Madikeri: ವರ್ತಕನ ಮೇಲೆ ಗುಂಡಿನ ದಾಳಿ: ಕೂದಲೆಳೆ ಅಂತರದಲ್ಲಿ ಪಾರು
Team Udayavani, Apr 23, 2023, 7:05 AM IST
ಮಡಿಕೇರಿ: ವರ್ತಕರೊಬ್ಬರ ಮೇಲೆ ಗುಂಡಿನ ದಾಳಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ವೀರಾಜಪೇಟೆ ತಾಲೂಕು ಅಮ್ಮತ್ತಿಯಲ್ಲಿ ನಡೆದಿದೆ.
ವರ್ತಕ ಕೆ. ಬೋಪಣ್ಣ ಪಾರಾದ ವರು. ಆರೋಪಿ ಎನ್. ರಂಜನ್ ಚಿಣ್ಣಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಂಜನ್ ಚಿಣ್ಣಪ್ಪ ಅವರ ಅಂಗಡಿಯಲ್ಲಿ 8 ವರ್ಷಗಳಿಂದ ಬೋಪಣ್ಣ ಅಡಿಕೆ ಖರೀದಿ ವ್ಯವಹಾರ ನಡೆಸುತ್ತಿದ್ದರು. ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಕಲಹ ಏರ್ಪಟ್ಟು ರಂಜನ್ ಚಿಣ್ಣಪ್ಪ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ಮತ್ತು ಸ್ಥಳದಲ್ಲೇ ಬಿದ್ದಿದ್ದ ರಿವಾಲ್ವರ್ ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.