ಪ್ರಸ್ತುತ ಒಡೆದಾಳುವ ನೀತಿಯ ರಾಜಕಾರಣ ಸ್ವಾಗತಾರ್ಹವಲ್ಲ: ಸಿಎಂ ಮಮತಾ ಬ್ಯಾನರ್ಜಿ
ದೇಶದಲ್ಲಿನ ಪ್ರಸ್ತುತ ಒಡೆದಾಳುವ ನೀತಿಯಿಂದಾಗಿ ಯಾರು ಭಯಪಡುವ ಅಗತ್ಯವಿಲ್ಲ
Team Udayavani, May 3, 2022, 1:34 PM IST
ಕೋಲ್ಕತಾ: ದೇಶದಲ್ಲಿನ ಪ್ರಸ್ತುತ ಸನ್ನಿವೇಶ ಉತ್ತಮವಾಗಿಲ್ಲ ಎಂದು ಹೇಳಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ. ಪ್ರತ್ಯೇಕತೆಯ ರಾಜಕೀಯ ಬೆಳವಣಿಗೆ ಸ್ವಾಗತಾರ್ಹವಲ್ಲ ಎಂದು ಈದ್ ಉಲ್ ಫಿತರ್ ಕಾರ್ಯಕ್ರಮದಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಇದನ್ನೂ ಓದಿ:ಜ್ಞಾನಾಧಾರಿತ ‘ಸೂಪರ್ ಪವರ್’ ಭಾರತದ ಸಂಕಲ್ಪ: ಅಮಿತ್ ಶಾ
ಕೋಲ್ಕತಾದಲ್ಲಿ ಈದ್ ಉಲ್ ಫಿತರ್ ಪ್ರಾರ್ಥನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿರುವ ಮಮತಾ ಬ್ಯಾನರ್ಜಿ, ಜನರು ಒಟ್ಟಿಗೆ ಸೇರುವುದಕ್ಕಾಗಿ ಭಯಪಡಬೇಡಿ. ಆದರೆ ಉತ್ತಮ ಭವಿಷ್ಯಕ್ಕಾಗಿ ಒಗ್ಗಟ್ಟಿನಿಂದ ಇರಬೇಕಾಗಿದೆ ಎಂದು ಮನವಿ ಮಾಡಿಕೊಂಡರು. ದೇಶದಲ್ಲಿನ ಪ್ರಸ್ತುತ ಒಡೆದಾಳುವ ನೀತಿಯಿಂದಾಗಿ ಯಾರು ಭಯಪಡುವ ಅಗತ್ಯವಿಲ್ಲ. ಸಾಮರಸ್ಯದ ಸಮಾಜಕ್ಕಾಗಿ ಹೋರಾಟ ಮುಂದುವರಿಸಬೇಕಾಗಿದೆ ಎಂದು ಬ್ಯಾನರ್ಜಿ ಈ ಸಂದರ್ಭದಲ್ಲಿ ಹೇಳಿದರು.
ಈದ್ ಉಲ್ ಫಿತರ್ ಪ್ರಾರ್ಥನೆಯಲ್ಲಿ ಸುಮಾರು 14 ಸಾವಿರ ಮಂದಿ ಸೇರಿದ್ದು, ನಾನಾಗಲಿ, ನನ್ನ ಪಕ್ಷ ಅಥವಾ ಸರ್ಕಾರವಾಗಲಿ ನಿಮಗೆ (ಮುಸ್ಲಿಮರು) ನೋವನ್ನುಂಟು ಮಾಡುವ ಕೆಲಸ ಮಾಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಈ ಸಂದರ್ಭದಲ್ಲಿ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.
ಜಗತ್ತಿನಾದ್ಯಂತ ಒಂದು ತಿಂಗಳ ರಂಜಾನ್ ಉಪವಾಸ ವೃತವು ಕೊನೆಗೊಂಡಿದ್ದು, ಇಂದು ಎಲ್ಲೆಡೆ ಮುಸ್ಲಿಮರು ಈದ್ ಉಲ್ ಫಿತರ್ ಆಚರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ