ಮದುವೆಯಿಂದ ಬಾಂಧವ್ಯ ಕೊನೆಗೊಳ್ಳುವ ಭೀತಿ : ಮನನೊಂದ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು
Team Udayavani, Jul 4, 2021, 8:03 PM IST
ಮಂಡ್ಯ: ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ನಿರ್ಧರಿಸಿದ್ದಾರೆ ಎಂದು ಮನನೊಂದು ಅವಳಿ ಸಹೋದರಿಯರಿಬ್ಬರು ನೇಣಿಗೆ ಶರಣಾದ ಧಾರುಣ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದ್ದು, ಸುರೇಶ್ ಮತ್ತು ಯಶೋಧ ದಂಪತಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಸಹೋದರಿಯರಾಗಿದ್ದಾರೆ.
ಈ ಇಬ್ಬರು ಅವಳಿ ಸಹೋದರಿಯರು ಚಿಕ್ಕಂದಿನಿಂದ ಬಹಳ ಅನ್ಯೋನ್ಯತೆಯಿಂದ ಇದ್ದು, ಇದೀಗ ಇಬ್ಬರು ಪುತ್ರಿಯರನ್ನು ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಬೇರೆ ಬೇರೆ ಮನೆಗೆ ಮದುವೆಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಬೆಳಗಾವಿ : ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆಯಾದ ಕೋವಿಡ್ ಪ್ರಕರಣ
ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ