ರಾಯರ ಬೃಂದಾವನ ದರ್ಶನ ಪುನರಾರಂಭ : ಮಂತ್ರಾಲಯದಲ್ಲಿ 52 ದಿನಗಳ ಬಳಿಕ ಅವಕಾಶ
Team Udayavani, Jun 23, 2021, 9:30 AM IST
ರಾಯಚೂರು: ಕೊರೊನಾದಿಂದಾಗಿ 52 ದಿನಗಳಿಂದ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ ದರ್ಶನವನ್ನು ಶ್ರೀಮಠದ ಆಡಳಿತ ಮಂಡಳಿ ಪುನರಾರಂಭಿಸಿದೆ.
ಆಂಧ್ರ ಸರಕಾರದ ಮಾರ್ಗ ಸೂಚಿ ಗಳನ್ವಯ ದರ್ಶನಕ್ಕೆ ಅನುವು ಮಾಡಿ ಕೊಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗ ಸೂಚಿ ಪ್ರಕಾರ ದರ್ಶನಕ್ಕೆ ಅವ ಕಾಶ ಕಲ್ಪಿಸಿದ್ದು, ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆಗೆ ಅವಕಾಶ ಇಲ್ಲ. ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಂಡು ರಾಯರ ಮೂಲ ಬೃಂದಾವನ ದರ್ಶನ ಪಡೆಯಬಹುದು. ಬೆಳಗ್ಗೆ 6ರಿಂದ ಅಪರಾಹ್ನ 2ರ ವರೆಗೆ, ಸಂಜೆ 4ರಿಂದ ರಾತ್ರಿ 9ರ ವರೆಗೆ ದರ್ಶನಕ್ಕೆ ಅವಕಾಶ ಇದೆ. ಜತೆಗೆ ವಿವಿಧ ಊರುಗಳಿಂದ ಬರುವ ಭಕ್ತರಿಗೆ ಮಠದ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಅವಕಾಶ ಕಲ್ಪಿಸಲಾಗಿದೆ.
ರಾಯರ ದರ್ಶನಕ್ಕೆ ಅನನುಕೂಲ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಕಾರಣದಿಂದಾಗಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ರಾಯರ ದರ್ಶನ ಪಡೆಯಬೇಕು.
– ಶ್ರೀ ಸುಬುಧೇಂದ್ರತೀರ್ಥರು, ರಾಘವೇಂದ್ರ ಮಠದ ಪೀಠಾಧಿಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ