ಇಬ್ಬರು ಮಹಿಳೆಯರನ್ನು ಕಟ್ಟಿ ಹಾಕಿ ಲಕ್ಷಾಂತರ ರೂ. ದರೋಡೆ : ನಾಪೋಕ್ಲು ಕೊಳಕೇರಿಯಲ್ಲಿ ಘಟನೆ
Team Udayavani, Feb 1, 2022, 8:48 PM IST
ಮಡಿಕೇರಿ : ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮಹಿಳೆಯರೇ ಇರುವ ಒಂಟಿ ಮನೆಗಳ ಮೇಲೆ ಅಪರಿಚಿತ ವ್ಯಕ್ತಿಗಳು ಹಾಗೂ ಕಳ್ಳರ ದಾಳಿ ಹೆಚ್ಚಾಗುತ್ತಿದೆ. ಇಬ್ಬರು ಮಹಿಳೆಯರನ್ನು ಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಬೊಮ್ಮಂಜಿಗೇರಿಯಲ್ಲಿ ನಡೆದಿದೆ.
ಸೋಮವಾರ ಮಧ್ಯ ರಾತ್ರಿ ವಾಂಜಂಡ ಜಾನಕಿ (78) ಹಾಗೂ ಅವರ ತಂಗಿ ಅಮ್ಮಕ್ಕಿ (68) ವಾಸವಿದ್ದ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ನಾಲ್ವರು ಚೋರರು 2.5 ಲಕ್ಷ ನಗದು ಹಾಗೂ ಸುಮಾರು 83 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮನೆಯೊಳಗೆ ನುಗ್ಗಿದ ಚೋರರು ಇಬ್ಬರು ಮಹಿಳೆಯರನ್ನು ಕೋಣೆಯೊಂದರಲ್ಲಿ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಚಾಕುವಿನಿಂದ ಹತ್ಯೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭ ಅಂಗಲಾಚಿದ ಮಹಿಳೆಯರು ನಮ್ಮನ್ನು ಏನೂ ಮಾಡಬೇಡಿ, ಹಣ, ಒಡವೆ ತೆಗೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಇದರಿಂದ ಸುಮ್ಮನಾದ ದುಷ್ಕರ್ಮಿಗಳು ಹಣ ಮತ್ತು ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ವಾಸವಿರುವ ಸಹೋದರ ನಿವೃತ್ತ ನ್ಯಾಯಾಧೀಶ ವಾಂಜಂಡ ಬೋಪಯ್ಯ ಅವರಿಗೆ ಮಹಿಳೆಯರು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯರನ್ನು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು.
ಇದನ್ನೂ ಓದಿ : ಕೋವಿಡ್ ಪರಿಹಾರಕ್ಕಾಗಿ ವಿವರ ಪಡೆಯಲು ಕರೆ ಮಾಡಿದರೆ : ಮೃತ ವ್ಯಕ್ತಿಯೇ ಕರೆ ಸ್ವೀಕರಿಸುವುದೇ !
ನಂತರ ಮನೆಯ ಸುತ್ತ ಮಹಜರು ನಡೆಸಿದಾಗ ಚೋರರು ಮದ್ಯದ ಪಾರ್ಟಿ ಮಾಡಿರುವುದು ಕಂಡು ಬಂದಿದೆ. ಈ ಘಟನೆಯಿಂದ ನಾಪೋಕ್ಲು ವ್ಯಾಪ್ತಿಯಲ್ಲಿ ಆತಂಕ ಮನೆ ಮಾಡಿದೆ.
ಡಿವೈ ಎಸ್ಪಿ ಗಜೇಂದ್ರ ಪ್ರಸಾದ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಗ್ರಾಮಾಂತರ ಠಾಣೆಯ ಪಿಎಸ್ಐ ವೆಂಕಟೇಶ್, ನಾಪೋಕ್ಲು ಠಾಣೆಯ ಪ್ರಭಾರ ಠಾಣಾಧಿಕಾರಿ ಕುಶಾಲಪ್ಪ, ಸಿಬ್ಬಂದಿಗಳಾದ ರವಿಕುಮಾರ್, ಪಂಚಲಿಂಗಪ್ಪ, ನವೀನ್, ಸಾಜನ್ ಮಹಿಳಾ ಸಿಬ್ಬಂದಿ ರೇಷ್ಮಾ, ಚಾಲಕ ಷರೀಫ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ