ಕಳೆದ 2 ವರ್ಷದಿಂದ ನೆನಗುದಿಗೆ ಬಿದ್ದಿದ್ದ ಮಂಡ್ಯ ನಗರಸಭೆ ಆಡಳಿತ ಜೆಡಿಎಸ್ ತೆಕ್ಕೆಗೆ
Team Udayavani, Nov 2, 2020, 3:23 PM IST
ಮಂಡ್ಯ: ಕಳೆದ 2 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಮಂಡ್ಯ ನಗರಸಭೆಯ ಅಧಿಕಾರದ ಚುಕ್ಕಾಣಿಯನ್ನು ಜೆಡಿಎಸ್ ತನ್ನ ವಶಕ್ಕೆ ಪಡೆದುಕೊಂಡಿದೆ. ನೂತನ ಅಧ್ಯಕ್ಷರಾಗಿ ಎಸ್.ಎಸ್.ಮಂಜು ಹಾಗೂ ಉಪಾಧ್ಯಕ್ಷರಾಗಿ ಇಶ್ರತ್ ಫಾತಿಮಾ ಅವರು ಅವಿರೋಧವಾಗಿ ಆಯ್ಕೆಯಾದರು.
ಸೋಮವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಒಕ್ಕೊರಲ ಬೆಂಬಲದೊಂದಿಗೆ ಇದೇ ಮೊದಲ ಬಾರಿಗೆ ಅವಿರೋಧವಾಗಿ ಆಯ್ಕೆ ನಡೆಯಿತು.
ಜೆಡಿಎಸ್ನಿಂದ 20ನೇ ವಾರ್ಡ್ ನ ಎಚ್.ಎಸ್.ಮಂಜು ಹಾಗೂ ಕಾಂಗ್ರೆಸ್ನಿಂದ 10ನೇ ವಾರ್ಡ್ ನ ಶಿವಪ್ರಕಾಶ್ ಅವರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನಿಂದ 13ನೇ ವಾರ್ಡ್ ಇಶ್ರತ್ ಫಾತಿಮಾ ಹಾಗೂ ಕಾಂಗ್ರೆಸ್ನಿಂದ 5ನೇ ವಾರ್ಡ್ ನ ನಯೀಂ ಅವರು ಉಮೇದುವಾರಿಕೆ ಸಲ್ಲಿಸಿದ್ದರು. ಆದರೆ ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ನ ಇಬ್ಬರೂ ತಮ್ಮ ನಾಮಪತ್ರ ವಾಪಸ್ ಪಡೆದರು. ಈ ಹಿನ್ನೆಲೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿದ್ದ ನೇಹಾಜೈನ್ ಘೋಷಿಸಿದರು.
ನಗರಸಭೆ ಬಲಾಬಲ 35 ಸದಸ್ಯರಿದ್ದು, ಜೆಡಿಎಸ್ 18, ಕಾಂಗ್ರೆಸ್ 10, ಬಿಜೆಪಿ 2 ಹಾಗೂ ಪಕ್ಷೇತರ 5 ಮಂದಿ ಇದ್ದಾರೆ. ಜೆಡಿಎಸ್ಗೆ ಸ್ಪಷ್ಟ ಬಹುಮತವಿದ್ದು, ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಕಳೆದ 2 ವರ್ಷ 10 ತಿಂಗಳು ಮೀಸಲಾತಿ ಗೊಂದಲದಿಂದ ಸದಸ್ಯರು ಅಧಿಕಾರ ಪಡೆದಿರಲಿಲ್ಲ. ನಂತರ ಹೈಕೋರ್ಟ್ ನ.೨ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಅದರಂತೆ ಸೋಮವಾರ ಚುನಾವಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ