ಜೈಲಿಂದ ಬಂದವರನ್ನು ಹೀರೋ ರೀತಿ ಸ್ವಾಗತಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ; ಮಮತಾಗೆ ಸುವೇಂದು
ಕೋರ್ಟ್ ಅನುಬ್ರತಾ ಮೊಂಡಲ್ ಮತ್ತು ಇತರ 13 ಮಂದಿಯನ್ನು ಶುಕ್ರವಾರ (ಸೆ.09) ಖುಲಾಸೆಗೊಳಿಸಿ ಆದೇಶ ನೀಡಿತ್ತು.
Team Udayavani, Sep 10, 2022, 10:17 AM IST
ಕೋಲ್ಕತಾ: ಟಿಎಂಸಿ ಮುಖಂಡರಾದ ಅನುಬ್ರತಾ ಮೊಂಡಲ್ , ಪಾರ್ಥ ಚಟರ್ಜಿ ಬಂಧನದ ನಂತರ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮುಂದುವರಿದಿದೆ. ಚಟರ್ಜಿ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಜನರು ಅವರನ್ನು ಅದ್ದೂರಿಯಾಗಿ ಸ್ವಾಗತಿಸಬೇಕೆಂಬ ಹೇಳಿಕೆಗೆ ಬಿಜೆಪಿಯ ಸುವೇಂದು ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ವೇಳೆ ಮಮತಾ ಬ್ಯಾನರ್ಜಿ ಚಟರ್ಜಿಯನ್ನು ಗೌರವಿಸಲು ಬಯಸಿದರೆ ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸೀಸ್ ನಾಯಕ ಆ್ಯರೋನ್ ಫಿಂಚ್
ಬಿರ್ಬ್ಯೂಮ್ ಜಿಲ್ಲೆಯ ಮಂಗಲ್ ಕೋಟ್ ನಲ್ಲಿ 2010ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಕೋರ್ಟ್ ಅನುಬ್ರತಾ ಮೊಂಡಲ್ ಮತ್ತು ಇತರ 13 ಮಂದಿಯನ್ನು ಶುಕ್ರವಾರ (ಸೆ.09) ಖುಲಾಸೆಗೊಳಿಸಿ ಆದೇಶ ನೀಡಿತ್ತು.
ಅನುಬ್ರತಾ ಮೊಂಡಲ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಈ ಸಂದರ್ಭದಲ್ಲಿ ನೀವು (ಜನರು) ಅವರನ್ನು ಹೀರೋ ರೀತಿಯಲ್ಲಿ ಸ್ವಾಗತಿಸಬೇಕು ಎಂದು ಮಮತಾ ಬ್ಯಾನರ್ಜಿ ಗುರುವಾರ ಮಾತನಾಡುತ್ತ ತಿಳಿಸಿದ್ದರು.
ಈ ಬಗ್ಗೆ ತಿರುಗೇಟು ನೀಡಿರುವ ಬಿಜೆಪಿ ಮುಖಂಡ, ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ, ಒಂದು ವೇಳೆ ಮುಖ್ಯಮಂತ್ರಿ ಬ್ಯಾನರ್ಜಿ ಅವರು ಅನುಬ್ರತಾ ಮೊಂಡಲ್ ಗೆ ಹೀರೋ ರೀತಿ ಗೌರವಿಸಲು ಬಯಸಿದರೆ, ನಂತರ ಆಕೆ ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು