್ ಎಚ್ಚರಿಕೆ
Team Udayavani, Jul 8, 2019, 6:00 AM IST
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಕೈ ನಾಯಕರು ಪ್ರಾಮಾಣಿಕವಾಗಿ ಬಯಸಿದರೆ ಮಾತ್ರ ಸರ್ಕಾರ ಉಳಿಯುತ್ತದೆ, ಇಲ್ಲದಿದ್ದರೆ ನಾವು ಬೇರೆ ದಾರಿ ನೋಡಿಕೊಳ್ಳುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಡ್ಡಿ ಮುರಿದಂತೆ ಕಾಂಗ್ರೆಸ್ಗೆ ಸಂದೇಶ ರವಾನಿಸಿದ್ದಾರೆ.
ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ನಿವಾಸಕ್ಕೆ ಆಗಮಿಸಿ ಮಾತನಾಡಿದ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕರ ವರ್ತನೆ ಬಗ್ಗೆಯೇ ತೀವ್ರ ಅಸಮಾಧಾನ ಹೊರಹಾಕಿದ ದೇವೇಗೌಡರು, ಪರಿಸ್ಥಿತಿ ಕೈ ಮೀರುವವರೆಗೂ ಎಲ್ಲರೂ ಮೌನ ವಹಿಸಿದ್ದು ಯಾಕೆ ಎಂದು ಪ್ರಶ್ನಿಸಿದರು ಎಂದು ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಮನೆಗೆ ಬಂದವರು ನೀವು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೇಬೇಕು ಎಂದು ಪಟ್ಟು ಹಿಡಿದವರು ನೀವು, ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಘೋಷಿಸಿದವರೂ ನೀವು. ಆ ನಂತರ ಏನೆಲ್ಲಾ ಬೆಳವಣಿಗೆಯಾಯಿತು. ಎಲ್ಲವನ್ನು ಸೋನಿಯಾಗಾಂಧಿ ಹಾಗೂ ರಾಹುಲ್ಗಾಂಧಿಯವರಿಗೂ ಸಮಗ್ರವಾಗಿ ವಿವರಿಸಿದ್ದೇನೆ. ಉಳಿದದ್ದು ನಿಮ್ಮ ಕೈಯಲ್ಲೇ ಇದೆ ಎಂದು ಹೇಳಿದರು ಎನ್ನಲಾಗಿದೆ.
ರಾಜೀನಾಮೆ ಕೊಟ್ಟವರು ಯಾರು?: ಎಸ್.ಟಿ. ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಅವರು ಯಾರ ಬೆಂಬಲಿಗರು? ಅವರು ರಾಜೀನಾಮೆ ಯಾಕೆ ಕೊಟ್ಟರು? ಇದೆಲ್ಲವೂ ಪೂರ್ವನಿಯೋಜಿತವೇ? ಮುಖ್ಯಮಂತ್ರಿಯವರು ಅಮೆರಿಕಕ್ಕೆ ಹೋಗಿರುವಾಗಲೇ ಹೀಗೆ ನಡೆಯಲು ಕಾರಣವಾದರೂ ಏನು ಎಂದು ಪ್ರಶ್ನಿಸಿದರು ಎಂದು ಹೇಳಲಾಗಿದೆ.
ರಾಮಲಿಂಗಾರೆಡ್ಡಿ ಹಾಗೂ ನಗರದ ಮೂವರು ಶಾಸಕರ ಜತೆ ನಡೆದ ಸಮಾಲೋಚನೆಯ ವಿವರಗಳನ್ನು ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರು ದೇವೇಗೌಡರಿಗೆ ನೀಡಿದರು. ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮದೇನೂ ಅಭ್ಯಂತರವಿಲ್ಲ. ಆದರೆ, ಪದೇ ಪದೆ ಇಂತಹ ಡ್ರಾಮಾ ನಡೆದರೆ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತಾ? ರೈತರ ಸಾಲ ಮನ್ನಾ ಸೇರಿ ಎಷ್ಟೆಲ್ಲಾ ಕಾರ್ಯಕ್ರಮ ಕೊಟ್ಟರೂ ವ್ಯರ್ಥವಾದಂತಾಗಿಲ್ಲವೇ? ಎಂದು ಬೇಸರ ವ್ಯಕ್ತಪಡಿ ಸಿದರು ಎಂದು ತಿಳಿದು ಬಂದಿದೆ.
ಸಿಎಂ ಬದಲಾವಣೆ ಮಾತು: ಅತೃಪ್ತ ಶಾಸಕರ ಬೇಡಿಕೆ ವಿಚಾರ ಪ್ರಸ್ತಾಪ ಸಂದರ್ಭದಲ್ಲಿ ಕೆಲವು ನಾಯಕತ್ವ ಬದಲಾವಣೆ ಬಯಸುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ, ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು. ಅದಕ್ಕೆ ದೇವೇಗೌಡರು, ಅದೆಲ್ಲಾ ಮಾತುಗಳು ಈಗ ಅಪ್ರಸ್ತುತ. ಸದ್ಯಕ್ಕೆ ಸರ್ಕಾರ ಉಳಿಯಬೇಕಾ? ಬೇಡವಾ? ಎಂಬುದರ ಬಗ್ಗೆ ಗಮನಹರಿಸಿ. ಹೈಕಮಾಂಡ್ ಜತೆ ಚರ್ಚಿಸಿ, ನಾಯಕತ್ವ ಬದಲಾವಣೆ ವಿಚಾರ ದೆಹಲಿಯಲ್ಲಿ ಸಮ್ಮಿಶ್ರ ಸರ್ಕಾರ ಒಪ್ಪಂದವಾದ ಸಂದರ್ಭದಲ್ಲಿ ಆಗಲಿಲ್ಲ. ತೀರಾ ಅನಿವಾರ್ಯವಾದರೆ ಆಮೇಲೆ ನೋಡೋಣ ಎಂದು ಹೇಳಿದರು. ನಂತರ ಅಲ್ಲಿಂದಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ದೇವೇಗೌಡರು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದರು ಎಂದು ತಿಳಿದು ಬಂದಿದೆ. ಆದರೆ, ಈ ಕುರಿತು ಮಾಧ್ಯಮದವರಿಗೆ ದೇವೇಗೌಡರು ಪ್ರತಿಕ್ರಿಯಿಸಿ, ಎಲ್ಲಾ ನಿಮ್ಮ ಊಹಾಪೋಹ. ಸಿದ್ದರಾಮಯ್ಯ ಅವರ ಬಗ್ಗೆಯಾಗಲಿ, ಖರ್ಗೆಯವರ ಬಗ್ಗೆಯಾಗಲಿ ನಾವು ಮಾತನಾಡಲೇ ಇಲ್ಲ ಎಂದು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ