ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ! ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ


Team Udayavani, Feb 2, 2023, 7:00 AM IST

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ! ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ

ಪುತ್ತೂರು: ಪಡಿತರ ಅಂಗಡಿ ಮೂಲಕ ನೀಡಲಾಗುತ್ತಿರುವ ಅಕ್ಕಿಯೊಂದಿಗೆ ಪ್ಲಾಸ್ಟಿಕ್‌ ಅಕ್ಕಿ ಕಾಳು ಮಿಶ್ರಣವಾಗಿದೆ ಎಂಬ ವದಂತಿ ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ವಾಸ್ತವವಾಗಿ ಅದು ಪ್ಲಾಸ್ಟಿಕ್‌ ಅಕ್ಕಿ ಅಲ್ಲ, ಸಾರವರ್ಧಿತ ಅಕ್ಕಿ!

ದ.ಕ. ಜಿಲ್ಲೆಯಲ್ಲಿ ಜನವರಿಯ ಅಕ್ಕಿ ವಿತರಣೆ ಆಗುತ್ತಿದ್ದಂತೆ ಅದರಲ್ಲಿ ಕಂಡು ಬಂದಿರುವ ದೊಡ್ಡ ಗಾತ್ರದ ಬಿಳಿ ಬಣ್ಣದ ಅಕ್ಕಿಯನ್ನು ಕಂಡು ಪಡಿತರ ಅಕ್ಕಿಗೆ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ ಎಂದು ಆಹಾರ ಇಲಾಖೆ, ಗ್ರಾ.ಪಂ.ಗಳಿಗೆ ದೂರು ಹೇಳುತ್ತಿರುವ ಪ್ರಸಂಗ ಕಂಡು ಬರುತ್ತಿದೆ.

ಏನಿದು ಸಾರವರ್ಧಿತ ಅಕ್ಕಿ
ಕೇಂದ್ರ ಸರಕಾರದ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ 1 ಕೆಜಿ ಅಕ್ಕಿಗೆ ನಿಗದಿತ ಪ್ರಮಾಣದ ಸಾರವರ್ಧಿತ ಅಕ್ಕಿಯನ್ನು ಬೆರೆಸಲಾಗುತ್ತಿದೆ. ಇದರಲ್ಲಿ ಕಬ್ಬಿಣದ ಅಂಶ, ಫೋಲಿಕ್‌ ಆಮ್ಲ, ಹಾಗೂ ಬಿ ವಿಟಮಿನ್‌ ಅಂಶಗಳಿವೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಪ್ರತೀ ವ್ಯಕ್ತಿಗೆ ನೀಡುವ 10 ಕೆಜಿ ಅಕ್ಕಿಯಲ್ಲಿ 5 ಕೆಜಿ ಸಾರವರ್ಧಿತ ಮಿಶ್ರಿತ ಅಕ್ಕಿ ಹಾಗೂ 5 ಕೆಜಿ ಸಾದಾ ಅಕ್ಕಿಯನ್ನು ನೀಡುವಂತೆ ಸರಕಾರದ ಮಾರ್ಗಸೂಚಿ ಇದೆ. ಪ್ರತೀ ಫಲಾನುಭವಿಗೆ ಸಾದಾ ಅಕ್ಕಿ ಹಾಗೂ ಸಾರವರ್ಧಿತ ಅಕ್ಕಿಯನ್ನು ಪ್ರತ್ಯೇಕವಾಗಿ ನೀಡಬೇಕು ಅನ್ನುವ ನಿಯಮ ಇದೆ.

ಮಿಶ್ರಿತ ಅಕ್ಕಿ
ಪ್ರಸ್ತುತ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ನೀಡಲಾಗುತ್ತಿದೆ. ದ.ಕ.ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ವಿತರಣೆ ಪ್ರಾರಂಭವಾಗಿಲ್ಲ ಅನ್ನುವುದು ಅಧಿಕಾರಿಗಳ ಹೇಳಿಕೆ. ಆದರೆ ಕೆಲವು ಜಿಲ್ಲೆಗಳಲ್ಲಿ ಪೂರೈಕೆ ಮಾಡುವ ಅಕ್ಕಿಯಲ್ಲಿ ಸ್ವಲ್ಪ ಭಾಗವನ್ನು ದ.ಕ. ಜಿಲ್ಲೆಗೂ ಕಳುಹಿಸಿದ್ದು ಜನವರಿಯಲ್ಲಿ ವಿತರಿಸಿದ ಅಕ್ಕಿಯೊಟ್ಟಿಗೆ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ಕಳುಹಿಸಲಾಗಿದೆ. ಲಭ್ಯತೆ ಕಡಿಮೆ ಇರುವ ಕಾರಣ ಬಹುತೇಕ ಪಡಿತರ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ನೀಡದೆ ಮಿಶ್ರಣ ಮಾಡಿ ಅಕ್ಕಿಯನ್ನು ವಿತರಿಸಲಾಗಿದೆ.

ಪ್ಲಾಸ್ಟಿಕ್‌ ಅಕ್ಕಿ ಎಂಬ ಆತಂಕ!
ಸಾರವರ್ಧಿತ ಅಕ್ಕಿ ಕಾಳುಗಳು ಸಾದಾ ಅಕ್ಕಿಗಿಂತ ದೊಡ್ಡ ಗಾತ್ರದ್ದಾಗಿದೆ. ವಿಭಿನ್ನವಾದ ಬಣ್ಣ ಹೊಂದಿವೆ. ಹೀಗಾಗಿ ಇದು ಪ್ಲಾಸ್ಟಿಕ್‌ ಅಕ್ಕಿ ಎಂಬ ಶಂಕೆಯಿಂದ ಬಳಕೆದಾರರು ಎಸೆದಿದ್ದಾರೆ. ಪಡಿತರ ಕೇಂದ್ರಗಳಲ್ಲಿ ಕೂಡ ಈ ಅಕ್ಕಿಯ ಸಮರ್ಪಕ ಮಾಹಿತಿ ನೀಡುವ ಅಗತ್ಯ ಇದೆ ಎನ್ನುತ್ತಾರೆ ಫಲಾನುಭವಿಗಳು.

ಅನುಕೂಲತೆಗಳು
ಸಾರವರ್ಧಿತ ಅಕ್ಕಿಯಲ್ಲಿ ಕಬ್ಬಿಣ, ಸತು, ಫೂಲಿಕ್‌ ಆಮ್ಲ, ವಿಟಮಿನ್‌ ಎ, ಡಿ, ಬಿ6, ಬಿ12 ಮತ್ತು ಇತರೆ ಪೋಷಕಾಂಶಗಳು ಸಮ ಪ್ರಮಾಣದಲ್ಲಿ ಲಭ್ಯವಾಗುತ್ತದೆ. ಪೋಷಕಾಂಶದ ಕೊರತೆಯಿಂದ ಉಂಟಾಗುವ ಅನೀಮಿಯಾ, ರಾತ್ರಿ ಕುರುಡುತನ ರೋಗ ಲಕ್ಷಣದಿಂದ ದೂರ ಇರಬಹುದಾಗಿದೆ. ಅಪೌಷ್ಟಿಕತೆಯನ್ನು ದೂರ ಮಾಡಬಹುದು. ಹಾಗಾಗಿ ಇತರೆ ಅಕ್ಕಿಗಳ ರೀತಿಯಲ್ಲಿ ಸಾರವರ್ಧಿತ ಅಕ್ಕಿಯನ್ನು ಆಹಾರ ಪದಾರ್ಥವಾಗಿ ಬಳಸಿಕೊಳ್ಳಬಹುದು.

ಸಾರವರ್ಧಿತ ಅಕ್ಕಿಯ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ. ಸರಕಾರದ ಸೂಚನೆಯ ಪ್ರಕಾರ ಈ ಅಕ್ಕಿ ನೀಡಲಾಗುತ್ತಿದೆ. ದ.ಕ. ಜಿಲ್ಲೆ ಪಡಿತರ ಫಲಾನುಭವಿಗಳಿಗೆ ಪೂರ್ಣ ಸಾರವರ್ಧಿತ ಅಕ್ಕಿ ನೀಡುವ ಜಿಲ್ಲೆಗಳ ಪಟ್ಟಿಗೆ ಸೇರ್ಪಡೆಗೊಳ್ಳಬೇಕಷ್ಟೇ. ಮುಂದಿನ ವರ್ಷದಿಂದ ಎಲ್ಲ ಜಿಲ್ಲೆಗಳಲ್ಲಿಯು ವಿತರಿಸಲಾಗುತ್ತದೆ. ಪಡಿತರ ಕೇಂದ್ರಗಳಲ್ಲಿ ನೀಡಲಾಗುತ್ತಿರುವ ಅಕ್ಕಿಯೊಂದಿಗೆ ಪ್ಲಾಸ್ಟಿಕ್‌ ಅಕ್ಕಿ ಮಿಶ್ರಣ ಆಗಿಲ್ಲ. ಈ ಬಗ್ಗೆ ಆತಂಕ ಬೇಡ.
-ಎಚ್‌.ಆರ್‌. ವಿಜಯಕುಮಾರ್‌
ಜಂಟಿ ನಿರ್ದೇಶಕ ಸಂಗ್ರಹಣೆ ಮತ್ತು ವಿತರಣೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು

 – ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

ಉಪ್ಪಿನಂಗಡಿ: ವ್ಯಕ್ತಿಯ ಕೈಯಲ್ಲಿದ್ದ 10 ಲಕ್ಷ ರೂ. ದರೋಡೆಗೈದ ಅಪರಿಚಿತ ವ್ಯಕ್ತಿ

ಉಪ್ಪಿನಂಗಡಿ: ವ್ಯಕ್ತಿಯ ಕೈಯಲ್ಲಿದ್ದ 10 ಲಕ್ಷ ರೂ. ದರೋಡೆಗೈದ ಅಪರಿಚಿತ ವ್ಯಕ್ತಿ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

ಪುತ್ತೂರು ಆಸ್ಪತ್ರೆ ಸಾಮರ್ಥ್ಯ 300 ಹಾಸಿಗೆಗೆ ಏರಿಕೆಯಾಗಲಿ

ಪುತ್ತೂರು ಆಸ್ಪತ್ರೆ ಸಾಮರ್ಥ್ಯ 300 ಹಾಸಿಗೆಗೆ ಏರಿಕೆಯಾಗಲಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.