ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ
Team Udayavani, Nov 29, 2021, 8:59 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ಅರಣ್ಯದ ನಡುವೆ ಇರುವ ಬಿದಿರುತಳ ಗ್ರಾಮದಿಂದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು ಸೋಮವಾರ ಅರಣ್ಯ ಅಧಿಕಾರಿಗಳು, ಪೋಲಿಸರು, ಗ್ರಾಮಸ್ಥರು ಹುಡುಕಾಟ ನಡೆಸಿದರು.
ಬಾಳೂರಿನ ನಾಗೇಶ್ ಆಚಾರ್ (46) ಎಂಬುವವರು ಮನೆ ನಿರ್ಮಾಣ ಕೆಲಸಕ್ಕೆಂದು ಬಿದಿರುತಳ ಗ್ರಾಮಕ್ಕೆ ಕೆಲವು ದಿನಗಳ ಹಿಂದೆ ಹೋಗಿದ್ದು ಶನಿವಾರದಿಂದ ನಾಗೇಶ್ ಆಚಾರ್ ಅವರು ಕಾಣೆಯಾಗಿದ್ದಾರೆ. ಈ ಬಗ್ಗೆ ನಾಗೇಶ್ ಆಚಾರ್ ಅವರ ಪತ್ನಿ ಸುಮ ಬಾಳೂರು ಠಾಣೆಗೆ ದೂರು ನೀಡಿದ್ದು ಸೋಮವಾರ, ಬಾಳೂರು ಪೋಲಿಸರು, ಅರಣ್ಯ ಅಧಿಕಾರಿಗಳು ಹಾಗೂ 150 ಕ್ಕೂ ಹೆಚ್ಚು ಗ್ರಾಮಸ್ಥರು ಸೋಮವಾರ ಸಂಜೆಯವರೆಗೂ ಹುಡುಕಾಟ ನಡೆಸಿದ್ದು ನಾಗೇಶ್ ಅವರು ಪತ್ತೆಯಾಗಿಲ್ಲ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಬಾಳೂರು ಠಾಣೆ ಪಿಎಸ್ಐ ರೇಣುಕಾ, ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕುಣಿಗಲ್: ನೀರಿನಲ್ಲಿ ನಾಲ್ವರು ಕೊಚ್ಚಿಹೋದ ಪ್ರಕರಣ; 2 ಮೃತದೇಹ ಪತ್ತೆ, ಮುಂದುವರಿದ ಶೋಧಕಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ