ಡಿಕೆಶಿ ತಪ್ಪು ಮಾಡಿದ್ರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ
Team Udayavani, Sep 4, 2019, 11:07 AM IST
ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ತಪ್ಪು ಮಾಡಿದ್ರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಸಮನ್ಸ್ ಕೊಟ್ಟು ಅಟೆಂಡ್ ಆಗದೇ ಹೋದರೆ ದಸ್ತಗಿರಿ ಮಾಡಲಿ. ಆದರೆ ಕರೆದಾಗೆಲ್ಲ ವಿಚಾರಣೆಗೆ ಹೋಗಿದ್ಧಾರೆ. ಹಬ್ಬದ ದಿನವೂ ಬಿಟ್ಟಿಲ್ಲ. ಇದು ಕಾನೂನು ಬಾಹಿರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಯಾರೋ ಕೊಲೆ ಮಾಡಿದ್ರೆ, ದರೋಡೆ ಮಾಡಿದ್ರೆ, ಸಾಕ್ಷಿಗಳನ್ನು ನಾಶ ಮಾಡಿದ್ರೆ ಅಂಥವರನ್ನು ದಸ್ತಗಿರಿ ಮಾಡಬೇಕು. ಆದರೆ ಇದು ರಾಜಕೀಯ ಪ್ರೆರಿತ, ದ್ವೇಷದಿಂದ ಕೂಡಿದೆ. ಸಂಪೂರ್ಣ ರಾಜಕೀಯ ಸೇಡಿನ ಕ್ರಮ. ಇದನ್ನು ಕಾಂಗ್ರೆಸ್ ಪಕ್ಷ ಸಹಿಸೋದಿಲ್ಲ. ಪಕ್ಷದ ವತಿಯಿಂದ ಹೋರಾಟ ಮಾಡ್ತೇವೆ. ನಾವೆಲ್ಲ ಡಿಕೆಶಿ ಜೊತೆಗಿದ್ದೇವೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ.