ಕೋವಿಡ್‌ 19 ವಿರುದ್ಧ ಸಮರಕ್ಕೆ ಎಲ್ಲ ಕೈಜೋಡಿಸೋಣ: ಡಿ.ವಿ.ಸದಾನಂದಗೌಡ


Team Udayavani, Mar 21, 2020, 10:03 PM IST

ಕೋವಿಡ್‌ 19 ವಿರುದ್ಧ ಸಮರಕ್ಕೆ ಎಲ್ಲ ಕೈಜೋಡಿಸೋಣ: ಡಿ.ವಿ.ಸದಾನಂದಗೌಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ಸ್ವಯಂಪ್ರೇರಿತರಾಗಿ ಜನತಾ ಕರ್ಫ್ಯೂ ಆಚರಿಸಲು ಕರೆ ನೀಡಿದ್ದು, ಅದಕ್ಕೆ ನಾವೆಲ್ಲಾ ಸ್ಪಂದಿಸಿ ದೃಢ ಸಂಕಲ್ಪ ಮಾಡೋಣ. ಇದು ಕೋವಿಡ್‌ 19 ರೋಗ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಪುಟ್ಟ ಹೆಜ್ಜೆಯಾಗಿದ್ದು, ದೇಶದ ಹಿತಕ್ಕೆ ಸಣ್ಣ ಸಹಯೋಗ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಡಿ.ವಿ.ಸದಾನಂದಗೌಡ, ಕೋವಿಡ್‌ 19 ರೋಗ ತಡೆಗಟ್ಟಲು ವೈದ್ಯರು, ಅರೆವೈದ್ಯ ಸಿಬ್ಬಂದಿ, ವೈಮಾನಿಕ, ಸಾರಿಗೆ ಸಿಬ್ಬಂದಿ, ಪೊಲೀಸರು, ಯೋಧರು, ಸರ್ಕಾರಿ, ಅರೆ ಸರ್ಕಾರಿ ನೌಕರರು, ಮಾಧ್ಯಮದವರು… ಹೀಗೆ ಲಕ್ಷಾಂತರ ಮಂದಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಹಾಗಾಗಿ ಭಾನುವಾರ ಸಂಜೆ 5 ಗಂಟೆಗೆ ನಾವೆಲ್ಲಾ ಮನೆಯಿಂದಲೇ ಅವರಿಗೆ 5 ನಿಮಿಷ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸೋಣ ಎಂದು ಪ್ರಧಾನಿಯವರು ಹೇಳಿದ್ದಾರೆ. ಕೋವಿಡ್‌ 19 ರೋಗವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವುದನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ನಮ್ಮ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಕೋವಿಡ್‌ 19 ಮಾರಿ ವಿರುದ್ಧ ಸಮರ ಸಾರಲಾಗಿದೆ ಎಂದು ತಿಳಿಸಿದ್ದಾರೆ.

ಈ ಸೂಕ್ಷ್ಮ ಸಂದರ್ಭದಲ್ಲಿ ನಮ್ಮ ಜವಾಬ್ದಾರಿ ಹೆಚ್ಚು ಇದೆ. ಈ ರೋಗಕ್ಕೆ ಈವರೆಗೆ ಯಾವುದೇ ಲಸಿಕೆ ಅಭಿವೃದ್ಧಿಯಾಗದ ಕಾರಣ ರೋಗ ಬರದಂತೆ ನೋಡಿಕೊಳ್ಳುವುದೇ ಪರಿಹಾರ. ಸ್ವಲ್ಪ ಕಾಲ ನಮ್ಮ ಸಾಮಾಜಿಕ ಬದುಕು, ಓಡಾಟವನ್ನು ಕಡಿಮೆ ಮಾಡಬೇಕಿದೆ. ನಾಗರಿಕರ ಸಹಕಾರ ಅಗತ್ಯವಾಗಿದೆ. ಹಿರಿಯ ನಾಗರಿಕರು ನಿಯಮಿತ ಆರೋಗ್ಯ ಪರೀಕ್ಷೆಯನ್ನು ಸ್ವಲ್ಪ ಕಾಲ ಮುಂಡಬೇಕು. ಹೊರಗೆ ಹೆಚ್ಚು ಓಡಾಡಬಾರದು. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಿಗೆ ಸೋಂಕು ತಗುಲಿದರೆ ಚೇತರಿಕೆ ಕಷ್ಟ. ನಮ್ಮ ಸಂಕಲ್ಪ, ಸಂಯಮ ನಮ್ಮನ್ನು ಮಾತ್ರವಲ್ಲದೆ ನಮ್ಮ ಬಂಧುಗಳು, ಸಮಾಜ, ದೇಶವನ್ನು ಕಾಪಾಡಬಲ್ಲದು. ಯಾರೂ ಭಯಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ವಹಿಸಬೇಕು. ಕೊರೊನಾ ರೋಗದ ಲಕ್ಷಣ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಇಲ್ಲವೇ ಸಹಾಯವಾಣಿ (11-  23978036) ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.

ದಿನಸಿ, ಹಾಲು, ಹಣ್ಣು- ಹಂಪಲು, ಔಷಧ, ಇಂಧನ ಇತರೆ ಜೀವನಾವಶ್ಯಕ ಎಲ್ಲ ವಸ್ತುಗಳ ಪೂರೈಕೆ ಎಂದಿನಂತಿರುತ್ತದೆ. ಹಾಗಾಗಿ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಆತಂಕದಿಂದ ಅನಗತ್ಯವಾಗಿ ವಸ್ತುಗಳ ಖರೀದಿ, ದಾಸ್ತಾನು ಮಾಡಬಾರದು.

ವಿಶ್ವವ್ಯಾಪಿಯಾಗುತ್ತಿರುವ ಕೋವಿಡ್‌ 19 ರೋಗ ಭಾರತದ ಮೇಲೂ ಆರ್ಥಿಕ ದುಷ್ಪರಿಣಾಮ ಬೀರಬಹುದು. ಇದನ್ನು ಸಮರ್ಥವಾಗಿ ಎದುರಿಸಲು ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಉನ್ನತಾಧಿಕಾರ ಕಾರ್ಯದಳ ರಚಿಸಿದ್ದಾರೆ. ಎಲ್ಲರೂ ಪ್ರಧಾನಿ ಮೋದಿಯವರೊಂದಿಗೆ ಕೈಜೋಡಿಸಿ ಈ ಸವಾಲನ್ನು ಗೆಲ್ಲೋಣ ಎಂದು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.