ಮಧುಮೇಹ ನಿಯಂತ್ರಣಕ್ಕೆ ಮಾವಿನ ಎಲೆ ಉಪಕಾರಿ
ನೀರಿನಲ್ಲಿ ಮಾವಿನ ಎಲೆಯನ್ನು ಕುದಿಸಿ ಕುಡಿಯುವುದರಿಂದ ಅಸ್ತಮಾವನ್ನು ನಿಯಂತ್ರಣದಲ್ಲಿಡಬಹುದು.
Team Udayavani, Jun 18, 2022, 5:15 AM IST
ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವು ಕೇವಲ ಹಣ್ಣಿನ ರುಚಿ ಮಾತ್ರವಲ್ಲದೆ ಇದರಲ್ಲಿ ಹಲವು ಔಷಧ ಗುಣಗಳಿಗೆ ಖ್ಯಾತಿ ಪಡೆದಿದೆ. ಮಾವಿನ ಹಣ್ಣಿನಲ್ಲಿ ಸಿಗುವ ವಿಟಮಿನ್ “ಸಿ’ ಅಂಶ ದೇಹಕ್ಕೆ ರೋಗನಿರೋಧಕ ಶಕ್ತಿ ಒದಗಿಸುತ್ತದೆ. ಬರೀ ಮಾವಿನ ಹಣ್ಣು ಮಾತ್ರವಲ್ಲದೆ ಇದರ ಎಲೆಗಳು ಕೂಡ ಅನೇಕ ಔಷಧ ಗುಣಗಳನ್ನು ಹೊಂದಿವೆ. ಇದಲ್ಲಿರುವ ಔಷಧೀಯ ಅಂಶಗಳು ಮಧುಮೇಹದಂತಹ ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ. ಅಂತಹ ಕೆಲವು ವಿವರಗಳು ಕೆಳಗಿನಂತಿವೆ.
ಮಧುಮೇಹ ನಿಯಂತ್ರಣ
ಮಾವಿನ ಎಲೆಗಳು ಮಧುಮೇಹಿಗಳಿಗೆ ಉತ್ತಮವಾದ ಔಷಧ. ಇದರ ಎಲೆಗಳಲ್ಲಿರುವ ಪೋಷಕಾಂಶಗಳು ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ನಿಯಂತ್ರಣದಲ್ಲಿರಿಸುವ ಸಾಮರ್ಥ್ಯ ಹೊಂದಿದೆ. 3ರಿಂದ 4 ಮಾವಿನ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ. ಅನಂತರ ಸುಮಾರು 24 ಗಂಟೆಗಳ ಕಾಲ ಹಾಗೆಯೇ ಬಿಟ್ಟು. ಮರುದಿನ ಬೆಳಗ್ಗೆ ಆ ಬೇಯಿಸಿದ ನೀರನ್ನು ಫಿಲ್ಟರ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಮಧುಮೇಹ ನಿಯಂತ್ರಣಕ್ಕೆ ತರಬಹುದು.
ಅಸ್ತಮಾಕ್ಕೆ ಚಿಕಿತ್ಸೆ
ಅಸ್ತಮಾ ರೋಗ ನಿಯಂತ್ರಣಕ್ಕೆ ಮಾವಿನ ಎಲೆಗಳು ಔಷಧಯಾಗಿವೆ. ನೀರಿನಲ್ಲಿ ಮಾವಿನ ಎಲೆಯನ್ನು ಕುದಿಸಿ ಕುಡಿಯುವುದರಿಂದ ಅಸ್ತಮಾವನ್ನು ನಿಯಂತ್ರಣದಲ್ಲಿಡಬಹುದು.
ಸೋಂಕಿನಿಂದ ರಕ್ಷಣೆ
ಮಾವಿನ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಮತ್ತು ಔಷಧ ಗುಣಗಳು ಹಲವು ರೀತಿಯ ಬ್ಯಾಕ್ಟೀರಿಯಾಗಳ ಸೋಂಕಿನಿಂದ ದೇಹವನ್ನು ರಕ್ಷಿಸುತ್ತವೆ. ವಿಶೇಷವಾಗಿ ಜೀರ್ಣ ಕ್ರಿಯೆಯಲ್ಲಿ ತೊಂದರೆ ಮತ್ತು ಗಡ್ಡೆಗಳಾಗದಂತೆ ನೋಡಿಕೊಳ್ಳುತ್ತದೆ.
ರಕ್ತದೊತ್ತಡಕ್ಕೆ ಪರಿಣಾಮಕಾರಿ ಔಷಧ
ಈಗಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಹೆಚ್ಚಾಗಿ ಕಾಣಸಿಗುವ ರೋಗಗಳಲ್ಲಿ ಒಂದಾಗಿದೆ. ಉಪ್ಪು ಸೇವನೆಯಲ್ಲಿ ಜಾಗರೂಕತೆ ಮಾಡುವುದರಿಂದ ಇದನ್ನು ಹತೋಟಿಯಲ್ಲಿಡಬಹುದು. ಇದಲ್ಲದೆ ಮಾವಿನ ಎಲೆ ಚಹಾ ಸೇವನೆ ರಕ್ತದೊತ್ತಡ ನಿಯಂತ್ರಣಕ್ಕೆ ಔಷಧವಾಗಿದೆ.
ವೈರಸ್ಗಳ ಸೋಂಕಿನಿಂದ ರಕ್ಷಣೆ
ಮಾವಿನ ಎಲೆಗಳನ್ನು ಕೊಳೆಸಿ ದಾಗ ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ಗಳು ಹೆಚ್ಚಾ ಗುತ್ತವೆ. ಈ ದ್ರವ ಒಂದು ಉತ್ತಮ ಸೌಂದರ್ಯವರ್ಧಕವೂ ಹೌದು. ವೈರಸಿನ ಸೋಂಕು ಇರುವಲ್ಲಿ ಈ ದ್ರವವನ್ನು ಬಳಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಈ ಸೋಂಕನ್ನು ಎದುರಿಸಲು ಹೆಚ್ಚು ಸಬಲಗೊಂಡಿರುವುದು ಸಂಶೋಧನೆಗಳಲ್ಲಿ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು