Watch; ಖತರ್ ನಾಕ್ ಕುರಿ ಕಳ್ಳ…ಚಲಿಸುತ್ತಿದ್ದ ಟ್ರಕ್ ಹತ್ತಿ ಕುರಿಗಳನ್ನು ರಸ್ತೆಗೆ ಎಸೆದ…
ಮಹಾರಾಷ್ಟ್ರ ಪೊಲೀಸರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
Team Udayavani, May 2, 2023, 5:45 PM IST
ಮುಂಬೈ: ಮಹಾರಾಷ್ಟ್ರದ ಜನನಿಬಿಡ ಪ್ರದೇಶದಲ್ಲಿ ತೆರಳುತ್ತಿದ್ದ ಟ್ರಕ್ ಏರಿದ ವ್ಯಕ್ತಿಯೊಬ್ಬ ಐದಾರು ಕುರಿಗಳನ್ನು ರಸ್ತೆಗೆ ಎಸೆದು ಕಳವುಗೈದಿರುವ ಘಟನೆ ನಡೆದಿದ್ದು, ಈ ಚಾಕಚಕ್ಯತೆ ಕಳ್ಳತನದ ಘಟನೆ ಕ್ಯಾಮರಾರದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Modi ಉಪನಾಮ ಹೇಳಿಕೆ: ರಾಹುಲ್ ಗಾಂಧಿ ಮೇಲ್ಮನವಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಯಾವಾಗ ಚಿತ್ರೀಕರಿಸಿದ್ದು ಎಂಬ ಮಾಹಿತಿ ಇಲ್ಲ. ಇದು ಉತ್ತರಪ್ರದೇಶದ ಕಾನ್ಪುರ್- ಉನ್ನಾವೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆಯಾಗಿದೆ ಎಂದು ತಿಳಿಸಲಾಗಿದೆ. ಆದರೆ ಈ ಘಟನೆ ಮಹಾರಾಷ್ಟ್ರದ ಇಗತ್ಪುರಿಯಲ್ಲಿ ನಡೆದಿರುವುದಾಗಿ ಮಹಾರಾಷ್ಟ್ರ ಪೊಲೀಸರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
कानपुर उन्नाव हाइवे पे ट्रक से बकरे चोरी करने वाला गिरोह जो लग्जरी कार से चोरी कर रहा….
वीडियो गौर से देखिए……..@Uppolice pic.twitter.com/ytC6m6owgI— Mohit Sharma (@Mohit_Casual_) April 30, 2023
ಈ ವಿಡಿಯೋವನ್ನು ಕೆಲವು ಪತ್ರಕರ್ತರು ಮತ್ತು ಟ್ವೀಟರ್ ಬಳಕೆದಾರರು ಶೇರ್ ಮಾಡಿದ್ದು, ಮಹಾರಾಷ್ಟ್ರ ನಾಸಿಕ್ ಸಮೀಪ ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ರಕ್ ಮೇಲೇರಿದ ವ್ಯಕ್ತಿಯೊಬ್ಬ ನಿರ್ದಯವಾಗಿ ಕುರಿಗಳನ್ನು ಕದ್ದು ರಸ್ತೆಗೆ ಎಸೆಯುತ್ತಿರುವ ದೃಶ್ಯ ಸೆರೆಯಾಗಿದೆ.
ಚಲಿಸುತ್ತಿದ್ದ ಟ್ರಕ್ ನಿಂದ ಸುಮಾರು ಐದಾರು ಕುರಿಗಳನ್ನು ರಸ್ತೆಗೆ ಎಸೆದ ಮೇಲೆ ಟ್ರಕ್ ಹಿಂಬದಿಯಿಂದ ಬಂದ ಕಾರಿನ ಬಾನೆಟ್ ಮೇಲೆ ಕಾಲಿಟ್ಟು ಕೆಳಗಿಳಿದಿರುವುದು ವಿಡಿಯೋದಲ್ಲಿದೆ. ಭಾರೀ ಟ್ರಾಫಿಕ್ ನಡುವೆಯೂ ಈ ವ್ಯಕ್ತಿ ಟ್ರಕ್ ಹತ್ತಿ ಕುರಿಗಳನ್ನು ಕಳ್ಳತನ ಮಾಡಿರುವ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!