ಮಂಗಳೂರು ಹಿಂಸಾಚಾರ; ರಾಜ್ಯ ಸರ್ಕಾರ ಪರಿಹಾರ ಏಕೆ ಘೋಷಿಸಿತು? ಎಚ್ ಡಿಕೆ ಟ್ವೀಟ್
ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ?
Team Udayavani, Dec 24, 2019, 2:56 PM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸ್ ಇಲಾಖೆ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆಗೊಳಿಸಿದ್ದು, ಏತನ್ಮಧ್ಯೆ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ? ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯ ಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು? ಎಂದು ಎಚ್ ಡಿಕೆ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ? ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ? ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಕೇಳಿದ್ದಾರೆ.
ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತಾ ಇಲ್ಲ. ಆದರೆ ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ. ಇದಕ್ಕೆ ಸಂಬಂಧಿಸಿದವರು ಉತ್ತರ ಕೊಡುವರೇ?
ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ?
ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?
(2/4)— H D Kumaraswamy (@hd_kumaraswamy) December 24, 2019
ಬಿಜೆಪಿ ಅಂಗ ಪಕ್ಷಗಳೇ ಸಿಎಎ ವಿರೋಧಿಸುತ್ತಿದ್ದಾರೆ. ಸಿಎಎ ಮತ್ತು ಎನ್ ಆರ್ ಸಿ ಬಗ್ಗೆ ಮೋದಿ ಮತ್ತು ಅಮಿತ್ ಶಾ ಹೇಳಿಕೆಗಳು ವಿಭಿನ್ನವಾಗಿವೆ. ಕಲ್ಲು ಹೊಡೆದರೂ ತಪ್ಪು, ಗುಂಡು ಹೊಡೆದರೂ ತಪ್ಪು ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ?
ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?
(3/4)— H D Kumaraswamy (@hd_kumaraswamy) December 24, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?