ಪಾಲಿಕೆಯ ಆನ್‌ಲೈನ್‌ ಸೇವೆಗೆ ಗ್ರಹಣ

ಕೋವಿಡ್-19 : ಪಾಲಿಕೆಗೆ ಹೋಗಲು ಜನರ ಹಿಂದೇಟು

Team Udayavani, Jun 15, 2020, 6:30 AM IST

ಪಾಲಿಕೆಯ ಆನ್‌ಲೈನ್‌ ಸೇವೆಗೆ ಗ್ರಹಣ

ವಿಶೇಷ ವರದಿ-ಮಹಾನಗರ: ಕೋವಿಡ್-19 ಕಾರಣದಿಂದ ಸಾರ್ವಜನಿಕರು ಕಚೇರಿ ಗಳಿಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದು, ಆನ್‌ಲೈನ್‌ ಸೇವೆಗೆ ಒಗ್ಗಿಕೊಳ್ಳುತ್ತಿದ್ದಾರೆ. ಆದರೆ ಮಂಗಳೂರು ಪಾಲಿಕೆ ಇನ್ನೂ ಆನ್‌ಲೈನ್‌ ಸೇವೆಯನ್ನು ಪೂರ್ಣ ಮಟ್ಟದಲ್ಲಿ ಜಾರಿಗೊಳಿಸದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೋವಿಡ್-19 ಆತಂಕದ ಮಧ್ಯೆ ಪಾಲಿಕೆಗೆ ಸುತ್ತಾಡುವ ಪ್ರಮೇಯ ಎದುರಾಗಿದೆ.

ಪಾಲಿಕೆ ಅಧಿಕಾರಿಗಳ ಪ್ರಕಾರ ಆನ್‌ಲೈನ್‌ ವ್ಯವಸ್ಥೆಗೆ ಡಾಟಾ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ಮುಂಬರುವ ಸಭೆಯಲ್ಲಿ ಟೆಂಡರ್‌ಗೆ ಅನುಮೋದನೆ ಪಡೆದು ಪ್ರಕ್ರಿಯೆ ಆರಂಭಿಸಲು ತೀರ್ಮಾನಿಸಲಾಗಿದೆ. ಆನ್‌ಲೈನ್‌ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬ್ಯಾಂಕ್‌ ಅಧಿಕಾರಿಗಳ ಜತೆ ಮಾತುಕತೆ ನಡೆಸಬೇಕಿದೆ.

ವೆಬ್‌ಸೈಟ್‌ನಲ್ಲಿ ಪಾವತಿ ಚಿಂತನೆ
ಮೊಬೈಲ್‌ ಆ್ಯಪ್‌ ಮೂಲಕ ಗ್ರಾಹಕರಿಗೆ ಆನ್‌ಲೈನ್‌ ಸೇವೆ ಒದಗಿಸುವುದು ಪಾಲಿಕೆಯ ಉದ್ದೇಶವಾಗಿತ್ತು. ಆದರೆ ಇದೀಗ ಮೊದಲ ಹಂತದಲ್ಲಿ ಪಾಲಿಕೆಯ ವೆಬ್‌ಸೈಟ್‌ನಲ್ಲಿಯೇ ಹಣ ಪಾವತಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ.

ಈಗಾಗಲೇ ತುಮಕೂರು ನಗರ ಪಾಲಿಕೆ ಸೇರಿದಂತೆ ಕೆಲವೆಡೆ ಬಿಲ್‌ ಪಾವತಿಗೆ ಆನ್‌ಲೈನ್‌ ವ್ಯವಸ್ಥೆ ಜಾರಿಯಲ್ಲಿದ್ದು, ಇದೇ ಮಾದರಿಯನ್ನು ಮನಪಾದಲ್ಲೂ ಜಾರಿಗೊಳಿಸಿ ಎಲ್ಲ ಪೌರ ಸೇವೆಗಳು ಜನರಿಗೆ ಕುಳಿತಲ್ಲಿಯೇ ಸಿಗುವಂತೆ ಮಾಡುವ ಪರಿಕಲ್ಪನೆ ಹೊಂದಲಾಗಿತ್ತು.

ಆನ್‌ಲೈನ್‌ಗೆ ಇ-ಖಾತಾ ಸೇರ್ಪಡೆ
ರಾಜ್ಯದಲ್ಲಿ ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಇ-ತಂತ್ರಾಂಶ ವ್ಯವಸ್ಥೆ ಯಡಿ ಖಾಲಿ ನಿವೇಶನ ಮತ್ತು ಕಟ್ಟಡಗಳ ಅರ್ಜಿಗಾಗಿ ಇ-ಖಾತೆ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಇ-ಖಾತಾ ವಿತರಣೆಗೆ 45 ದಿನಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಸದ್ಯ180 ಅರ್ಜಿಗಳು ಬಂದಿವೆ. 50ರಷ್ಟು ವಿಲೇವಾರಿ ಆಗಿವೆ. ಕೆಲವು ತಾಂತ್ರಿಕ ತೊಂದರೆಯಿಂದಾಗಿ ವಿಳಂಬವಾಗುತ್ತಿವೆ ಎನ್ನುತ್ತಾರೆ ಅಧಿಕಾರಿಗಳು.

ಭರವಸೆಗೆ ಹಲವು ವರ್ಷ!
ಪಾಲಿಕೆ ಸೇವೆಗಳು ಆನ್‌ಲೈನ್‌ನಲ್ಲಿ ಸಿಗಲಿವೆ ಎಂದು ಮನಪಾ ಜನಪ್ರತಿನಿಧಿಗಳು ವರ್ಷಗಳ ಹಿಂದೆ ಭರವಸೆ ನೀಡಿದ್ದರು. ನೀರಿನ ಶುಲ್ಕ, ನೀರಿನ ಸಂಪರ್ಕ, ಯುಜಿಡಿ ಸಂಪರ್ಕ, ಪುರಭವನದ ಬಾಡಿಗೆ, ಮೈದಾನದ ಬಾಡಿಗೆ ಸಹಿತ ಪಾಲಿಕೆಯ 10 ಸೇವೆಗಳನ್ನು ಆನ್‌ಲೈನ್‌ ಮೂಲಕ ಒದಗಿಸುವುದು ಉದ್ದೇಶವಾಗಿತ್ತು. ಆದರೆ ಬೇರೆ ಬೇರೆ ನೆಪಗಳನ್ನು ಹೇಳುತ್ತಾ ಮುಂದೂಡಲಾಗುತ್ತಿದೆ.

ಇ-ಖಾತ ಸೇವೆ ಆರಂಭ
ಮಹಾನಗರ ಪಾಲಿಕೆಯ ಆನ್‌ಲೈನ್‌ ವ್ಯವಸ್ಥೆ ಕೊನೆಯ ಹಂತದಲ್ಲಿದೆ. ಮುಂಬರುವ ಕೌನ್ಸಿಲ್‌ ಸಭೆಯಲ್ಲಿ ಟೆಂಡರ್‌ ಕರೆಯುತ್ತೇವೆ. ಬಳಿಕ ಕೆಲವೇ ತಿಂಗಳುಗಳಲ್ಲಿ ಈ ಸೇವೆ ಸಾರ್ವಜನಿಕರಿಗೆ ಸಿಗಲಿವೆ. ಸದ್ಯ ಇ-ಖಾತೆ ಸೇವೆ ಆರಂಭವಾಗಿದೆ.
 - ದಿವಾಕರ ಪಾಂಡೇಶ್ವರ, ಪಾಲಿಕೆ ಮೇಯರ್‌

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.