ಗಣೇಶೋತ್ಸವಕ್ಕೆ ನಿರ್ಬಂಧ: ಮಹಾರಾಷ್ಟ್ರದಲ್ಲಿರುವುದು ಹಿಂದೂ ವಿರೋಧಿ ಸರ್ಕಾರ: ಸಚಿವ ರಾಣೆ
ಹಬ್ಬದ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ನಿರ್ಬಂಧ ಹೇರಿರುವುದು ತಪ್ಪು.
Team Udayavani, Sep 11, 2021, 10:27 AM IST
ನವದೆಹಲಿ:ಗಣೇಶೋತ್ಸವ ಆಚರಣೆ ಮೇಲೆ ನಿರ್ಬಂಧ ಹೇರಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣ ರಾಣೆ, ಮಹರಾಷ್ಟ್ರದಾದ್ಯಂತ ಗಣೇಶೋತ್ಸವ ಆಚರಿಸಲು ನಿರ್ಬಂಧ ವಿಧಿಸಿರುವ ಶಿವಸೇನಾ ನೇತೃತ್ವದ ಮೈತ್ರಿ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
“ಶಿವಸೇನಾ ಹಿಂದುತ್ವದ ಬಗ್ಗೆ ಮಾತನಾಡುತ್ತದೆ. ಆದರೆ ಯಾವಾಗ ಭಾರತೀಯ ಜನತಾ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿತೋ ಅಂದೇ ಶಿವಸೇನಾದ ಹಿಂದುತ್ವ ಕೊನೆಗೊಂಡಿರುವುದಾಗಿ” ರಾಣೆ ಹೇಳಿದರು.
ಹಬ್ಬದ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ನಿರ್ಬಂಧ ಹೇರಿರುವುದು ತಪ್ಪು. ಇದೊಂದು ಹಿಂದು ವಿರೋಧಿ ಸರ್ಕಾರ. ಹಿಂದೂಗಳ ಹಬ್ಬ ಬಂದಾಗ ಮಾತ್ರ ಇವರು (ಶಿವಸೇನಾ) ನಿರ್ಬಂಧ ಹೇರುವ ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಿವಸೇನಾ ಹಿಂದುತ್ವ ಬರೇ ನಾಟಕೀಯ ಎಂದು ರಾಣೆ ಕಿಡಿಕಾರಿರುವುದಾಗಿ ಎಎನ್ ಐ ವರದಿ ಮಾಡಿದೆ.
ಕೋವಿಡ್ 19 ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಜನರು ಮನೆಯಲ್ಲಿಯೇ ಸರಳವಾಗಿ ಗಣೇಶೋತ್ಸವ ಆಚರಿಸುವಂತೆ ಮಹಾರಾಷ್ಟ್ರ ಸರ್ಕಾರ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ