ಹೈದರಾಬಾದಿನ ವ್ಯಕ್ತಿಗೆ ಸೊಂಕು: ರಾಜ್ಯದಲ್ಲಿ ಸೋಂಕು ಹರಡದಂತೆ ಸಮರ್ಪಕ ಕ್ರಮ ಎಂದ ರಾಮುಲು
Team Udayavani, Mar 3, 2020, 9:48 AM IST
ಸಂಗ್ರಹ ಚಿತ್ರ
ಬೆಂಗಳೂರು: ಬೆಂಗಳೂರಿನಿಂದ ಹೈದರಾಬಾದಿಗೆ ಪ್ರಯಾಣಿಸಿದ್ದ ಟೆಕ್ಕಿಯೊಬ್ಬನಿಗೆ ಕೊರೊನಾ ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡದಂತೆ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯದ ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ ಶ್ರೀರಾಮುಲು, ಹೈದರಾಬಾದಿನ ಕೊರೊನಾ ವೈರಸ್ ಸೋಂಕು ಪೀಡಿತ ವ್ಯಕ್ತಿಯು ಬೆಂಗಳೂರಿನಿಂದ ತೆರಳಿದ್ದಾಗಿ ತಿಳಿದುಬಂದಿದೆ. ಆದ್ದರಿಂದ, ಈ ವ್ಯಕ್ತಿಯ ಸ್ಥಳೀಯ ವಿಳಾಸದಲ್ಲಿ ನೆಲೆಸಿರುವ ಎಲ್ಲಾ ಸದಸ್ಯರನ್ನು ಈಗಾಗಲೇ ಗುರುತಿಸಿ, ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ ಎಂದು ರಾಮುಲು ಹೇಳಿದ್ದಾರೆ.
ಮುನ್ನೆಚ್ಚರಿಕೆಯ ಕ್ರಮವಾಗಿ ಇಂದು ರಾಮುಲು ಅಧಿಕೃತ ನಿವಾಸದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆಯಲಾಗಿದೆ. ರಾಜ್ಯದಲ್ಲಿ ವೈರಸ್ ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ರಾಮುಲು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಲ್ಲಿ ಎರಡು ದಿನ ವಾಸ
ತೆಲಂಗಾಣದಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ರೋಗಿ ದುಬಾೖಯಿಂದ ಬೆಂಗಳೂರಿಗೆ ಬಂದು ಎರಡು ದಿನ ವಾಸವಿದ್ದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆತ ಮೂಲತಃ ಹೈದರಾಬಾದ್ ನವನಾಗಿದ್ದು, ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕಾರ್ಯ ನಿರ್ವವಹಿಸುತ್ತಿದ್ದ. ಫೆ. 19ರಂದು ದುಬಾೖಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಈತನಿಗೂ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗಿದೆ. ಆದರೆ ಯಾವುದೇ ರೋಗ ಲಕ್ಷಣ ಕಾಣಿಸಿರಲಿಲ್ಲ. ಹೀಗಾಗಿ ಮನೆಗೆ ತೆರಳಿದ್ದ. ಬಳಿಕ ಬೆಂಗಳೂರಿನ ಮನೆಯಲ್ಲಿ 2 ದಿನ ವಾಸವಿದ್ದು, ಅನಂತರ ಹೈದರಾಬಾದ್ಗೆ ತೆರಳಿದ್ದಾನೆ. ಅಲ್ಲಿ ಅನಾರೋಗ್ಯ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳಿದ್ದು, ಕೊರೊನಾ ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್