ಮಲೆ ಮಹದೇಶ್ವರ ಬೆಟ್ಟ: ಭಕ್ತಾದಿಗಳ ನಿಷೇಧದ ನಡುವೆಯೂ ಸರಳ ಮತ್ತು ಸಂಭ್ರಮದ ತೆಪ್ಪೋತ್ಸವ


Team Udayavani, Oct 27, 2020, 5:55 PM IST

ಮಲೆ ಮಹದೇಶ್ವರ ಬೆಟ್ಟ: ಭಕ್ತಾದಿಗಳ ನಿಷೇಧದ ನಡುವೆಯೂ ಸರಳ ಮತ್ತು ಸಂಭ್ರಮದ ತೆಪ್ಪೋತ್ಸವ

ಹನೂರು (ಚಾಮರಾಜನಗರ): ಭಕ್ತಾದಿಗಳ ನಿಷೇಧದ ನಡುವೆಯೂ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯ ದಶಮಿಯ ಬಲಿಪೂಜೆ, ಬಿಳಿಕುದುರೆ ಉತ್ಸವ ಮತ್ತು ತೆಪ್ಪೋತ್ಸವ ಪೂಜಾ ಕೈಂಕರ್ಯಗಳು ವಿಧಿವಿಧಾನಗಳೊಂದಿಗೆ ಸರಳವಾಗಿ ಬೇಡಗಂಪಣ ಅರ್ಚಕ ಪದ್ಧತಿಯಂತೆ ಜರುಗಿದವು.

ಬಿಳಿಕುದುರೆ ಉತ್ಸವ: ವಿಜಯದಶಮಿಯ ಹಿನ್ನೆಲೆ ಸೋಮವಾರ ತಡರಾತ್ರಿ 8 ಗಂಟೆಯ ವೇಳೆಗೆ ಉತ್ಸವಮೂರ್ತಿಯನ್ನು ಬಿಳಿಕುದುರೆಯ ಮೇಲೆಇಟ್ಟು ಉಪವಾಸವಿದ್ದ ಸರದಿ ಸಾಲಿನ ಅರ್ಚಕರು ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯ ನೆರವೇರಿಸಿದರು. ಬಳಿಕ ಆಯುಧಪೂಜೆಯಂದು ವಿಶೇಷವಾಗಿ ಪೂಜೆ ನೆರವೇರಿಸಿ ಇಡಲಾಗಿದ್ದ ಮಹದೇಶ್ವರರ ಪಟ್ಟದ ಕತ್ತಿಗೆ ಬೂದುಗುಂಬಳಕಾಯಿಯನ್ನು ಬಲಿಕೊಡುವ ಮೂಲಕ ಬಿಳಿಕುದುರೆ ಉತದವಕ್ಕೆ ಚಾಲನೆ ನೀಡಲಾಯಿತು. ಬಳಿಕ ದೊಡ್ಡಸತ್ತಿಗೆ ಸತ್ತಿಗೆ, ಸುರಪಾನಿ, ಮಂಗಳವಾದ್ಯ. ತಮಟೆ, ಜಾಗಟೆ ಸಮೇತ ಬನ್ನಿಮರದವರೆಗೆ ಮೆರವಣಿಗೆ ಮೂಲಕ ಸಾಗಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಬಳಿಕ ಉತ್ಸವಮೂರ್ತಿಯನ್ನು ಮೆರವಣಿಗೆ ಮೂಲಕ ಮತ್ತೆ ದೇವಾಲಯಕ್ಕೆ ತಂದು ನೈವೇದ್ಯ ಪೂಜಾ ಕೈಂಕರ್ಯ ನೆರವೇರಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಲಾಯಿತು.

ಸಂಭ್ರಮದ ತೆಪ್ಪೋತ್ಸವ: ಬಳಿಕ ಸೋಮವಾರ ತಡರಾತ್ರಿ 10 ಗಂಟೆಯ ವೇಳೆಗೆ ಉತ್ಸವಮೂರ್ತಿಯನ್ನು ಬಸವ ವಾಹನದ ಮೇಲಿಟ್ಟು ಸತ್ತಿಗೆ ಸುರಪಾನಿ, ಛತ್ರಿ-ಚಾಮರ ಸಮೇತ ದೊಡ್ಡ ಕೆರೆಯ ಸಮೀಪಕ್ಕೆ ತರಲಾಯಿತು. ಬಳಿಕ ವಿವಿಧ ವರ್ಣಗಳ ಪುಷ್ಪಾಲಂಕಾರ ಮತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿದ್ದ ತೆಪ್ಪದಲ್ಲಿ ಉತ್ಸವಮೂರ್ತಿಯನ್ನು ಇಡಲಾಯಿತು. ಬಳಿಕ ತೆಪ್ಪೋತ್ಸವದ ದೊಡ್ಡಕೆರೆಯನ್ನು 3 ಸುತ್ತು ಹಾಕುವ ಮೂಲಕ ತೆಪ್ಪೋತ್ಸವವನ್ನು ನೆರವೇರಿಸಲಾಯಿತು.

ಮಹಾನವಮಿ ಜಾತ್ರೆಗೆ ತೆರೆ: ಶ್ರೀ ಕ್ಷೇತ್ರದ ಮಲೆ ಮಾದಪ್ಪನ ತೆಪ್ಪೋತ್ಸವದ ಮೂಲಕ ಮಹಾನವಮಿ ಜಾತ್ರೆಗೆ ಅಂತಿಮ ತೆರೆ ಎಳೆಯಲಾಯಿತು. ಮಹಾನವಮಿ ಜಾತ್ರೆ ಹಿನ್ನೆಲೆ ಶ್ರೀ ಕ್ಷೇತ್ರದ ರಾಜಗೋಪುರ, ಗರ್ಭಾಂಗಣ ಗೋಪುರ, ಪ್ರವೇಶದ್ವಾರ, ದೇವಾಲಯದ ಪ್ರವೇಶ ರಸ್ತೆಗಳನ್ನು ಕಳೆದ 10 ದಿನಗಳಿಂದಲೇ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ:ಕೋವಿಡ್ 19: ಖ್ಯಾತ ಗುಜರಾತಿ ಸ್ಟಾರ್ ನಟ, ರಾಜಕಾರಣಿ ನರೇಶ್ ಕನೋಡಿಯಾ ವಿಧಿವಶ

ಸರಳ ಆಚರಣೆ: ಪ್ರತಿ ವರ್ಷವೂ ಮಲೆ ಮಹದೇಶ್ವರ ಬೆಟ್ಟದ ಆಯುಧಪೂಜೆ, ವಿಜಯ ದಶಮಿಯ ಪೂಜೆಗಳು ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುತಿತ್ತು. ಆದರೆ ಈ ಬಾರಿ ಕೋವಿಡ್-19ರ ಕರಿಛಾಯೆ ಆವರಿಸಿರುವ ಹಿನ್ನೆಲೆ ದೇವಾಲಯಕ್ಕೆ ಅ.25 ಮತ್ತು 26 ರಂದು ಭಕ್ತಾದಿಗಳ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿತ್ತು. ಪ್ರತಿ ಬಾರಿಯೂ ವಿಜಯ ದಶಮಿಯ ತೆಪ್ಪೋತ್ಸವವು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಉಘೇ ಮಾದಪ್ಪ, ಉಘೇ ಮಹತ್ಮಲಯ ಘೋಷ ವಾಕ್ಯಗಳೊಂದಿಗೆ ಜರುಗುತ್ತಿದ್ದರು. ಆದರೆ ಈ ಬಾರಿ ಬೆರಳೆಣಿಕೆಯಷ್ಟು ಅರ್ಚಕರು, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ನೆರವೇರಿತು.

ಶ್ರೀ ಕ್ಷೇತ್ರದ ಪೂಜಾ ಕೈಂಕರ್ಯಗಳಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಪ್ರಾಧಿಕಾರಿದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪಕಾರ್ಯದರ್ಶಿ ಬಸವರಾಜು, ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಮತ್ತು ಬೇಡಗಂಪಣ ಅರ್ಚಕರು ಹಾಜರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.