ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಅಜ್ಜ…ಆಂಬುಲೆನ್ಸ್ ರಸ್ತೆಗುಂಡಿಗೆ ಬಿದ್ದ ಬಳಿಕ ಜೀವಂತ!
Team Udayavani, Jan 13, 2024, 5:38 PM IST
ನವದೆಹಲಿ: ಮುಳುಗುತ್ತಿದ್ದವನಿಗೆ ಹುಲ್ಲುಕಡ್ಡಿ ಆಸರೆ ಎಂಬ ಗಾದೆ ಮಾತೊಂದಿದೆ. ಆದರೆ ಹರ್ಯಾಣದಲ್ಲೊಂದು ಅಚ್ಚರಿಯ ಘಟನೆಯೊಂದು ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 80 ವರ್ಷದ ಅಜ್ಜ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ ನಂತರ, ಕುಟುಂಬ ಸದಸ್ಯರು ಶವವನ್ನು ಆಂಬುಲೆನ್ಸ್ ನಲ್ಲಿ ಪಂಜಾಬ್ ನ ಕರ್ನಲ್ ಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ರಸ್ತೆಯಲ್ಲಿನ ದೊಡ್ಡ ಗುಂಡಿಗೆ ಹಾರಿತ್ತು…ತಕ್ಷಣವೇ ಆಂಬುಲೆನ್ಸ್ ನೊಳಗಿದ್ದ ಅಜ್ಜ ಉಸಿರಾಡಲು ಆರಂಭಿಸಿದ್ದರು!
ಇದನ್ನೂ ಓದಿ:Big Bash League; ಚೆಂಡು ವಿಕೆಟ್ ಗೆ ಬಡಿದರೂ ಬೀಳದ ಬೇಲ್ಸ್; ವಿಡಿಯೋ
ಈ ವ್ಯಕ್ತಿಯನ್ನು ದರ್ಶನ್ ಸಿಂಗ್ ಬ್ರಯಾರ್ ಎಂದು ಗುರುತಿಸಲಾಗಿದೆ. ಆಂಬುಲೆನ್ಸ್ ಗುಂಡಿಗೆ ಬಿದ್ದ ನಂತರ ಉಸಿರಾಟಲು ಆರಂಭಿಸಿದ ಅಜ್ಜನನ್ನು ಕರ್ನಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಪಂಜಾಬ್ ನ ಕರ್ನಲ್ ನಲ್ಲಿರುವ ಸಿಂಗ್ ಮನೆಯಲ್ಲಿ ಕುಟುಂಬ ಸದಸ್ಯರು ಒಟ್ಟುಗೂಡಿ ಅಂತ್ಯಸಂಸ್ಕಾರ ನಡೆಸಲು ಸಿದ್ಧತೆ ನಡೆಸುತ್ತಿದ್ದರು. ಏತನ್ಮಧ್ಯೆ ಆಂಬುಲೆನ್ಸ್ ರಸ್ತೆ ಗುಂಡಿಗೆ ಬಿದ್ದ ನಂತರ ಅಜ್ಜ ಕೈ ಅಲುಗಾಡಿಸುತ್ತಿರುವುದನ್ನು ಗಮನಿಸಿದ ಮೊಮ್ಮಗ ನಾಡಿಮಿಡಿತ ಪರೀಕ್ಷಿಸಿದ್ದ. ಆಗ ನಾಡಿ ಮತ್ತು ಹೃದಯ ಬಡಿತ ಕೇಳಿಸಿಕೊಂಡಿದ್ದು, ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಂತೆ ಆಂಬುಲೆನ್ಸ್ ಚಾಲಕನಿಗೆ ಮೊಮ್ಮಗ ಹೇಳಿರುವುದಾಗಿ ವರದಿ ವಿವರಿಸಿದೆ.
ಕೆಲವು ದಿನಗಳ ಹಿಂದೆ 80 ವರ್ಷದ ಸಿಂಗ್ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಪಟಿಯಾಲಾದ ಆಸ್ಪತ್ರೆಗೆ ದಾಖಲಿಸಿದ್ದರು. ಈ ಸಂದರ್ಭದಲ್ಲಿ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಿದ್ದು, ಗುರುವಾರ ಬೆಳಗ್ಗೆ ಸಿಂಗ್ ನಿಧನರಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮೊಮ್ಮಗ ಬಲ್ವಾನ್ ಸಿಂಗ್ ಎನ್ ಡಿಟಿವಿಗೆ ಪ್ರತಿಕ್ರಿಯೆ ನೀಡಿರುವುದಾಗಿ ವರದಿಯಾಗಿದೆ.
ಗುರುವಾರ ಬೆಳಗ್ಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿ, ಅಜ್ಜ ತೀರಿಕೊಂಡಿದ್ದು, ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿತ್ತು. ಇದೀಗ ಅಜ್ಜ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮರುಜನ್ಮ ಪಡೆದಿರುವುದಾಗಿ ಬಲ್ವಾನ್ ಸಿಂಗ್ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?