ದಿ ಕಾಶ್ಮೀರ್ ಫೈಲ್ಸ್: ರಾಜ್ಯದಲ್ಲಿ 90ರ ದಶಕ ಮತ್ತು ನಂತರ ಯಾರು ಅಧಿಕಾರದಲ್ಲಿದ್ರು? ಒಮರ್
1990ರ ದಶಕದಲ್ಲಿ ಜಮ್ಮು-ಕಾಶ್ಮೀರದಿಂದ ಕೇವಲ ಕಾಶ್ಮೀರ ಪಂಡಿತರ ವಲಸೆಯಾಗಲಿ, ಹತ್ಯೆಯಾಗಲಿ ನಡೆದಿಲ್ಲ.
Team Udayavani, Mar 18, 2022, 4:42 PM IST
ಜಮ್ಮು-ಕಾಶ್ಮೀರ:ಬಾಲಿವುಡ್ ನ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಸತ್ಯಕ್ಕೆ ದೂರವಾದ ಹಲವಾರು ಅಂಶಗಳನ್ನು ಬಿಂಬಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಾಧ್ಯಕ್ಷ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಇದನ್ನೂ ಓದಿ:ರಾಷ್ಟ್ರೀಯ ತಂಡದ ಬದಲು ಐಪಿಎಲ್ ಆಯ್ಕೆ ಮಾಡಿದ ದ.ಆಫ್ರಿಕಾದ 5 ಆಟಗಾರರು; ಟೆಸ್ಟ್ ತಂಡದಿಂದ ಔಟ್
ಸುದ್ದಿಗಾರರ ಜತೆ ಮಾತನಾಡಿದ ಒಮರ್, ಇದೊಂದು ಸಿನಿಮಾನೋ ಅಥವಾ ಸಾಕ್ಷ್ಯಚಿತ್ರವೋ ಎಂಬುದು ಸ್ಪಷ್ಟವಾಗಿಲ್ಲ. ಈ ಸಿನಿಮಾವನ್ನು ಸತ್ಯ ಘಟನೆ ಆಧಾರದ ಮೇಲೆ ಚಿತ್ರೀಕರಿಸಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಆದರೆ ಸಿನಿಮಾದಲ್ಲಿ ಹಲವಾರು ಅಂಶಗಳು ಸುಳ್ಳಿನಿಂದ ಕೂಡಿದೆ. ಅದರಲ್ಲಿಯೂ ಮುಖ್ಯವಾಗಿ ಅಂದು ರಾಜ್ಯದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ಅಧಿಕಾರದಲ್ಲಿತ್ತು ಎಂಬುದು ದೊಡ್ಡ ಸುಳ್ಳು. 1990ರಲ್ಲಿ ಜಮ್ಮು-ಕಾಶ್ಮೀರದಿಂದ ಕಾಶ್ಮೀರಿ ಪಂಡಿತರು ವಲಸೆ ಹೋದ ಸಂದರ್ಭದಲ್ಲಿ ರಾಜ್ಯಪಾಲರ ಆಡಳಿತವಿತ್ತು. ಕೇಂದ್ರದಲ್ಲಿ ವಿಪಿ ಸಿಂಗ್ ನೇತೃತ್ವದ ಸರ್ಕಾರವಿತ್ತು. 90ರ ದಶಕದಲ್ಲಿ ರಾಜ್ಯಪಾಲರ ಆಡಳಿತದ ನಂತರ ಆರು ವರ್ಷಗಳ ಕಾಲ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿವಿತ್ತು ಎಂದು ಒಮರ್ ತಿಳಿಸಿದ್ದಾರೆ.
1990ರ ದಶಕದಲ್ಲಿ ಜಮ್ಮು-ಕಾಶ್ಮೀರದಿಂದ ಕೇವಲ ಕಾಶ್ಮೀರ ಪಂಡಿತರ ವಲಸೆಯಾಗಲಿ, ಹತ್ಯೆಯಾಗಲಿ ನಡೆದಿಲ್ಲ. ಮುಸ್ಲಿಮ್, ಸಿಖ್ಖರು ಹತ್ಯೆಗೀಡಾಗಿದ್ದಾರೆ. ಸಿಖ್ಖ, ಮುಸ್ಲಿಮರು ಕೂಡಾ ಕಾಶ್ಮೀರದಿಂದ ವಲಸೆ ಹೋಗಿದ್ದು, ಈವರೆಗೂ ವಾಪಸ್ ಆಗಿಲ್ಲ ಎಂದು ಒಮರ್ ಹೇಳಿದರು.
ನ್ಯಾಷನಲ್ ಕಾನ್ಫರೆನ್ಸ್ ಅಧಿಕಾರಕ್ಕೆ ಬಂದ ಮೇಲೆ ಕಾಶ್ಮೀರ ಪಂಡಿತರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಸತತವಾಗಿ ಪ್ರಯತ್ನಿಸಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ