ಕ್ಷೇತ್ರದಲ್ಲೇ ಸ್ಟಾರ್‌ ಪ್ರಚಾರಕ ಠಿಕಾಣಿ

ಡಾಕ್ಟರ್‌ ಜಾಧವ್‌ ಶಾಕ್‌ನಿಂದಾಗಿ ಹಳ್ಳಿ ಹಳ್ಳಿ ಸುತ್ತುತ್ತಿರುವ ಖರ್ಗೆ

Team Udayavani, Apr 20, 2019, 6:00 AM IST

31

ಕಲಬುರಗಿ: ಸತತ 9 ಸಲ ವಿಧಾನಸಭೆ ಹಾಗೂ ತದನಂತರ ಸತತ ಎರಡು ಸಲ ಲೋಕಸಭೆಗೆ ಪ್ರವೇಶಿಸಿ ‘ಸೋಲಿಲ್ಲದ ಸರದಾರ’ ಎನಿಸಿಕೊಂಡಿರುವ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ಕ್ಷೇತ್ರ ಬಿಟ್ಟು ಒಂದಿಷ್ಟೂ ಆಚೀಚೆ ಹೋಗಿಲ್ಲ. ಕಾಂಗ್ರೆಸ್‌ನ ತಾರಾ ಪ್ರಚಾರಕರಾಗಿದ್ದರೂ ಬೇರೆ ಕ್ಷೇತ್ರಕ್ಕೆ ತೆರಳದ ಖರ್ಗೆ, ಮಹಾರಾಷ್ಟ್ರ ಉಸ್ತುವಾರಿ ವಹಿಸಿಕೊಂಡಿದ್ದರೂ ಅತ್ತ ತಲೆ ಹಾಕಿಲ್ಲ.

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಮೂಲಕ ಐತಿಹಾಸಿಕ ಗೆಲುವಿಗೆ ಮುಂದಾಗಿರುವ ನಾಯಕನಿಗೆ ಈ ಚುನಾವಣೆ ಸಾಕಷ್ಟು ಬೆವರಿಳಿಸುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಚಲನ ಮೂಡಿಸಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಉಮೇಶ ಜಾಧವ್‌ ಸ್ಪರ್ಧೆಯಿಂದ ಕಲಬುರಗಿ ಲೋಕಸಭಾ ಕ್ಷೇತ್ರ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದರಿಂದ ಉಭಯ ಅಭ್ಯರ್ಥಿಗಳು ತಮ್ಮ ಪ್ರತಿಷ್ಠೆ ಹಾಗೂ ಅಗ್ನಿಪರೀಕ್ಷೆ ಪಣಕ್ಕಿಟ್ಟಿರುವುದರಿಂದ ಚುನಾವಣೆಯು ‘ನನ್ನನ್ನು ನೋಡು’ ಎನ್ನುವಂತಾಗಿದೆ.

ಸ್ಟಾರ್‌ ಪ್ರಚಾರಕರು: ಲೋಕಸಭೆಯಲ್ಲಿನ ಕಾಂಗ್ರೆಸ್‌ ಪಕ್ಷದ ಸಂಸದೀಯ ನಾಯಕರಾಗಿರುವ ಮಲ್ಲಿಕಾರ್ಜುನ ಕಾಂಗ್ರೆಸ್‌ ಪಕ್ಷದ ಸ್ಟಾರ್‌ ಪ್ರಚಾರಕರು. ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ನಾಯಕರು. ಬಹು ಮುಖ್ಯವಾಗಿ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್‌ ಉಸ್ತುವಾರಿಗಳಾಗಿದ್ದಾರೆ. ಹೀಗಾಗಿ ಖರ್ಗೆ ಅವರು ತವರು ಕ್ಷೇತ್ರವಲ್ಲದೇ ಇತರ ಕ್ಷೇತ್ರಗಳಿಗೆ ಹೋಗಿ ಪ್ರಚಾರ ಮಾಡಬೇಕು. ಆದರೆ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ ಸಂಘಟನೆ ಮೂಲಕ ನಿದ್ದೆಗೆಡಿಸಿರುವ ಪರಿಣಾಮ ಖರ್ಗೆ ಕ್ಷೇತ್ರ ಬಿಟ್ಟು ಹೋಗುತ್ತಿಲ್ಲ.

ಅಷ್ಟೇ ಏಕೆ ರಾಜ್ಯದ ಇತರ ಕ್ಷೇತ್ರಗಳಿಗೂ ಹೋಗಿಲ್ಲ. ಶುಕ್ರವಾರ ಕಲಬುರಗಿ ಕ್ಷೇತ್ರದ ಪಕ್ಕದ ರಾಯಚೂರು ಜಿಲ್ಲೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂದರೂ ಅವರೊಂದಿಗೆ ಪಾಲ್ಗೊಳ್ಳಲು ಹೋಗದಿರುವುದನ್ನು ನೋಡಿದರೆ ಖರ್ಗೆ ಕೋಟೆ ಅಲುಗಾಡುತ್ತಿರುವುದನ್ನು ನಿರೂಪಿಸುತ್ತದೆ. ಬಹುಮುಖ್ಯವಾಗಿ ಲೋಕಸಭಾ ಚುನಾವಣೆಯಲ್ಲಿ ಈ ಹಿಂದೆ ಹಳ್ಳಿಗಳಿಗೆ ಹೋಗಿ ಪ್ರಚಾರಗೈದ ಉದಾಹರಣೆಗಳಿಲ್ಲ. ಆದರೆ ಖರ್ಗೆ ಅವರಿಂದು ಹಳ್ಳಿ-ಹಳ್ಳಿಗೂ ಮತಯಾಚಿಸುತ್ತಿದ್ದಾರೆ.

ಎಲ್ಲ ಸಮುದಾಯ ನಾಯಕರು: ಈ ಸಲ ಮಲ್ಲಿಕಾರ್ಜುನ ಖರ್ಗೆ ಪರ ಕಾಂಗ್ರೆಸ್‌ ಪಕ್ಷದಲ್ಲಿರುವ ಎಲ್ಲ ಸಮುದಾಯಗಳ ನಾಯಕರು ಕಲಬುರಗಿಗೆ ಬಂದು ಪ್ರಚಾರಗೈಯುತ್ತಿರುವುದನ್ನು ಪ್ರಮುಖ ಕಾಣಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಹಿಡಿದು ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್, ಸಿ.ಎಂ. ಇಬ್ರಾಹಿಂ, ಯು.ಟಿ,.ಖಾದರ್‌, ವೀರಣ್ಣ ಮತ್ತಿಕಟ್ಟೆ, ಯು.ಬಿ.ವೆಂಕಟೇಶ, ಅಲ್ಲಮ ವೀರಭದ್ರಪ್ಪ, ಚಿತ್ರನಟಿ ವಿಜಯಶಾಂತಿ ಒಂದೆರಡು ದಿನ ಕ್ಷೇತ್ರದಲ್ಲೇ ಠಿಕಾಣಿ ಹೂಡಿ ಮತಯಾಚಿಸಿದ್ದರಲ್ಲದೇ ಸಚಿವೆ ಜಯಮಾಲಾ ಸೇರಿದಂತೆ ಇತರರು ಮತಯಾಚನೆಗೆ ಬರುತ್ತಿದ್ದಾರೆ.

ಇದನ್ನೆಲ್ಲ ನೋಡಿದರೆ ಚುನಾವಣೆ ಕಬ್ಬಿಣದ ಕಡಲೆಯಾಗಿರುವುದು ನಿರೂಪಿಸುತ್ತದೆ. ನಾಲ್ಕು ದಶಕಗಳ ಕಾಲ ರಾಜಕೀಯ ಎದುರಾಳಿಯಾಗಿದ್ದ ಕ್ಷೇತ್ರ ವ್ಯಾಪ್ತಿಯ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್‌ ಪಕ್ಷದ ಶಾಸಕ ನಾಗನಗೌಡ ಕಂದಕೂರ ಅವರ ಮನೆಗೆ ಗುರುವಾರ ತಡರಾತ್ರಿ ಹೋಗಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೋರಿದ್ದಾರೆ. ಒಟ್ಟಾರೆ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿನ ಈ ಎಲ್ಲ ಬೆಳವಣಿಗೆಗಳು ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಬಿಸಿ ಮುಟ್ಟಿರುವಲ್ಲಿ ಎರಡು ಮಾತಿಲ್ಲ.

ಸಮುದಾಯಗಳ ಸಮಾವೇಶ
ಕಲಬುರಗಿ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಇಷ್ಟೊಂದು ನಿಟ್ಟಿನಲ್ಲಿ ಸಮುದಾಯಗಳ ಸಮಾವೇಶ ನಡೆದಿರಲಿಲ್ಲ. ಆದರೆ ಈ ಸಲ ವೀರಶೈವ ಲಿಂಗಾಯತ, ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಕೋಲಿ ಸಮಾಜ ಹೀಗೆ ಎಲ್ಲ ಸಮುದಾಯಗಳ ಸಮಾವೇಶ ನಡೆದು ಅವರ ನೆಚ್ಚಿನವರಿಗೆ ಬೆಂಬಲದ ನಿರ್ಣಯ ಕೈಗೊಂಡು ಸಮುದಾಯಗಳ ಸಂಘರ್ಷಕ್ಕೆ ಈ ಚುನಾವಣೆ ಎಡೆ ಮಾಡಿಕೊಟ್ಟಿದೆ.

ಹಣಮಂತರಾವ ಬೈರಾಮಡಗಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.