ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ! ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ


Team Udayavani, Feb 2, 2023, 7:00 AM IST

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ! ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ

ಪುತ್ತೂರು: ಪಡಿತರ ಅಂಗಡಿ ಮೂಲಕ ನೀಡಲಾಗುತ್ತಿರುವ ಅಕ್ಕಿಯೊಂದಿಗೆ ಪ್ಲಾಸ್ಟಿಕ್‌ ಅಕ್ಕಿ ಕಾಳು ಮಿಶ್ರಣವಾಗಿದೆ ಎಂಬ ವದಂತಿ ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ವಾಸ್ತವವಾಗಿ ಅದು ಪ್ಲಾಸ್ಟಿಕ್‌ ಅಕ್ಕಿ ಅಲ್ಲ, ಸಾರವರ್ಧಿತ ಅಕ್ಕಿ!

ದ.ಕ. ಜಿಲ್ಲೆಯಲ್ಲಿ ಜನವರಿಯ ಅಕ್ಕಿ ವಿತರಣೆ ಆಗುತ್ತಿದ್ದಂತೆ ಅದರಲ್ಲಿ ಕಂಡು ಬಂದಿರುವ ದೊಡ್ಡ ಗಾತ್ರದ ಬಿಳಿ ಬಣ್ಣದ ಅಕ್ಕಿಯನ್ನು ಕಂಡು ಪಡಿತರ ಅಕ್ಕಿಗೆ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ ಎಂದು ಆಹಾರ ಇಲಾಖೆ, ಗ್ರಾ.ಪಂ.ಗಳಿಗೆ ದೂರು ಹೇಳುತ್ತಿರುವ ಪ್ರಸಂಗ ಕಂಡು ಬರುತ್ತಿದೆ.

ಏನಿದು ಸಾರವರ್ಧಿತ ಅಕ್ಕಿ
ಕೇಂದ್ರ ಸರಕಾರದ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ 1 ಕೆಜಿ ಅಕ್ಕಿಗೆ ನಿಗದಿತ ಪ್ರಮಾಣದ ಸಾರವರ್ಧಿತ ಅಕ್ಕಿಯನ್ನು ಬೆರೆಸಲಾಗುತ್ತಿದೆ. ಇದರಲ್ಲಿ ಕಬ್ಬಿಣದ ಅಂಶ, ಫೋಲಿಕ್‌ ಆಮ್ಲ, ಹಾಗೂ ಬಿ ವಿಟಮಿನ್‌ ಅಂಶಗಳಿವೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಪ್ರತೀ ವ್ಯಕ್ತಿಗೆ ನೀಡುವ 10 ಕೆಜಿ ಅಕ್ಕಿಯಲ್ಲಿ 5 ಕೆಜಿ ಸಾರವರ್ಧಿತ ಮಿಶ್ರಿತ ಅಕ್ಕಿ ಹಾಗೂ 5 ಕೆಜಿ ಸಾದಾ ಅಕ್ಕಿಯನ್ನು ನೀಡುವಂತೆ ಸರಕಾರದ ಮಾರ್ಗಸೂಚಿ ಇದೆ. ಪ್ರತೀ ಫಲಾನುಭವಿಗೆ ಸಾದಾ ಅಕ್ಕಿ ಹಾಗೂ ಸಾರವರ್ಧಿತ ಅಕ್ಕಿಯನ್ನು ಪ್ರತ್ಯೇಕವಾಗಿ ನೀಡಬೇಕು ಅನ್ನುವ ನಿಯಮ ಇದೆ.

ಮಿಶ್ರಿತ ಅಕ್ಕಿ
ಪ್ರಸ್ತುತ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ನೀಡಲಾಗುತ್ತಿದೆ. ದ.ಕ.ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ವಿತರಣೆ ಪ್ರಾರಂಭವಾಗಿಲ್ಲ ಅನ್ನುವುದು ಅಧಿಕಾರಿಗಳ ಹೇಳಿಕೆ. ಆದರೆ ಕೆಲವು ಜಿಲ್ಲೆಗಳಲ್ಲಿ ಪೂರೈಕೆ ಮಾಡುವ ಅಕ್ಕಿಯಲ್ಲಿ ಸ್ವಲ್ಪ ಭಾಗವನ್ನು ದ.ಕ. ಜಿಲ್ಲೆಗೂ ಕಳುಹಿಸಿದ್ದು ಜನವರಿಯಲ್ಲಿ ವಿತರಿಸಿದ ಅಕ್ಕಿಯೊಟ್ಟಿಗೆ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ಕಳುಹಿಸಲಾಗಿದೆ. ಲಭ್ಯತೆ ಕಡಿಮೆ ಇರುವ ಕಾರಣ ಬಹುತೇಕ ಪಡಿತರ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ನೀಡದೆ ಮಿಶ್ರಣ ಮಾಡಿ ಅಕ್ಕಿಯನ್ನು ವಿತರಿಸಲಾಗಿದೆ.

ಪ್ಲಾಸ್ಟಿಕ್‌ ಅಕ್ಕಿ ಎಂಬ ಆತಂಕ!
ಸಾರವರ್ಧಿತ ಅಕ್ಕಿ ಕಾಳುಗಳು ಸಾದಾ ಅಕ್ಕಿಗಿಂತ ದೊಡ್ಡ ಗಾತ್ರದ್ದಾಗಿದೆ. ವಿಭಿನ್ನವಾದ ಬಣ್ಣ ಹೊಂದಿವೆ. ಹೀಗಾಗಿ ಇದು ಪ್ಲಾಸ್ಟಿಕ್‌ ಅಕ್ಕಿ ಎಂಬ ಶಂಕೆಯಿಂದ ಬಳಕೆದಾರರು ಎಸೆದಿದ್ದಾರೆ. ಪಡಿತರ ಕೇಂದ್ರಗಳಲ್ಲಿ ಕೂಡ ಈ ಅಕ್ಕಿಯ ಸಮರ್ಪಕ ಮಾಹಿತಿ ನೀಡುವ ಅಗತ್ಯ ಇದೆ ಎನ್ನುತ್ತಾರೆ ಫಲಾನುಭವಿಗಳು.

ಅನುಕೂಲತೆಗಳು
ಸಾರವರ್ಧಿತ ಅಕ್ಕಿಯಲ್ಲಿ ಕಬ್ಬಿಣ, ಸತು, ಫೂಲಿಕ್‌ ಆಮ್ಲ, ವಿಟಮಿನ್‌ ಎ, ಡಿ, ಬಿ6, ಬಿ12 ಮತ್ತು ಇತರೆ ಪೋಷಕಾಂಶಗಳು ಸಮ ಪ್ರಮಾಣದಲ್ಲಿ ಲಭ್ಯವಾಗುತ್ತದೆ. ಪೋಷಕಾಂಶದ ಕೊರತೆಯಿಂದ ಉಂಟಾಗುವ ಅನೀಮಿಯಾ, ರಾತ್ರಿ ಕುರುಡುತನ ರೋಗ ಲಕ್ಷಣದಿಂದ ದೂರ ಇರಬಹುದಾಗಿದೆ. ಅಪೌಷ್ಟಿಕತೆಯನ್ನು ದೂರ ಮಾಡಬಹುದು. ಹಾಗಾಗಿ ಇತರೆ ಅಕ್ಕಿಗಳ ರೀತಿಯಲ್ಲಿ ಸಾರವರ್ಧಿತ ಅಕ್ಕಿಯನ್ನು ಆಹಾರ ಪದಾರ್ಥವಾಗಿ ಬಳಸಿಕೊಳ್ಳಬಹುದು.

ಸಾರವರ್ಧಿತ ಅಕ್ಕಿಯ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ. ಸರಕಾರದ ಸೂಚನೆಯ ಪ್ರಕಾರ ಈ ಅಕ್ಕಿ ನೀಡಲಾಗುತ್ತಿದೆ. ದ.ಕ. ಜಿಲ್ಲೆ ಪಡಿತರ ಫಲಾನುಭವಿಗಳಿಗೆ ಪೂರ್ಣ ಸಾರವರ್ಧಿತ ಅಕ್ಕಿ ನೀಡುವ ಜಿಲ್ಲೆಗಳ ಪಟ್ಟಿಗೆ ಸೇರ್ಪಡೆಗೊಳ್ಳಬೇಕಷ್ಟೇ. ಮುಂದಿನ ವರ್ಷದಿಂದ ಎಲ್ಲ ಜಿಲ್ಲೆಗಳಲ್ಲಿಯು ವಿತರಿಸಲಾಗುತ್ತದೆ. ಪಡಿತರ ಕೇಂದ್ರಗಳಲ್ಲಿ ನೀಡಲಾಗುತ್ತಿರುವ ಅಕ್ಕಿಯೊಂದಿಗೆ ಪ್ಲಾಸ್ಟಿಕ್‌ ಅಕ್ಕಿ ಮಿಶ್ರಣ ಆಗಿಲ್ಲ. ಈ ಬಗ್ಗೆ ಆತಂಕ ಬೇಡ.
-ಎಚ್‌.ಆರ್‌. ವಿಜಯಕುಮಾರ್‌
ಜಂಟಿ ನಿರ್ದೇಶಕ ಸಂಗ್ರಹಣೆ ಮತ್ತು ವಿತರಣೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು

 – ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.