ಕಲ್ಯಾಣ ಕರ್ನಾಟಕದಲ್ಲೇ ಅಪೌಷ್ಟಿಕತೆ ಅತೀ ಹೆಚ್ಚು!

ರಾಜ್ಯಾದ್ಯಂತ 5.58 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ ;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪೌಷ್ಟಿಕತೆ ಕಡಿಮೆ

Team Udayavani, Dec 17, 2019, 6:15 AM IST

BIG

ಸಾಂದರ್ಭಿಕ ಚಿತ್ರ.

ಬೆಂಗಳೂರು: ಐದು ವರ್ಷದೊಳಗಿನ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಪ್ರಯೋಜನವಾಗಿಲ್ಲ ಎಂಬ ಆಘಾತಕಾರಿ ಅಂಶ ಬಯಲಾಗಿದೆ. ರಾಜ್ಯದಲ್ಲಿ 5.58 ಲಕ್ಷ ಮಕ್ಕಳು ವಯಸ್ಸಿಗೆ ತಕ್ಕ ತೂಕ ಮತ್ತು ಎತ್ತರ ಇಲ್ಲದೆ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇವರಲ್ಲಿ “ಕಲ್ಯಾಣ ಕರ್ನಾಟಕ’ದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ!

ಕಳೆದ ಅಕ್ಟೋಬರ್‌ನಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 37.91 ಲಕ್ಷ ಮಕ್ಕಳನ್ನು ಪರೀಕ್ಷಿಸಿದೆ. ಇವರಲ್ಲಿ 5.46 ಲಕ್ಷ ಮಕ್ಕಳು, ಸಾಧಾರಣ ಅಪೌಷ್ಟಿಕತೆ, 11,462 ಮಕ್ಕಳು ತೀವ್ರವಾದ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ. ಒಟ್ಟಾರೆ ಶೇ. 14.72ರಷ್ಟು ಮಕ್ಕಳು ಈ ಪಿಡುಗಿಗೆ ಒಳಗಾಗಿದ್ದಾರೆ. ಒಟ್ಟಾರೆ ಸಂಖ್ಯೆಯ ಲೆಕ್ಕಾಚಾರದಲ್ಲಿ ಬೆಳಗಾವಿ, ಬಳ್ಳಾರಿ ಜಿಲ್ಲೆಗಳು ಮೊದಲ ಎರಡು ಸ್ಥಾನಗಳಲ್ಲಿದ್ದರೆ, ಜಿಲ್ಲೆಯ ಜನಸಂಖ್ಯೆ ಪರಿಗಣಿಸಿ ಶೇಕಡಾವಾರು ಲೆಕ್ಕಾಚಾರದಲ್ಲಿ ಕೊಪ್ಪಳ ಮತ್ತು ಗದಗ ಜಿಲ್ಲೆಗಳು ಮೊದಲ ಎರಡು ಸ್ಥಾನಗಳಲ್ಲಿವೆ. ಬೆಂಗಳೂರು ಗ್ರಾ., ಬೀದರ್‌ ಮತ್ತು ದಕ್ಷಿಣ ಕನ್ನಡ ಕೊನೆಯ ಸ್ಥಾನದಲ್ಲಿವೆ.

ಮಾತೃವಂದನ ಯೋಜನೆ
ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಳ ಮಾಡಬೇಕು ಎಂಬ ಉದ್ದೇಶದಿಂದಲೇ ಕೇಂದ್ರ ಸರಕಾರ ಪ್ರಧಾನಮಂತ್ರಿ ಮಾತೃವಂದನ ಯೋಜನೆ ಪರಿಚಯಿಸಿದೆ. ಇದರಲ್ಲಿ ಗರ್ಭಿಣಿ-ಬಾಣಂತಿಯರಿಗೆ ಆರೋಗ್ಯ ಮಟ್ಟ ಸುಧಾರಿಸುವ ಸಲುವಾಗಿ ನಗದು ರೂಪದಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಗರ್ಭಿಣಿಯಾಗಿ 6 ತಿಂಗಳಲ್ಲಿ ಒಂದು ಸಾವಿರ ರೂ., 6 ತಿಂಗಳ ಅನಂತರ ಎರಡು ಸಾವಿರ ರೂ., ಮಗು ಮೊದಲನೇ ಹಂತದ ಚುಚ್ಚುಮದ್ದು ಪಡೆದ ಬಳಿಕ ಎರಡು ಸಾವಿರ ರೂ. ನೀಡಲಾಗುತ್ತದೆ.

ಅಪೌಷ್ಟಿಕತೆ ಮಾನದಂಡವೇನು?
ಆರು ತಿಂಗಳಿನಿಂದ 5 ವರ್ಷದ ಒಳಗಿನ ಮಕ್ಕಳ ತೂಕ ಮತ್ತು ಎತ್ತರದ ಆಧಾರದ ಮೇಲೆ ಅಪೌಷ್ಟಿಕತೆ ನಿರ್ಧಾರವಾಗುತ್ತದೆ. ಅಂದರೆ ವಯಸ್ಸಿಗೆ ತಕ್ಕ ತೂಕ, ಎತ್ತರ, ಎತ್ತರಕ್ಕೆ ತಕ್ಕ ತೂಕ, ತೋಳಿನ ಸುತ್ತಳತೆಯನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ. ಹುಟ್ಟುವ ಗಂಡು ಮಗು 3.3-2.9 ಕೆ.ಜಿ., ಹೆಣ್ಣು ಮಗು 3.2-2.8 ಕೆ.ಜಿ. ಇದ್ದರೆ ಸಹಜ; 2.5 ಕೆ.ಜಿ. ಇದ್ದರೆ ಕಡಿಮೆ, 2.1 ಕೆ.ಜಿ. ಇದ್ದರೆ ಅತೀ ಕಡಿಮೆ ಎಂದು ಗುರುತಿಸಲಾಗುತ್ತದೆ. ಒಂದು ವೇಳೆ ವರ್ಷದ ಮಗು 6.9 ಕೆ.ಜಿ., ಮೂರು ವರ್ಷದ ಮಗು 10 ಕೆ.ಜಿ., ಐದು ವರ್ಷದ ಮಗು 12.4 ಕೆ.ಜಿ. ಇದ್ದರೆ ಆ ಮಗು ತೀವ್ರವಾಗಿ ಕಡಿಮೆ ತೂಕ ಹೊಂದಿದ್ದು, ಅತಿಯಾದ ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದರ್ಥವಾಗಿದೆ.

ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಲ್ಲಿ ಕಡಿಮೆ ತೂಕ ಹೊಂದಿರುವ ಒಟ್ಟು ಮಕ್ಕಳು
ಬೆಂಗಳೂರು ಗ್ರಾ. 25 ,ದಕ್ಷಿಣ ಕನ್ನಡ 48, ಕೊಡಗು 56,  ಉಡುಪಿ 94,
ಹಾಸನ 104, ಕೋಲಾರ 104,ಚಾಮರಾಜನಗರ 107, ಮಂಡ್ಯ 140

ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.