ಲೋಕಲ್‌ ಚುನಾವಣೆಗೆ ಮುಹೂರ್ತ

ಲೋಕ ಸಮರ ಮುಗಿದ ಬೆನ್ನಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

Team Udayavani, May 3, 2019, 6:00 AM IST

Ban03051901

ಬೆಂಗಳೂರು: ರಾಜ್ಯದಲ್ಲಿ ‘ಲೋಕ’ ಸಮರ ಮುಗಿದ ಬೆನ್ನಲ್ಲೇ ‘ಲೋಕಲ್’ ಸಮರಕ್ಕೆ ಮುಹೂರ್ತ ನಿಗದಿಯಾಗಿದ್ದು, ಎರಡನೇ ಹಂತದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ.

ಅದರಂತೆ, ರಾಜ್ಯದ 22 ಜಿಲ್ಲೆಗಳಲ್ಲಿ 8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 63 ನಗರ ಸ್ಥಳೀಯ ಸಂಸ್ಥೆಗಳ 1,361 ವಾರ್ಡ್‌ಗಳಲ್ಲಿ ಮೇ 29ರಂದು ಮತದಾನ ನಡೆಯಲಿದ್ದು, ಮೇ 9ರಂದು ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಚುನಾವಣೆ ಘೋಷಣೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಕ್ಷಣದಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

ಇದೇ ವೇಳೆ ಬಿಬಿಎಂಪಿಯ ಎರಡು ವಾರ್ಡ್‌, ತುಮಕೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆ, ಬೆಳಗಾವಿಯ ಜಿಲ್ಲೆಯ ಸದಲಗಾ ಪುರಸಭೆ ಮತ್ತು ಮುಗಳಖೋಡ ಪುರಸಭೆಯ ಒಂದೊಂದು ವಾರ್ಡ್‌ಗೆ ಉಪ ಚುನಾವಣೆ ನಡೆಯಲಿದೆ.

ಅಲ್ಲದೇ ವಿವಿಧ ಕಾರಣಗಳಿಂದಾಗಿ ತೆರವಾಗಿರುವ ರಾಜ್ಯದ 8 ತಾಲೂಕು ಪಂಚಾಯಿತಿಗಳ 10 ಕ್ಷೇತ್ರಗಳ ಸದಸ್ಯ ಸ್ಥಾನಗಳು ಹಾಗೂ ಗ್ರಾಮ ಪಂಚಾಯಿತಿಗಳ 202 ಸದಸ್ಯ ಸ್ಥಾನಗಳ ಉಪ ಚುನಾವಣೆಗೂ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈ ಉಪ ಚುನಾವಣೆಗಳಿಗೆ ಮೇ 29ರಂದು ಮತದಾನ ನಡೆಯಲಿದ್ದು, ಜಿಲ್ಲಾಧಿಕಾರಿಗಳು ಮೇ 13ಕ್ಕೆ ಅಧಿಸೂಚನೆ ಹೊರಡಿಸಲಿದ್ದಾರೆ. ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ ಉಪ ಚುನಾವಣೆಯ ಮತ ಎಣಿಕೆ ಮೇ 31ರಂದು ನಡೆಯಲಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟ ಸಂಬಂಧ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್‌. ಶ್ರೀನಿವಾಸಾಚಾರಿ ಈ ಮಾಹಿತಿ ನೀಡಿದರು.

ರಾಜ್ಯ ಚುನಾವಣಾ ಆಯೋಗವು 2018ರ ಸೆಪ್ಟಂಬರ್‌ವರೆಗೆ ಅವಧಿ ಮುಕ್ತಾಯವಾಗುವ ಒಟ್ಟು 109 ನಗರ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದಲ್ಲಿ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆಸಿತ್ತು. ಈಗ 2019ರ ಮಾರ್ಚ್‌ರಿಂದ ಜುಲೈವರೆಗೆ ಅವಧಿ ಮುಕ್ತಾಯವಾಗುವ ಒಟ್ಟು 103 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಬೆಂಗಳೂರು, ಧಾರವಾಡ, ಕಲಬುರಗಿ ಹೈಕೋರ್ಟ್‌ ಪೀಠಗಳಲ್ಲಿ ವ್ಯಾಜ್ಯಗಳಿರುವ 39 ನಗರ ಸ್ಥಳೀಯ ಸಂಸ್ಥೆಗಳನ್ನು ಹೊರತುಪಡಿಸಿ, ಉಳಿದ 63 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಕ್ಷಣದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಮೇ 31ರವರೆಗೆ ಅದು ಇರುತ್ತದೆ ಎಂದು ಆಯುಕ್ತರು ತಿಳಿಸಿದರು.

22 ಜಿಲ್ಲೆಗಳಲ್ಲಿ ಚುನಾವಣೆ: ಉಡುಪಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆಸಲಾಗಿದೆ. ರಾಮನಗರ, ಕೊಡಗು, ಬೆಳಗಾವಿ, ಕಲಬುರಗಿ ಜಿಲ್ಲೆಯ ಚುನಾವಣೆ ನಡೆಸಲು ಬಾಕಿ ಇರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಹೈಕೋರ್ಟ್‌ನಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಎರಡನೇ ಹಂತದಲ್ಲಿ ಚುನಾವಣೆ ಇರುವುದಿಲ್ಲ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಚಾಮರಾಜನಗರ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬೀದರ್‌, ಬಳ್ಳಾರಿ, ಯಾದಗಿರಿ ಸೇರಿ 22 ಜಿಲ್ಲೆಗಳಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಕುಂದಗೋಳದಲ್ಲಿ ‘ಲೋಕಲ್’ ಚುನಾವಣೆ ಇಲ್ಲ: ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿರುವುದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಕುಂದುಗೋಳ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಸಲಾಗುತ್ತಿಲ್ಲ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಈ ಕ್ಷೇತ್ರದ ಶಾಸಕರಾಗಿದ್ದ ಸಿ.ಎಸ್‌. ಶಿವಳ್ಳಿ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದ್ದು, ಮೇ 19ರಂದು ಮತದಾನ ನಡೆಯಲಿದೆ.

14.74 ಲಕ್ಷ ಮತದಾರರು: ಚುನಾವಣೆಯ ನಡೆಯಲಿರುವ 63 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 8 ನಗರಸಭೆಗಳ 248, 33 ಪುರಸಭೆಗಳ 783 ಹಾಗೂ 22 ಪಟ್ಟಣ ಪಂಚಾಯಿತಿಗಳ 330 ವಾರ್ಡ್‌ಗಳು ಸೇರಿ ಒಟ್ಟು 1,361 ವಾರ್ಡ್‌ಗಳಲ್ಲಿ 7.47 ಲಕ್ಷ ಪುರುಷರು, 7.36 ಲಕ್ಷ ಮಹಿಳೆಯರು, 181 ಇತರರು ಸೇರಿ ಒಟ್ಟು 14.74 ಲಕ್ಷ ಮತದಾರರು ಇದ್ದಾರೆ. 1,646 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 1,998 ಬ್ಯಾಲೆಟ್ ಯೂನಿಟ್, 1,998 ಕಂಟ್ರೋಲ್ ಯೂನಿಟ್‌ಗಳನ್ನು ಬಳಸಲಾಗುತ್ತಿದೆ. ಚುನಾವಣಾ ಕರ್ತವ್ಯಕ್ಕೆ 8,230 ಮತಗಟ್ಟೆ ಸಿಬ್ಬಂದಿ ನಿಯೋಜಿಸಿಕೊಳ್ಳಲಾಗಿದೆ.

ಅಭ್ಯರ್ಥಿಗಳ ಘೋಷಣಾ ಪತ್ರ: ಮತದಾರನಿಗೆ ಅಭ್ಯರ್ಥಿಯ ಪೂರ್ವಾಪರ ತಿಳಿದುಕೊಳ್ಳಲು ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಯು ನಾಮಪತ್ರದೊಂದಿಗೆ ತನ್ನ ಹಿನ್ನೆಲೆ, ಚರಾಸ್ತಿ, ಸ್ಥಿರಾಸ್ತಿಗಳ ವಿವರ, ತನ್ನ ಸ್ವವಿವರ, ವಿದ್ಯಾರ್ಹತೆ, ಆದಾಯದ ಮೂಲಗಳಗಳನ್ನು ಪರಿಷ್ಕೃತ ನಮೂನೆಯಲ್ಲಿ ಘೋಷಣಾ ಪತ್ರ/ಪ್ರಮಾಣಪತ್ರ ಸಲ್ಲಿಸಬೇಕು. ಇದರ ಜೊತೆಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಂದೇ ವಾರ್ಡ್‌ ನಲ್ಲಿ ಒಂದೇ ಹೆಸರಿನ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸುವ ಸಂದರ್ಭಗಳಿರು ವುದರಿಂದ ಅಭ್ಯರ್ಥಿಗಳನ್ನು ಗುರುತಿಸಲು ಮತಪತ್ರದಲ್ಲಿ ಅವರ ಹೆಸರಿನ ಮುಂದೆ ಅವರ ವೃತ್ತಿ ಅಥವಾ ವಿಳಾಸ ನಮೂದಿಸಲಾಗುತ್ತಿತ್ತು. ಆದಾಗ್ಯೂ ಮತದಾರನಿಗೆ ಗೊಂದಲ ಉಂಟಾಗುವುದನ್ನು ತಪ್ಪಿಸಲು ಮತಪತ್ರದಲ್ಲಿ ಎಲ್ಲ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಇತ್ತಿಚಿನ ಭಾವಚಿತ್ರ ಮುದ್ರಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ಮತಯಂತ್ರದಲ್ಲಿ ‘ನೋಟಾ’ ಅವಕಾಶವೂ ಇರಲಿದೆ.

ವೆಚ್ಚದ ಮಿತಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳ ಚುನಾವಣಾ ಗರಿಷ್ಠ ವೆಚ್ಚದ ಮಿತಿಯನ್ನು ನಿಗದಿಪಡಿಸಿ 2011ರಲ್ಲಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅದರಂತೆ ನಗರಸಭೆಗೆ ಗರಿಷ್ಠ 2 ಲಕ್ಷ, ಪುರಸಭೆಗೆ 1.50 ಲಕ್ಷ ಹಾಗೂ ಪಟ್ಟಣ ಪಂಚಾಯಿತಿಗೆ 1 ಲಕ್ಷ ರೂ. ಚುನಾವಣಾ ವೆಚ್ಚದ ಗರಿಷ್ಠ ಮಿತಿ ಇರಲಿದೆ.

ಚುನಾವಣೆ ನಡೆಯಲಿರುವ ಸ್ಥಳೀಯ ಸಂಸ್ಥೆಗಳು
8 ನಗರಸಭೆ: ಹಿರಿಯೂರು, ಹರಿಹರ, ಶಿಡ್ಲಘಟ್ಟ, ಸಾಗರ, ತಿಪಟೂರು, ನಂಜನಗೂಡು, ಬಸವಕಲ್ಯಾಣ, ಶಹಾಪುರ.
33 ಪುರಸಭೆ: ಆನೇಕಲ್, ದೇವನಹಳ್ಳಿ, ನೆಲಮಂಗಲ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಶಿಕಾರಿಪುರ, ಪಾವಗಡ, ಕುಣಿಗಲ್, ಕೆ.ಆರ್‌. ನಗರ, ಬನ್ನೂರು, ಕಡೂರು, ಮೂಡಬಿದಿರೆ, ಮಳವಳ್ಳಿ, ಕೆ.ಆರ್‌. ಪೇಟೆ, ಶ್ರೀರಂಗಪಟ್ಟಣ, ಗುಂಡ್ಲುಪೇಟೆ, ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಬ್ಯಾಡಗಿ, ಶಿಗ್ಗಾಂವ, ಭಟ್ಕಳ, ಭಾಲ್ಕಿ, ಹುಮ್ನಾಬಾದ್‌, ಚಿಟಗುಪ್ಪ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ.
22 ಪಟ್ಟಣ ಪಂಚಾಯಿತಿ: ಮೊಳಕಾಲ್ಮೂರು, ಹೊಳಲ್ಕೆರೆ, ಶಿರಾಳಕೊಪ್ಪ, ಸೊರಬ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಯಳಂದೂರು, ಹನೂರು, ಕಲಘಟಗಿ, ಅಳ್ನಾವರ, ಹೊನ್ನಾವರ, ಸಿದ್ದಾಪುರ, ಔರಾದ್‌, ಕಮಲಾಪುರ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.