ಮಹಾಲಿಂಗಪುರ ಪುರಸಭೆ: ಅಧ್ಯಕ್ಷರ ಆಯ್ಕೆ ಚುನಾವಣೆಗೆ ಕ್ಷಣಗಣನೆ

ಬಿಜೆಪಿಯಿಂದ ಒಂದು - ಕಾಂಗ್ರೆಸ್ ನಿಂದ ಎರಡು ನಾಮಪತ್ರಗಳ ಸಲ್ಲಿಕೆ       

Team Udayavani, Jul 15, 2022, 11:25 AM IST

3

ಮಹಾಲಿಂಗಪುರ: ಭಾರಿ ಕುತೂಹಲ ಕೆರಳಿಸಿರುವ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಆಯ್ಕೆಯ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ನಾಮಪತ್ರಗಳ ಪರಿಶೀಲನೆ, ನಾಮಪತ್ರ ವಾಪಸ್ ಪಡೆಯುವುದು ಆ ನಂತರ ಅಧ್ಯಕ್ಷರ ಆಯ್ಕೆಯ ಚುನಾವಣೆ ನಡೆಯಲಿದೆ.

2020 ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯಲ್ಲಿ ಮಹಿಳಾ ಸದಸ್ಯೆಯರ ಎಳೆದಾಟ ಪ್ರಕರಣವು ದೇಶಾದ್ಯಂತ ವೈರಲ್ ಆಗಿದ್ದರಿಂದ ಈ ಬಾರಿಯ ಚುನಾವಣೆಯು ಯಾವ ರೀತಿ ನಡೆಯಲಿದೆ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ಭಾರಿ ಬಂದೋಬಸ್ತ್ : ಕಳೆದ ಚುನಾವಣೆಯಲ್ಲಿ ನಡೆದಂತೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಪುರಸಭೆಯಿಂದ 200 ಮೀಟರ್ ಒಳಗಿನ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿ ನಿಷೇಧಿತ್ ಪ್ರದೇಶವನ್ನಾಗಿ ಘೋಷಿಸಿದೆ. ಪುರಸಭೆಯ ಸುತ್ತಲು ಇರುವ ಸಾಧುನ ಗುಡಿ, ಚಿಮ್ಮಡ ಗಲ್ಲಿ, ಜವಳಿ ಬಜಾರ್, ಅಷ್ಟಗಿ ಚಿತ್ರ ಮಂದಿರ ಪಕ್ಕದ ರಸ್ತೆ, ಪುರಸಭೆ ಪಕ್ಕದ ರಸ್ತೆ ಸೇರಿದಂತೆ ಪುರಸಭೆಯನ್ನು  ಸಂಪರ್ಕಿಸುವ ಎಲ್ಲಾ ರಸ್ತೆಗಳಿಗೆ ಬ್ಯಾರಿ ಕೇಡ್ ಗಳನ್ನು ಅಳವಡಿಸಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಅಂದಾಜು 200 ಕ್ಕೂ ಅಧಿಕ ಪೋಲಿಸ್ ಸಿಬ್ಬಂದಿಯನ್ನು ಬಂದೋಬಸ್ತ ಗೆ ನೇಮಕಗೊಳಿಸಲಾಗಿದೆ. ರಬಕವಿ-ಬನಹಟ್ಟಿ ತಹಶಿಲ್ದಾರ ಎಸ್.ಬಿ.ಇಂಗಳೆ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ನಾಮಪತ್ರ ಸಲ್ಲಿಸುವ ಅವಧಿ: ಬೆಳಿಗ್ಗೆ10 ರಿಂದ 11 ರೊಳಗೆ ಬಿಜೆಪಿಯಿಂದ ಬಸವರಾಜ ಹಿಟ್ಟಿನಮಠ, ಕಾಂಗ್ರೆಸ್ ನಿಂದ ಜಾವೇದ ಬಾಗವಾನ್ ಮತ್ತು ಯಲ್ಲನಗೌಡ ಪಾಟೀಲ್ ಸೇರಿ ಇಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಪುರಸಭೆ ಅಧ್ಯಕ್ಷ ಆಯ್ಕೆ ಚುನಾವಣೆಯು ಕ್ಲೈಮಾಕ್ಸ್‌ ಹಂತದಲ್ಲಿ  ಮತ್ತಷ್ಟು ರೋಚಕತೆಯನ್ನು ಹೆಚ್ಚಿಸಿದೆ.  ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭವಾದ ನಂತರ ನಾಮಪತ್ರಗಳ ಪರಿಶೀಲನೆ, ನಾಮಪತ್ರ ವಾಪಸ್  ಪಡೆಯುವುದು, ನಂತರ ಚುನಾವಣೆ ಪ್ರಕ್ರಿಯೆ ನಡೆಯಲಿದೆ.ಅಂತಿಮವಾಗಿ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಪಟ್ಟ ಯಾರ ಮಡಿಲಿಗೆ ಎಂಬ ಸ್ಪಷ್ಟ ಉತ್ತರ ಇಂದು ಮಧ್ಯಾಹ್ನ 1-30ರ ಸುಮಾರಿಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.