ಔಟಿಂಗ್‌ ಹೊರಟರೆ ಜೋಕೆ!

ಏ.18, 23ಕ್ಕೆ ಪ್ರವಾಸ ಹೋದರೆ ರೂಂ ಇಲ್ಲ; ಡೀಸಿಗಳ ಫ‌ರ್ಮಾನು

Team Udayavani, Apr 2, 2019, 6:00 AM IST

VOTE

ಬೆಂಗಳೂರು: ಓಟಿಂಗ್‌ಗೆ ಚಕ್ಕರ್‌ ಹೊಡೆದು ಔಟಿಂಗ್‌ ಹೊರಟರೆ ಜೋಕೆ! ಏಕೆಂದರೆ, ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿರುವ ಏ.18 ಮತ್ತು 23ರಂದು ಪ್ರವಾಸಿ ತಾಣಗಳ ವಸತಿ ಗೃಹಗಳು, ಹೋಟೆಲ್‌, ರೆಸಾರ್ಟ್‌, ಹೋಮ್‌ಸ್ಟೇಗಳಲ್ಲಿ ಅಂದು ಮತದಾನ ಮಾಡದೆ ಮೋಜು ಮಾಡಲು ಬರುವವರಿಗೆ ಕೊಠಡಿ ನೀಡದಂತೆ ಹಲವು ಜಿಲ್ಲಾಧಿಕಾರಿಗಳು ಫ‌ರ್ಮಾನು ಹೊರಡಿಸಿದ್ದಾರೆ.
ಚುನಾವಣೆ ದಿನ ಮತದಾನ ಮಾಡದೇ ಸಿಕ್ಕಿರುವ ಸಾಲು ಸಾಲು ರಜೆಗಳನ್ನು ಕಳೆಯಲು ಪ್ರವಾಸ ಬಂದಿರುವವರಿಗೆ ವಸತಿ ಸೌಲಭ್ಯ ನೀಡದಂತೆ ಕ್ರಮವಹಿಸಲು ರಾಜ್ಯದ ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲಾ ಚುನಾವಣಾಧಿಕಾರಿಗಳು ಮನವಿ ಮಾಡುವ ಜತೆಗೆ ಒತ್ತಾಯಿಸುತ್ತಿದ್ದಾರೆ.

ಸರ್ಕಾರಿ ರಜಾ ದಿನಗಳು ಹಾಗೂ ವಾರಾಂತ್ಯದ ನಡುವೆಯೇ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್‌ 17ರಂದು ಮಹಾವೀರ ಜಯಂತಿ, ಏಪ್ರಿಲ್‌ 18ರಂದು ಗುಡ್‌ಫ್ರೈಡೇ, ಏಪ್ರಿಲ್‌ 20 ಶನಿವಾರದ ರಜೆ ಇರಲಿದ್ದು, 21ರಂದು ಭಾನುವಾರ ಇದೆ. ಈ ರಜೆಗಳ ನಡುವೆ, ಏಪ್ರಿಲ್‌ 18ರಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಇನ್ನು 2ನೇ ಹಂತದ ಮತದಾನಕ್ಕೆ ಏಪ್ರಿಲ್‌ 18 ಹಾಗೂ ಏಪ್ರಿಲ್‌ 22ರಂದು 2 ದಿನಗಳ ರಜೆ ಪಡೆದರೆ ಸತತ ಸತತ 5 ದಿನ ರಜೆ ಪಡೆದಂತಾಗುತ್ತದೆ.

ರಜಾ ಮಜಾ ಅನುಭವಿಸುವವರು ಮತಗಟ್ಟೆಗೆ ಬಾರದೇ ಹೋದರೆ ಮತದಾನದ ಪ್ರಮಾಣದ ಮೇಲೆ ನೇರ ಪರಿಣಾಮವಾಗುವ ಸಾಧ್ಯತೆ ಇದೆ. ಇದನ್ನು ಅರಿತ ಹಲವು ಜಿಲ್ಲೆಗಳ ಚುನಾವಣಾಧಿಕಾರಿಗಳು ಮತದಾರರ ಪ್ರವಾಸಕ್ಕೆ ಬ್ರೇಕ್‌ ಹಾಕಲು ಈ ರೀತಿ ಕ್ರಮಕೈಗೊಂಡಿದ್ದಾರೆ.

ಈ ಬಗ್ಗೆ ಉದಯವಾಣಿ ಜತೆ ಮಾತನಾಡಿದ ರಾಜ್ಯದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ. ಕೆ.ಜಿ. ಜಗದೀಶ್‌, “ಮತದಾನ ನಡೆಯುವ ಏ.18 ಹಾಗೂ 23ರಂದು ಜಿಲ್ಲೆಯ ಪ್ರವಾಸಿ ತಾಣಗಳ ಸೇರಿದಂತೆ ಇತರೆ ಹೋಟೆಲ್‌ ಹಾಗೂ ವಸತಿ ನಿಲಯಗಳಲ್ಲಿ ಕೊಠಡಿ ಕಾಯ್ದಿರಿಸಿಕೊಳ್ಳದಂತೆ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ,’ ಎಂದಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳ ಚುನಾವಣಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಇದರ ಜತೆಗೆ ವಿವಿಧ ಜಿಲ್ಲಾಗಳಲ್ಲಿ ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ತಂಡವು (ಸ್ವೀಪ್‌) ಸ್ಥಳೀಯ ಸುತ್ತಮುತ್ತ ಪ್ರವಾಸಿ ತಾಣಗಳ ವಸತಿ ಗೃಹಗಳು, ಹೋಟೆಲ್‌, ರೆಸಾರ್ಟ್‌, ಹೋಮ್‌ ಸ್ಟೇಗಳ ಮಾಲೀಕರ ಸಭೆ ಕರೆದು ಮತದಾನ ಮಾಡದೇ ಬಂದಿರುವವರಿಗೆ ರೂಂ ಅಥವಾ ವಸತಿ ಅವಕಾಶ ನೀಡದಂತೆ ಒತ್ತಾಯ ಮಾಡುತ್ತಿವೆ.

ವಸತಿ ಗೃಹಗಳಲ್ಲಿ ಜಾಗೃತಿ: ರಾಜ್ಯ ತೋಟಗಾರಿಕೆ ಇಲಾಖೆ ಹಾಗೂ ವನ್ಯ ಜೀವಿಧಾಮಗಳ ವ್ಯಾಪ್ತಿಗೆ ಬರುವ ಎಲ್ಲಾ ಮಾದರಿಯ ಪ್ರವಾಸಿಗರ ವಸತಿ ಗೃಹಗಳಲ್ಲಿ ಈಗಾಗಲೇ ಮತದಾನ ಜಾಗೃತಿ ಮಾಡಲಾಗುತ್ತಿದೆ. ಪ್ರವಾಸಿಗರಿಗೆ ಭಿತ್ತಿಪತ್ರ ಹಾಗೂ ಮತದಾನ ದಿನ ಪ್ರವಾಸ ಕೈಗೊಳ್ಳದೇ ಕಡ್ಡಾಯ ಮತದಾನ ಮಾಡಲು ಮನವಿ ಮಾಡುತ್ತಿದ್ದೇವೆ. ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದರೆ ಅಂದು ವಸತಿ ಗೃಹಗಳನ್ನು ಬಂದ್‌ ಮಾಡಲಾಗುವುದು ಎಂದು ತೋಟಗಾರಿಕೆ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು. ಇವುಗಳ ಜತೆಗೆ ಕರಾವಳಿ ಭಾಗಗಳ ಕೆಲವು ಹೋಟೆಲ್‌ ಹಾಗೂ ಬೀಚ್‌ ರೆಸಾರ್ಟ್‌ಗಳಲ್ಲಿ, ಜಂಗಲ್‌ ಲಾಡ್ಜ್ಗಳಲ್ಲಿಯೂ ಮತದಾನದ ಜಾಗೃತಿಯನ್ನು ಮಾಡಲಾಗುತ್ತಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಪತ್ರಿಕೆ ಜತೆ ಮಾತನಾಡಿ, “ಸರಣಿ ರಜೆಯಿಂದ ಮತದಾನದ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮತದಾನ ದಿನವಾದ ಏ.18 ಹಾಗೂ 23ರಂದು ಪ್ರವಾಸಿ ತಾಣಗಳಲ್ಲಿ ಕೊಠಡಿ ಕೋರುವ ಪ್ರವಾಸಿಗರು ಹಾಗೂ ಇತರೆಯವರಿಗೆ ಕೊಠಡಿ ಕಾಯ್ದಿರಿಸುವ ಹಾಗೂ ನೀಡುವ ಮೊದಲು ಅವರ ಗುರುತಿನ ಚೀಟಿ ಪಡೆದು ಪರಿಶೀಲನೆ ಮಾಡಬೇಕು. ಒಂದು ವೇಳೆ ಅವರು ಮತದಾನ ನಡೆಯುತ್ತಿರುವ ಕ್ಷೇತ್ರದವರಾಗಿದ್ದರೆ ಕೊಠಡಿ ನಿಡದೇ ಅಥವಾ ಕಾಯ್ದಿರಿಸದೇ ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗವಹಿಸಲು ಸೂಚಿಸಲು ನಿರ್ದೇಶಿಸಿದ್ದೇವೆ. ಜತೆಗೆ ಕೆಲ ಸಂಘಟನೆಗಳು ಮತದಾನ ಬಿಟ್ಟು ಬಂದ ಪ್ರವಾಸಿಗರ ವಿರೋಧಿಸಿ ಪ್ರತಿಭಟನೆ ಮಾಡಲು ಅವಕಾಶ ಕೋರಿ ಮನವಿ ಮಾಡಿದ್ದರು. ಅದನ್ನು ತಪ್ಪಿಸಲು ಈ ರೀತಿ ಕ್ರಮಕೈಗೊಂಡಿದ್ದೇವೆ’ ಎಂದು ಅವರು ತಿಳಿಸಿದರು.

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.