Jawan:ಕ್ಷುಲ್ಲಕ ವಿಚಾರಕ್ಕೆ ಜಗಳ; ಯೋಧನಿಂದ ಕಪಾಳಮೋಕ್ಷ, ಸ್ಥಳದಲ್ಲೇ ಪ್ರಾಣಬಿಟ್ಟ ವ್ಯಕ್ತಿ
ಐಪಿಸಿ ಸೆಕ್ಷನ್ 304ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ
Team Udayavani, Sep 25, 2023, 11:02 AM IST
ಮಹಾರಾಷ್ಟ್ರ: ಕಾರಿನ ಹೆಡ್ ಲೈಟ್ ವಿಚಾರದಲ್ಲಿ ಆಕ್ರೋಶಗೊಂಡ ರಾಜ್ಯ ಮೀಸಲು ಪೊಲೀಸ್ ಪಡೆ(ಎಸ್ ಆರ್ ಪಿಎಫ್) ಯೋಧ ವ್ಯಕ್ತಿಯೊಬ್ಬರ ಕೆನ್ನೆಗೆ ಹೊಡೆದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಾಗ್ಪುರದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:Woman Biker: ನಿಯಮ ಉಲ್ಲಂಘನೆ, ಬೈಕ್ ನಿಲ್ಲಿಸಿದ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ
ನಾಗ್ಪುರದ ಮಾತಾ ಮಂದಿರ ಪ್ರದೇಶದ ವಾಥೋಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ, ಯೋಧ ನಿಖಿಲ್ ಗುಪ್ತಾ (30ವರ್ಷ) ತನ್ನ ಸಹೋದರಿ ಮನೆಗೆ ಭೇಟಿ ನೀಡಲು ಕಾರಿನಲ್ಲಿ ಆಗಮಿಸಿದ್ದು, ಕಾರನ್ನು ಪಾರ್ಕಿಂಗ್ ಮಾಡಿದ್ದ. ಆದರೆ ಕಾರಿನ ಹೆಡ್ ಲೈಟ್ ಎದುರು ನಿಂತಿದ್ದ ಮುರಳಿಧರ್ ರಾಮ್ ರಾವ್ ಜೀ ಅವರ ಕಣ್ಣಿಗೆ ಕುಕ್ಕುತ್ತಿತ್ತು. ಆಗ ಮುರಳಿಧರ್ ಅವರು ಕಾರಿನ ಹೆಡ್ ಲೈಟ್ ಆಫ್ ಮಾಡುವಂತೆ ವಿನಂತಿಸಿಕೊಂಡಿದ್ದರು.
ಆದರೆ ಗುಪ್ತಾ ಹೆಡ್ ಲೈಟ್ ಆಫ್ ಮಾಡುವುದಿಲ್ಲ ಎಂದಾಗ ಇಬ್ಬರ ನಡುವೆ ವಾಗ್ವಾದ ನಡೆದು, ಕೊನೆಗೆ ಗುಪ್ತಾ ಮುರಳಿಧರ್ ಅವರ ಕಪಾಳಕ್ಕೆ ಹೊಡೆದುಬಿಟ್ಟಿತ್ತ. ಬಲವಾದ ಹೊಡೆತದ ಪರಿಣಾಮ ಮುರಳಿಧರ್(54ವರ್ಷ) ಅವರು ಕುಸಿದುಬಿದ್ದು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದರು. ಬಳಿಕ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.
ಆರೋಪಿ ನಿಖಿಲ್ ಗುಪ್ತಾ ವಿರುದ್ಧ ಐಪಿಸಿ ಸೆಕ್ಷನ್ 304ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.