ಕಲಬುರಗಿಯಲ್ಲಿ ಮುಂದುವರೆದ ಗಾಂಜಾ ಬೇಟೆ: ಚಿಂಚೋಳಿಯಲ್ಲಿ ಮತ್ತೆ 62 ಕೆಜಿ ಗಾಂಜಾ ಜಪ್ತಿ
Team Udayavani, Sep 12, 2020, 6:58 PM IST
ಚಿಂಚೋಳಿ (ಕಲಬುರಗಿ): ತಾಲೂಕಿನಲ್ಲಿ ಗಾಂಜಾ ವಿರುದ್ಧ ಪೊಲೀಸರು ಕರ್ಯಾಚರಣೆ ಮುಂದುವರೆಸಿದ್ದು, ಸಲಗರ ಬಸಂತಪೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಧರಿ ತಾಂಡಾದಲ್ಲಿ ದಾಳಿ ಮಾಡಿ ಮನೆಯ ಮುಂದೆ ಹಾಗೂ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 62 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
2.50 ಲಕ್ಷ ರೂ. ಮೌಲ್ಯದ 1 ಕೆಜಿ ಒಣ ಗಾಂಜಾ ಮತ್ತು 61 ಕೆಜಿ ಹಸಿ ಗಾಂಜಾವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಧರಿತಾಂಡಾದ ಆರೋಪಿ ಧನಸಿಂಗ ರಾಮಚಂದ್ರ ರಾಠೋಡ ಎಂಬಾತ ತನ್ನ ಮನೆ ಮುಂದೆ ಹಾಗೂ ಮನೆ ಹಿಂದೆ ಇರುವ ಜಮೀನುದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚಿಂಚೋಳಿ ಡಿವೈಎಸ್ಪಿ ಈ.ಎಸ್.ವೀರಭದ್ರಯ್ಯ, ಸಿಪಿಐ ಮಹಾಂತೇಶ ಪಾಟೀಲ ಮರ್ಗರ್ಶನದಲ್ಲಿ ಚಿಂಚೋಳಿ ಠಾಣೆ ಪಿಎಸ್ಐ ರಾಜಶೇಖರ ರಾಠೋಡ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಧನಸಿಂಗ ರಾಮಚಂದ್ರ ರಾಠೋಡ ಪೊಲೀಸರು ಬರುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾಗಿದ್ದಾನೆ. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ 38 ಕೆ.ಜಿ. ಹಾಗೂ ಕಳೆದ ವಾರ 88 ಕೆಜಿ ಗಾಂಜಾವನ್ನು ಚಿಂಚೋಳಿ ಪೊಲೀಸರು ಜಪ್ತಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ