ಮದ್ಯ ಮಾರಾಟ: ದೆಹಲಿ ಮಾದರಿಯಲ್ಲಿ ಸೆಸ್‌ ಹೆಚ್ಚಳಕ್ಕೆ ಡಿಕೆಶಿ ಸಲಹೆ


Team Udayavani, May 5, 2020, 8:24 PM IST

ಮದ್ಯ ಮಾರಾಟ: ದೆಹಲಿ ಮಾದರಿಯಲ್ಲಿ ಸೆಸ್‌ ಹೆಚ್ಚಳಕ್ಕೆ ಡಿಕೆಶಿ ಸಲಹೆ

ಬೆಂಗಳೂರು: ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ದೆಹಲಿ ಮಾದರಿಯಲ್ಲಿ ಕೋವಿಡ್‌-19 ಸೆಸ್‌ ಹಾಕಿದರೆ ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಮದ್ಯ ಮಾರಾಟ ಆರಂಭವಾಗಿದೆ. ಒಂದೇ ದಿನ ಕರ್ನಾಟಕ ಅಬಕಾರಿ ಇಲಾಖೆಗೂ 45 ಕೋಟಿ ರೂಪಾಯಿ ಹಣ ಹರಿದು ಬಂದಿದೆ.

ಬಜೆಟ್‌ ನಲ್ಲಿ ಅಬಕಾರಿ ಹೆಚ್ಚಳ ತೆರಿಗೆ ಮಾಡಿದ್ದು, ಮಂಗಳವಾರದಿಂದ ರಾಜ್ಯದಲ್ಲಿ ಹೊಸ ದರ ಜಾರಿಯಾಗಲಿದೆ. ಸೋಮವಾರ ಖರೀದಿ ಮಾಡಿದ್ದ ದರಕ್ಕಿಂತ ಶೇಕಡ 6ರಷ್ಟು ಹೆಚ್ಚಳವಾಗಿದೆ. 2020ನೇ ಸಾಲಿನಲ್ಲಿ 20,950 ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಈ ಬಾರಿಯ ಹಣಕಾಸು ವರ್ಷದಲ್ಲಿ 25 ಸಾವಿರ ಕೋಟಿ ರೂಪಾಯಿ ಆದಾಯ ಸಂಗ್ರಹ ಗುರಿಯನ್ನು ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ನೀಡಿದೆ.

ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರ ದೆಹಲಿ ಮಾದರಿಯಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ವಿಧಿಸಿದರೆ ಅನುಕೂಲ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದೆಹಲಿ ಸರ್ಕಾರ ಆರ್ಥಿಕ ನಷ್ಟ ಸರಿದೂಗಿಲು ಮದ್ಯ ಮಾರಾಟದ ಮೇಲೆ 70 ಪರ್ಸೆಂಟ್ ವಿಶೇಷ ಕೋವಿಡ್‌-19 ಸೆಸ್‌ ಹಾಕಿದೆ. ಅಂದರೆ 1 ಸಾವಿರ ರೂಪಾಯಿ ಮದ್ಯದ ಬಾಟೆಲ್‌ ಬೆಲೆ ಇಂದಿನಿಂದ 1,700 ಆಗಲಿದೆ. ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಎನ್ನುವ ಕಾರಣಕ್ಕೆ ಎಲ್ಲಾ ಅಭಿವೃದ್ಧಿ ಕೆಲಸಗಳನ್ನೂ ಕೂಡಲೇ ಸ್ಥಗಿತ ಮಾಡಿ ಎಂದು ಸರ್ಕಾರವೇ ನಿರ್ದೇಶನ ಮಾಡಿದೆ. ಪರಿಸ್ಥಿತಿ ಹೀಗಿರುವಾಗ ಮದ್ಯ ಮಾರಾಟ ಮಾಡುವುದು ಬೇಡ ಎಂಬ ಕೂಡ ರಾಜ್ಯಾದ್ಯಂತ ಕೇಳಿ ಬರುತ್ತಿದೆ. ಇದೀಗ ದೆಹಲಿ ಮಾದರಿಯಲ್ಲಿ ವಿಶೇಷ ಕೋವಿಡ್‌-19 ಸೆಸ್‌ ಹಾಕಿದರೆ, ಮದ್ಯ ಕುಡಿಯಲೇ ಬೇಕು ಎನ್ನುವ ಹಣವಂತರು ಹೆಚ್ಚಿನ ದರ ಕೊಟ್ಟು ಮದ್ಯಪಾನ ಮಾಡಲಿ, ಅಗರ್ಭ ಶ್ರೀಮಂತರು ಹೆಚ್ಚು ಹಣ ಕೊಟ್ಟರೆ ಯಾವುದೇ ನಷ್ಟವಿಲ್ಲ. ಸರ್ಕಾರದ ಬೊಕ್ಕಸಕ್ಕೂ ವಿಪರೀತ ಪ್ರಮಾಣದಲ್ಲಿ ಹಣ ಹರಿದು ಬರಲಿದ್ದು, ಬರಿದಾಗಿರುವ ಖಜಾನೆ ಭರ್ತಿ ಮಾಡುವುದಕ್ಕೂ ಅನುಕೂಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಕೂಡ ದೆಹಲಿ ಮಾದರಿಯಲ್ಲಿ ಸೆಸ್‌ ಹಾಕಲು ಮುಂದಾದರೆ ಬಡವರು ಮದ್ಯ ಕುಡಿಯುವುದು ತಪ್ಪಲಿದೆ. ಜೊತೆಗೆ ಸರ್ಕಾರದ ಖಜಾನೆಯೂ ಭರ್ತಿಯಾಗಲಿದೆ. ಈ ಬಗ್ಗೆ ಚಿಂತನೆ ಮಾಡಬೇಕಾದ ಅಗತ್ಯ ಕೂಡ ಹೆಚ್ಚಾಗಿದೆ ಎಂದು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.