ಮರವೂರು ಸೇತುವೆ: ಜಗ್ಗಿದ ಪಿಲ್ಲರ್ ಮರುಸ್ಥಾಪನೆ
Team Udayavani, Jul 17, 2021, 6:55 AM IST
ಬಜಪೆ/ಮಂಗಳೂರು: ವಿಮಾನ ನಿಲ್ದಾಣ ವನ್ನು ಸಂಪರ್ಕಿಸುವ ಮುಖ್ಯ ರಸ್ತೆಯ ಮರವೂರು ಬಳಿ ಪಿಲ್ಲರ್ ಜಗ್ಗಿ ಬಿರುಕು ಬಿಟ್ಟಿದ್ದ ಸೇತುವೆಯ ಪಿಲ್ಲರ್, ಸ್ಲ್ಯಾಬ್ ಅನ್ನು ಮೇಲಕ್ಕೆತ್ತಿ ಶುಕ್ರವಾರ ಸೇತುವೆಯನ್ನು ಯಥಾ ಸ್ಥಿತಿಗೆ ತರಲಾಗಿದ್ದು, 2 ವಾರದೊಳಗೆ ಇನ್ನುಳಿದ ಸುರಕ್ಷಾ ಕ್ರಮಗಳನ್ನು ಪೂರೈಸಿ ಆಗಸ್ಟ್ನಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆ ಇದೆ.
ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಬೆಂಗಳೂರು ಮತ್ತು ಕೇರಳದ ತಂತ್ರಜ್ಞರ ಸಲಹೆ ಪಡೆದು ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಸ್ಲ್ಯಾಬ್ ಮೇಲಕ್ಕೆತ್ತುವ ಕಾಮಗಾರಿ ಗುರುವಾರ ರಾತ್ರಿ ಆರಂಭವಾಗಿದ್ದು ಶುಕ್ರವಾರ ಮಧ್ಯಾಹ್ನ ಪೂರ್ಣಗೊಂಡಿತು.
ಲೋಕೋಪಯೋಗಿ ಇಲಾಖೆಯ ಮಂಗಳೂರು ವಿಭಾಗವು ಗುತ್ತಿಗೆದಾರ ಸಂಸ್ಥೆ ಮುಗ್ರೋಡಿ ಕನ್ಸ್ಟ್ರಕ್ಷನ್ಸ್ನ ಮೂಲಕ ಕಾಮಗಾರಿಯನ್ನು ನಿರ್ವಹಿಸಿದೆ ಎಂದು ಪಿಡಬ್ಯು ಡಿ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು – ಆತ್ರಾಡಿ ರಾಜ್ಯ ಹೆದ್ದಾರಿ -67ರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ರಸ್ತೆಯ ಮರವೂರು ಬಳಿ ಫಲ್ಗುಣಿ ನದಿಗೆ 54 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆಯ ಕೊನೆಯ ಪಿಲ್ಲರ್ ಜೂನ್ 15ರ ಮುಂಜಾನೆ 2.50 ಅಡಿಗಳಷ್ಟು
ಜಗ್ಗಿದ ಪರಿಣಾಮ ಸೇತುವೆ ಬಿರುಕು ಬಿಟ್ಟಿತ್ತು. ಒಂದು ತಿಂಗಳಿನಿಂದ ಇಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದ್ದು, ಆ ಕಾಮಗಾರಿಯಿಂದಾಗಿ ಮಳೆ ನೀರು ಸೇತುವೆಯ ಪಿಲ್ಲರ್ ಇರುವಲ್ಲಿ ಒಂದೇ ಭಾಗದಲ್ಲಿ ಹರಿಯುವಂತೆ ಆದದ್ದು ಪಿಲ್ಲರ್ ಜಗ್ಗಲು ಕಾರಣ ಎಂದು ಅಭಿಪ್ರಾಯ ಪಡಲಾಗಿತ್ತು.
ಸೇತುವೆಯನ್ನು ಪುನಃಸ್ಥಾಪನೆ ಮಾಡುವ ನಿಟ್ಟಿನಲ್ಲಿ ಜಗ್ಗಿದ ಸ್ಲ್ಯಾಬನ್ನು ಎತ್ತರಿಸಿ ಶುಕ್ರವಾರ ಮಧ್ಯಾಹ್ನ ವೇಳೆಗೆ ಯಥಾ ಸ್ಥಿತಿಗೆೆ ತರಲಾಗಿದೆ. 2 ವಾರಗಳಲ್ಲಿ ಇನ್ನುಳಿದ ಸುರಕ್ಷಾ ಕ್ರಮಗಳನ್ನು ನಿರ್ವಹಿಸಿ ಲೋಡ್ ಟೆಸ್ಟಿಂಗ್ ಮಾಡಿ ದೃಢಪಡಿಸಿಕೊಂಡ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
– ಯಶವಂತ್, ಎಕ್ಸಿಕ್ಯೂಟಿವ್ ಎಂಜಿನಿಯರ್, ಪಿಡಬ್ಯು ಡಿ, ಮಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ