ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ವಿಳಂಬ

ಫೆಬ್ರವರಿಯಿಂದೀಚೆಗೆ ಸಿಕ್ಕಿಲ್ಲ ಮಾಸಾಶನ ; ಲಾಕ್‌ಡೌನ್‌ ಗಾಯದ ಮೇಲೆ ಬರೆ

Team Udayavani, May 11, 2020, 5:30 AM IST

ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ವಿಳಂಬ

ಸಾಂದರ್ಭಿಕ ಚಿತ್ರ.

ಉಡುಪಿ: ಕೋವಿಡ್ -19 ಲಾಕ್‌ಡೌನ್‌ ಸಂಕಟದ ಜತೆಗೆ ಕಳೆದ ಮೂರು ತಿಂಗಳುಗಳಿಂದ ಮಾಸಾಶನವೂ ಸ್ಥಗಿತಗೊಂಡಿರುವುದರಿಂದ ಅಶಕ್ತರ ಬದುಕು ಇನ್ನಷ್ಟು ದುರ್ಭರವಾಗಿದೆ.

ಸಾಮಾಜಿಕ ಭದ್ರತಾ ಯೋಜನೆಯ ಅನ್ವಯ ಅಂಗವಿಕಲರ, ವೃದ್ಧರ, ವಿಧವೆಯರ ವೇತನ,ಸಂಧ್ಯಾ ಸುರಕ್ಷಾ ಸಹಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಬಹುತೇಕ ಎಲ್ಲ ಮಾಸಾ ಶನಗಳು ಹಲವು ಫ‌ಲಾನು ಭವಿಗಳಿಗೆ ಫೆಬ್ರವರಿಯಿಂದೀಚೆಗೆ ವಿತರಣೆಯಾಗಿಲ್ಲ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,76,500ಕ್ಕೂ ಅಧಿಕ ಮಂದಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 1,29,479ಕ್ಕೂ ಹೆಚ್ಚು ಮತ್ತು ದ.ಕ. ಜಿಲ್ಲೆಯಲ್ಲಿ 1,47,950ಕ್ಕೂ ಅಧಿಕ ಮಂದಿ ಇದ್ದಾರೆ.

ಈ ಫ‌ಲಾನುಭವಿಗಳ ಖಾತೆಗೆ ಪ್ರತೀ ತಿಂಗಳ 10ನೇತಾರೀಕಿನೊಳಗೆ ಪಿಂಚಣಿ ಜಮೆಯಾಗುತ್ತಿತ್ತು. ಆರಂಭದಲ್ಲಿ ಕಂದಾಯ ಇಲಾಖೆಯಲ್ಲಿ ಸಾಫ್ಟ್ವೇರ್‌ ಅಪ್‌ಡೇಟ್‌ ವೇಳೆ ಉಂಟಾದ ತಾಂತ್ರಿಕ ತೊಂದರೆಗಳು ಇದಕ್ಕೆ ಕಾರಣ, ಬಳಿಕ ಲಾಕ್‌ಡೌನ್‌ನಿಂದಲೂ ಅಡಚಣೆಯಾಯಿತು ಎಂದು ಅಧಿಕಾರಿಗಳು ಹೇಳುತ್ತಾರೆ.

ತುರ್ತು ಸಂದರ್ಭಕ್ಕೂ ಹಣವಿಲ್ಲ
ಪ್ರತೀ ತಿಂಗಳು ಮಾಸಾಶನದಿಂದ ಔಷಧ, ಇನ್ನಿತರ ಅಗತ್ಯಗಳನ್ನು ಪೂರೈಸಿಕೊಳ್ಳುತ್ತಿದ್ದೇವೆ. 2-3 ತಿಂಗಳಿಂದ ಮಾಸಾಶನ ಬಾರದೆ ಇರುವುದರಿಂದ ತೊಂದರೆ ಆಗಿದೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ ಫ‌ಲಾನುಭವಿಗಳು.

“ಫೋನ್‌ ಇನ್‌’ನಲ್ಲಿ ಪ್ರಸ್ತಾವ
“ಉದಯವಾಣಿ’ಯು ಉಡುಪಿ ಜಿಲ್ಲಾಧಿಕಾರಿಗಳ ಜತೆ ಎ. 21ರಂದು ಲಾಕ್‌ಡೌನ್‌ ಫೋನ್‌ಇನ್‌ ಕಾರ್ಯಕ್ರಮ ನಡೆಸಿತ್ತು. ಅಂದು ಬಂದ
ಕರೆಗಳಲ್ಲಿ ಅಂಗವಿಕಲ ಫ‌ಲಾನುಭವಿಗಳಿಗೆ ಮಾಸಾಶನ ಬಾರದೆ ಇರುವ ದೂರು ಕೂಡ ಸೇರಿತ್ತು. ಜಿಲ್ಲಾಧಿಕಾರಿಗಳು ಅಹವಾಲು ಆಲಿಸಿ, ಸ್ಪಂದಿಸುವ ಭರವಸೆ ನೀಡಿದ್ದರು. ಬಳಿಕ ದೂರುದಾರ ಫ‌ಲಾನುಭವಿಗಳನ್ನು ವಿಕಲಚೇತನರ ಸಶಕ್ತೀಕರಣ ಅಧಿಕಾರಿಗಳು ಸಂಪರ್ಕಿಸಿ ಸಮಸ್ಯೆ ಇತ್ಯರ್ಥಪಡಿಸುವ ಪ್ರಯತ್ನ ನಡೆಸಿದ್ದಾರೆ.

ವಿತರಣೆಗೆ ಕ್ರಮ ಕೈಗೊಳ್ಳುವಂತೆ ಪತ್ರ
ಯೋಜನೆಯ ಫ‌ಲಾನುಭವಿಗಳು ರೋಗ ನಿರೋಧಕ ಶಕ್ತಿ ಕಡಿಮೆ ಹೊಂದಿರುವವರಾಗಿದ್ದು, ಕೋವಿಡ್‌-19 ಸೋಂಕಿಗೆ ಬೇಗನೆ ತುತ್ತಾಗುವ ಸಾಧ್ಯತೆಗಳಿವೆ. ಅವರ ಕ್ಷೇಮ ಕಾಪಾಡಲು ಬಾಕಿ ಮಾಸಾಶನವನ್ನು ಸಕಾಲಿಕವಾಗಿ ನೀಡಬೇಕು; ಪಡಿತರ, ಉಚಿತ ವೈದ್ಯಕೀಯ ಕಿಟ್‌, ಅಗತ್ಯ ವೈದ್ಯಕೀಯ ಸೇವೆಗೆ ಪಾಸ್‌, ಇತರ ಸೌಲಭ್ಯಗಳನ್ನು ನೀಡಬೇಕು ಎಂದು ರಾಜ್ಯ ಆಯುಕ್ತರು ಮತ್ತು ಕೋವಿಡ್‌-19 ನೋಡಲ್‌ ಅಧಿಕಾರಿ ಎ. 24ರಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಮಾಸಾಶನ ವಿಳಂಬದ ಕುರಿತು ಇಲಾಖೆಗೂ ದೂರುಗಳು ಬರುತ್ತಿವೆ. ಮಾಸಾಶನ ಜಮಾವಣೆಗೆ ತಾಂತ್ರಿಕ ಕಾರಣಗಳಿಂದ ಸಮಸ್ಯೆಯಾಗಿದೆ. ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
– ಚಂದ್ರ ನಾಯ್ಕ, ವಿಕಲಚೇತನರ ಸಶಕ್ತೀಕರಣ ಅಧಿಕಾರಿ, ಉಡುಪಿ

ಅಂಗವಿಕಲ ಒಕ್ಕೂಟ ಮತ್ತು ಪೀಸ್‌ ಆಫ್ ಫೌಂಡೇಶನ್‌ ಮೂಲಕ ಸಾರ್ವಜನಿಕರಿಂದ ನೆರವು ಸಂಗ್ರಹಿಸಿ ಅಂಗವಿಕಲರಿಗೆ ನೆರವು ನೀಡುತ್ತಿದ್ದೇವೆ. ವಿವಿಧ ಸಂಘಟನೆಗಳ ಸಹಕಾರದಿಂದ ಇದುವರೆಗೆ 6,500 ಮಂದಿಗೆ ಅಗತ್ಯ ನೆರವು ನೀಡಿದ್ದೇವೆ. ಸಂಸದೆ ಶೋಭಾ ಕರಂದ್ಲಾಜೆ 1 ಕ್ವಿಂಟಾಲ್‌ ಅಕ್ಕಿ ನೀಡಿದ್ದಾರೆ.
– ಜಗದೀಶ್‌ ಭಟ್‌, ಉಪಾಧ್ಯಕ್ಷ
ಅಂಗವಿಕಲರ ಒಕ್ಕೂಟ, ಉಡುಪಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.