ಮಂಗಳೂರು ಬಾಂಬ್ ಪತ್ತೆ ಕೇಸ್: ಆರೋಪಿ ಆದಿತ್ಯ ರಾವ್ ಪೊಲೀಸರಿಗೆ ಶರಣು
Team Udayavani, Jan 22, 2020, 9:10 AM IST
ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಪ್ರಮುಖ ಶಂಕಿತನಾಗಿದ್ದ ಉಡುಪಿ ಮೂಲದ ಆದಿತ್ಯ ರಾವ್ ಇಂದು ಬೆಂಗಳೂರು ಪೊಲೀಸರ ಮುಂದೆ ಶರಣಾಗಿದ್ದಾನೆ.
ಡಿಜಿ ಮತ್ತು ಐಜಿಪಿ ನೀಲಮಣಿ ರಾಜು ಅವರ ಮುಂದೆ ಶರಣಾಗಿದ್ದಾನೆ.
ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿತ್ತು. ಅದರಲ್ಲಿ ಸ್ಪೋಟಕ ಪತ್ತೆಯಾದ ಕೂಡಲೇ ಪೊಲೀಸರು ಸುರಕ್ಷಿತ ಕ್ರಮ ಕೈಗೊಂಡಿದ್ದರು. ನಂತರ ಅದೇ ದಿನ ಸಂಜೆ ಕೆಂಜಾರು ಮೈದಾನದಲ್ಲಿ ಅದನ್ನು ನಿಯಂತ್ರಿತ ಸ್ಫೋಟ ಮಾಡಲಾಗಿತ್ತು.
ಬಿಳಿ ಟೋಪಿ ಧರಿಸಿದ ವ್ಯಕ್ತಿಯೋರ್ವ ಬ್ಯಾಗ್ ಇರಿಸಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪೊಲೀಸರು ಈ ಚಿತ್ರವನ್ನು ಬಿಡುಗಡೆ ಮಾಡಿದ್ದರು.
ಸ್ಟೇಟ್ ಬ್ಯಾಂಕ್ ನಿಂದ ಖಾಸಗಿ ಸಿಟಿ ಬಸ್ಸಿನಲ್ಲಿ ಬಂದು ಕೆಂಜಾರಿನಲ್ಲಿ ಇಳಿದು ಬಳಿಕ ಆಟೋ ಹಿಡಿದು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಆರೋಪಿಯು ಅಲ್ಲಿ ಎಕ್ಸಿಟ್ ಟಿಕೆಟ್ ಕೌಂಟರ್ ಲಾಬಿ ಬಳಿ ಬ್ಯಾಗ್ ಅನ್ನು ಇರಿಸಿ ಬಳಿಕ ಪರಾರಿಯಾಗಿದ್ದು ಮೇಲ್ನೋಟಕ್ಕೆ ಪ್ರಾಥಮಿಕ ತನಿಖೆಯ ವೇಳೆ ಗೊತ್ತಾಗಿತ್ತು.
ಆರೋಪಿಯು ಬ್ಯಾಗನ್ನು ಇರಿಸಿ ಎಸ್ಕಲೇಟರ್ ಇಳಿದು ಬಳಿಕ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ವೇಗವಾಗಿ ಹೊರ ಹೋಗುತ್ತಿದ್ದ ದೃಶ್ಯಗಳೂ ಸಹ ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಶಂಕಿತ ಆರೋಪಿಯ ಫೋಟೋವನ್ನು ಹೋಲುವ ಉಡುಪಿ ಮೂಲದ ಆದಿತ್ಯ ರಾವ್ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಮಂಗಳವಾರ ಆತನ ಉಡುಪಿ ಮನೆಗೆ ಪೊಲೀಸರು ಭೆಟಿ ನೀಡಿದ್ದು, ಕುಟುಂಬಿಕರನ್ನು ವಿಚಾರಣೆ ನಡೆಸಿದ್ದರು.
ಬೆಂಗಳೂರಿನಲ್ಲಿ ಹುಸಿ ಬಾಂಬ್ ಕರೆ ಮಾಡಿ ಈತ ಎರಡು ವರ್ಷದ ಹಿಂದೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಈತನಿಗೆ ಜೈಲು ಶಿಕ್ಷೆಯೂ ಆಗಿತ್ತು ಎಂದು ವರದಿಯಾಗಿದೆ.
ಸದ್ಯ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರ ಮುಂದೆ ಶರಣಾಗಿದ್ದು, ಮುಂದಿನ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಚಹಲ್ 200 ವಿಕೆಟ್ಗಳ ಕಮಾಲ್; ಈ ಸಾಧನೆಗೈದ ಮೊದಲ ಬೌಲರ್
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ