ಪೈಪೋಟಿಯ ಭರದಲ್ಲಿ ಮಾಧ್ಯಮಗಳು ಹೊಣೆಗಾರಿಕೆ ಮರೆಯದಿರಲಿ


Team Udayavani, Apr 25, 2022, 6:00 AM IST

ಪೈಪೋಟಿಯ ಭರದಲ್ಲಿ ಮಾಧ್ಯಮಗಳು ಹೊಣೆಗಾರಿಕೆ ಮರೆಯದಿರಲಿ

ಹೊಸದಿಲ್ಲಿಯ ಜಹಾಂಗೀರ್‌ಪುರಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ, ರಷ್ಯಾ-ಉಕ್ರೇನ್‌ ಯುದ್ಧ ಸಹಿತ ವಿವಿಧ ಘಟನೆಗಳ ಸಂದರ್ಭದಲ್ಲಿ ಮಾಧ್ಯಮಗಳು ಅದರಲ್ಲೂ ಮುಖ್ಯವಾಗಿ ಕೆಲವು ಖಾಸಗಿ ಟಿ.ವಿ. ಚಾನೆಲ್‌ಗ‌ಳು ಪ್ರಚೋದನಕಾರಿ ಸುದ್ದಿಗಳನ್ನು ಬಿತ್ತರಿಸಿರುವುದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನಾವಳಿಗಳನ್ನು ವರದಿ ಮಾಡುವಾಗ ಮತ್ತು ಸುದ್ದಿಗಳನ್ನು ಬಿತ್ತರಿಸುವಾಗ ವಿಶ್ವಾಸಾರ್ಹತೆಯನ್ನು ಕಾಯ್ದುಕೊಳ್ಳುವಂತೆ ಖಾಸಗಿ ಟಿ.ವಿ. ಚಾನೆಲ್‌ಗ‌ಳಿಗೆ ಎಚ್ಚರಿಕೆಯ ಸಲಹೆಯನ್ನು ಸರಕಾರ ನೀಡಿದೆ.

ಕೋಮು ಹಿಂಸಾಚಾರದಂತಹ ಘಟನೆಗಳು ನಡೆದಾಗ ವದಂತಿಗಳನ್ನೇ ಸುದ್ದಿಗಳಾಗಿ ಬಿತ್ತರಿಸುವ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಇತ್ತೀಚಿನ ವರ್ಷಗಳಲ್ಲಿ ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಅನಧಿಕೃತ ಮಾಹಿತಿ, ವೀಡಿಯೋ ತುಣುಕುಗಳನ್ನು ಕೆಲವು ಎಲೆಕ್ಟ್ರಾನಿಕ್‌ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು ಬಿತ್ತರಿಸುವುದು ಸಾಮಾನ್ಯವಾಗಿದೆ. ಈ ಮಾಹಿತಿಗಳು ಮತ್ತು ವೀಡಿಯೋ ತುಣುಕುಗಳ ನಿಖರತೆ ಮತ್ತು ವಾಸ್ತವಾಂಶಗಳ ಬಗೆಗೆ ಪರಿಶೀಲನೆ ನಡೆಸದೆ ಸುದ್ದಿ ನೀಡುವ ಪೈಪೋಟಿಯಲ್ಲಿ ಬೇಕಾಬಿಟ್ಟಿಯಾಗಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ನಿಟ್ಟಿನಲ್ಲಿ ಸರಕಾರಕ್ಕೆ ಬಲುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಯಾವುದೇ ದುರಂತ, ಹಿಂಸಾಚಾರ, ಕೋಮುದಳ್ಳುರಿಯಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಕೆಲವು ಮಾಧ್ಯಮಗಳ ಈ ರೀತಿಯ ವರ್ತನೆಯು ಪರಿಸ್ಥಿತಿ ಯನ್ನು ಮತ್ತಷ್ಟು ಹದಗೆಡುವಂತೆ ಮಾಡುತ್ತಿದೆ. ಇಂದಿನ ಪೈಪೋಟಿಯ ಕಾಲಘಟ್ಟದಲ್ಲಿ ಎಲ್ಲವೂ ಮೊದಲು ನಮ್ಮ ವಾಹಿನಿಯಲ್ಲೇ ಬಿತ್ತರಗೊಳ್ಳ ಬೇಕು ಎಂಬ ಧಾವಂತದಲ್ಲಿ ತಿರುಚಲ್ಪಟ್ಟ ಅಥವಾ ಯಾವುದೋ ಹಳೆಯ ವೀಡಿಯೋ ತುಣುಕುಗಳನ್ನು ಬಿತ್ತರಿಸುವ ಕಾರ್ಯ ಕೆಲವು ಆಧುನಿಕ ಮಾಧ್ಯಮಗಳಿಂದಾಗುತ್ತಿವೆ. ಈ ಕಾರಣದಿಂದಾಗಿಯೇ ಕೋಮು ಹಿಂಸಾಚಾರ, ದುರಂತಗಳು ನಡೆದ ಸಂದರ್ಭದಲ್ಲಿ ಇಂಟರ್‌ನೆಟ್‌ ಸಂಪರ್ಕ ಸ್ಥಗಿತ, ಕೇಬಲ್‌ ಕಡಿತದಂತಹ ಕಠಿನ ಮತ್ತು ಅನಿವಾರ್ಯ ಕ್ರಮಗಳನ್ನು ಸ್ಥಳೀಯಾಡಳಿತ ವ್ಯವಸ್ಥೆ ಕೈಗೊಂಡ ಉದಾಹರಣೆ ನಮ್ಮ ಮುಂದೆ ಸಾಕಷ್ಟಿವೆ. ಆದರೆ ಈ ಸಂದರ್ಭದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸುವ ಇದೇ ಸಂಸ್ಥೆಗಳು ಸೂಕ್ಷ್ಮ ವಿಚಾರಗಳನ್ನು ಬಿತ್ತರಿಸುವ ಸಂದರ್ಭದಲ್ಲಿ ಕಿಂಚಿತ್‌ ವಿವೇಚನೆಯನ್ನೂ ತೋರದಿರುವುದು ದುರಂತ ಎಂದರೆ ಅತಿಶಯೋಕ್ತಿಯಾಗಲಾರದು.

ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ ಎಂದೇ ಕರೆಯಲ್ಪಡುವ ಮಾಧ್ಯಮ ರಂಗ ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ. ತಂತ್ರಜ್ಞಾನ ಕ್ಷೇತ್ರ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿರುವಂತೆಯೇ ಇದರ ಅಡ್ಡ ಪರಿ ಣಾಮಗಳ ಕರಿಛಾಯೆ ನೇರವಾಗಿ ಜನಸಾಮಾನ್ಯರ ಮೇಲೂ ಬೀಳ ತೊಡಗಿದೆ. ತಂತ್ರಜ್ಞಾನದ ಅಭೂತಪೂರ್ವ ಬೆಳವಣಿಗೆಯಿಂದಾಗಿ ಕ್ಷಣಮಾತ್ರದಲ್ಲಿ ವಿಶ್ವದ ಯಾವುದೇ ಒಂದು ಮೂಲೆಯಲ್ಲಿ ಒಂದು ದುರಂತ ಸಂಭವಿಸಿದರೂ ಅದು ಕ್ಷಣ ಮಾತ್ರದಲ್ಲಿ ಜನರನ್ನು ತಲುಪುತ್ತಿದೆ. ಇಂತಹ ಸಂದರ್ಭದಲ್ಲಿ ಮಾಧ್ಯಮ ಸಂಸ್ಥೆಗಳು ಎಷ್ಟು ಜಾಗ್ರತೆ ವಹಿಸಿದರೂ ಸಾಲದು. ಬಿತ್ತರಿಸಲಾಗುವ ಸುದ್ದಿಯ ಖಚಿತತೆ ಮತ್ತವುಗಳು ಜನರ ಮೇಲೆ ಬೀರುವ ಪರಿಣಾಮವನ್ನೂ ಮೊದಲೇ ಗ್ರಹಿಸುವುದು ಜವಾಬ್ದಾರಿ ಯುತ ಮಾಧ್ಯಮ ಸಂಸ್ಥೆಯ ಕರ್ತವ್ಯವೂ ಹೌದು. ಇದನ್ನು ಮರೆತು ವದಂತಿ, ಪುಕಾರುಗಳನ್ನು ಪ್ರಸಾರ ಮಾಡುವುದು ಸರ್ವಥಾ ಸರಿಯಲ್ಲ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.