Success Story:ಅಂದು ಸಾ ಮಿಲ್ ಕಾರ್ಮಿಕ, ರೈಲ್ವೆ ನಿಲ್ದಾಣದಲ್ಲಿ ಓದು..ಇಂದು ಐಎಎಸ್ ಅಧಿಕಾರಿ

ಕುಟುಂಬ ನಿರ್ವಹಣೆಗಾಗಿ ಮನೆಯ ಸದಸ್ಯರೆಲ್ಲರೂ ದುಡಿಯಬೇಕಾದ ಅನಿರ್ವಾಯತೆ ಬಂದೊದಗಿತ್ತು.

ನಾಗೇಂದ್ರ ತ್ರಾಸಿ, Mar 15, 2023, 5:30 PM IST

Success Story:ಅಂದು ಸಾ ಮಿಲ್ ಕಾರ್ಮಿಕ, ರೈಲ್ವೆ ನಿಲ್ದಾಣದಲ್ಲಿ ಓದು..ಇಂದು ಐಎಎಸ್ ಅಧಿಕಾರಿ

ಬಹಳಷ್ಟು ಜನರಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಸವಲತ್ತು ಮತ್ತು ಹಣಕಾಸಿನ ಸಮಸ್ಯೆಯಿಂದಾಗಿ ಆ ಆಸೆಯನ್ನು ಕೈಬಿಡುತ್ತಾರೆ. ಆದರೆ ಈ ವ್ಯಕ್ತಿ ಅದಕ್ಕೆ ತದ್ವಿರುದ್ಧ ಯಾಕೆಂದರೆ ಬಡತನದ ನಡುವೆಯೂ ತನ್ನ ಕನಸನ್ನು ನನಸು ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಲ್ಲದೇ, ಐಎಎಸ್ ನಂತಹ ಉನ್ನತ ಶಿಕ್ಷಣಾಕಾಂಕ್ಷಿಗಳಿಗೆ ಪ್ರೇರಣೆಯಾಗಿದ್ದಾರೆ.

ಹೌದು ಇವರು ಯಾರು ಗೊತ್ತಾ ತಮಿಳುನಾಡಿನ ತಂಜಾವೂರಿನ ಐಎಎಸ್ ಅಧಿಕಾರಿ ಎಂ.ಶಿವಗುರು ಪ್ರಭಾಕರನ್. ಶಿವಗುರು ಐಎಎಸ್ ಕನಸು ನನಸು ಮಾಡಿಕೊಂಡ ಹಿಂದೆ ಅಪಾರ ಶ್ರಮವಿದೆ…ಆ ಯಶೋಗಾಥೆಯ ಸಂಕ್ಷಿಪ್ತ ವಿವರ ಇಲ್ಲಿದೆ…

ಯಾರು ಈ ಶಿವಗುರು ಪ್ರಭಾಕರನ್?

ಶಿವಗುರು ಅವರದ್ದು ರೈತ ಕುಟುಂಬ. ಶಿವಗುರು ಅವರ ತಾಯಿ, ತಂಗಿ ಹೊಲದಲ್ಲಿ ದುಡಿದು ಬದುಕು ಸಾಗಿಸಬೇಕಾಗಿತ್ತು.  ಅದಕ್ಕೆ ಕಾರಣ ಶಿವಗುರು ತಂದೆ ಕುಡಿತದ ದಾಸನಾಗಿದ್ದು, ಕುಟುಂಬ ನಿರ್ವಹಣೆಗಾಗಿ ಮನೆಯ ಸದಸ್ಯರೆಲ್ಲರೂ ದುಡಿಯಬೇಕಾದ ಅನಿರ್ವಾಯತೆ ಬಂದೊದಗಿತ್ತು.

Sawmill ಕೆಲಸಗಾರನಾಗಿ ದುಡಿಮೆ:

ತಂದೆಯ ಕುಡಿತದ ಚಟದಿಂದಾಗಿ ತಾಯಿ, ತಂಗಿ ಹಗಲು, ರಾತ್ರಿ ದುಡಿಯುವಂತಾಗಿತ್ತು. ಇದರಿಂದ ಬೇಸತ್ತ ಶಿವಗುರು ತಾನೂ ಕೂಡಾ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು, ಸಾ ಮಿಲ್ ನಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಸಂದರ್ಶನವೊಂದರಲ್ಲಿ ಶಿವಗುರು ಪ್ರಭಾಕರನ್ ನೀಡಿರುವ ಮಾಹಿತಿ ಪ್ರಕಾರ, ನಾನು ಎರಡು ವರ್ಷಗಳ ಕಾಲ ಸೌದೆ ಮಿಲ್ ನಲ್ಲಿ ಕೆಲಸ ಮಾಡಿದೆ, ಜೊತೆಗೆ ಹೊಲದಲ್ಲಿಯೂ ದುಡಿದಿದ್ದೆ. ಆದರೆ ನನ್ನ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಜೊತೆಗೆ ನನ್ನ ಶಿಕ್ಷಣಕ್ಕಾಗಿ ಸ್ವಲ್ಪ ಹಣವನ್ನು ಉಳಿಸಿದ್ದೆ. ಯಾಕೆಂದರೆ ನಾನು ನನ್ನ ಕನಸನ್ನು ಬಿಟ್ಟುಕೊಡಲು ಸಿದ್ಧನಾಗಿರಲಿಲ್ಲ ಎಂದು ತಿಳಿಸಿದ್ದರು.

ಕಠಿಣ ದುಡಿಮೆ…ಛಲಗಾರ ಪ್ರಭಾಕರನ್;

ಸಾ ಮಿಲ್, ಹೊಲದಲ್ಲಿ ಕಷ್ಟಪಟ್ಟು ದುಡಿದ ಶಿವಗುರು ತನ್ನ ಸಹೋದರನ ಎಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಫೀಸ್ ಅನ್ನು ಕಟ್ಟಿದ್ದು, ಏತನ್ಮಧ್ಯೆ ಸಹೋದರಿಯ ವಿವಾಹವನ್ನು ನೆರವೇರಿಸಿದ್ದ. ಬಳಿಕ 2008ರಲ್ಲಿ ಶಿವಗುರು ತನ್ನ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇರಿಸಿದ್ದರು. ಅದರಂತೆ ವೆಲ್ಲೂರ್ ನ ತಾಂಥೈ ಪೆರಿಯಾರ್ ಗವರ್ನಮೆಂಟ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಶಿವಗುರು ಸೇರಿಕೊಂಡಿದ್ದರು. ಅಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆಯಲು ಆರಂಭಿಸಿದ್ದರು.

ರೈಲ್ವೆ ಫ್ಲ್ಯಾಟ್ ಫಾರಂನಲ್ಲಿ ನಿದ್ದೆ…ಓದು..ಪರೀಕ್ಷೆ ತಯಾರಿ!

ಇಂಗ್ಲಿಷ್ ಭಾಷೆಯಲ್ಲಿ ಹಿಡಿತವಿಲ್ಲದ ಪರಿಣಾಮ ಶಿವಗುರುವಿಗೆ ಆರಂಭದಲ್ಲಿ ಎಂಜಿನಿಯರಿಂಗ್ ಓದಲು ಕಷ್ಟಪಡಬೇಕಾಯಿತು. ವಾರಾಂತ್ಯದಲ್ಲಿ ಚೆನ್ನೈನ ಸೈಂಟ್ ಥಾಮಸ್ ಮೌಂಟ್ ರೈಲ್ವೆ ನಿಲ್ದಾಣದ ಫ್ಲ್ಯಾಟ್ ಫಾರಂನಲ್ಲಿ ಓದಿ, ರಾತ್ರಿ ಕಳೆಯುತ್ತಿದ್ದರಂತೆ. ನಂತರ ಮತ್ತೆ ವೆಲ್ಲೂರಿನ ಕಾಲೇಜಿಗೆ ಹಾಜರಾಗುತ್ತಿದ್ದರು. ಅಷ್ಟೇ ಅಲ್ಲ ಹಣಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದೆ ಎಂದು ಶಿವಗುರು ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪ್ರಭಾಕರನ್ ಅವರ ಅವಿರತ ಶ್ರಮದ ಪರಿಣಾಮ ಐಐಟಿ-ಎಂ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿ, 2014ರಲ್ಲಿ ಎಂ ಟೆಕ್ ಟಾಪ್ Rankನೊಂದಿಗೆ ತೇರ್ಗಡೆಯಾಗಿದ್ದರು. ಐಐಟಿ ಪದವಿ ನಂತರ, ಎಂಟೆಕ್ ಪದವಿ ಪಡೆದ ಮೇಲೆ ಐಎಎಸ್ ಕನಸನ್ನು ನನಸು ಮಾಡುವತ್ತ ಹೆಜ್ಜೆ ಇರಿಸಿದ್ದರು.

UPSC ಪರೀಕ್ಷೆ ಪಾಸ್ ಮಾಡಲು ಹರಸಾಹಸ:

ಯುಪಿಎಸ್ ಸಿ ಪರೀಕ್ಷೆಗಾಗಿ ಸಾಕಷ್ಟು ಸಿದ್ಧತೆ ನಡೆಸಿದ್ದರು ಕೂಡಾ ಶಿವಗುರುವಿಗೆ ಮೊದಲ ಮೂರು ಪ್ರಯತ್ನದಲ್ಲಿ ಪಾಸ್ ಆಗಲು ಸಾಧ್ಯವಾಗಿರಲಿಲ್ಲ. ಆದರೂ ತನ್ನ ಕನಸನ್ನು ಬಿಟ್ಟುಕೊಡದ ಛಲಗಾರ ಶಿವಗುರು ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ತನ್ನ ಗುರಿ ಸಾಧಿಸಿದ್ದರು. ಇಂದು ತಂಜಾವೂರಿನಲ್ಲಿ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಿವಗುರು ಪ್ರಭಾಕರನ್ ಅವರ ಪ್ರೇರಣಾದಾಯಕ ಯಶೋಗಾಥೆ ಎಲ್ಲರಿಗೂ ಸ್ಪೂರ್ತಿಯಾಗಿದೆ.

*ನಾಗೇಂದ್ರ ತ್ರಾಸಿ

ಟಾಪ್ ನ್ಯೂಸ್

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

web-health

ಎಚ್ಚರ…ಬಿಸಿಲ ಬೇಗೆಗೆ ನಿರ್ಜಲೀಕರಣ ಸಮಸ್ಯೆ ಹೆಚ್ಚಳ; ಅಗತ್ಯವಾಗಿ ಈ ಆಹಾರ ಸೇವಿಸಿ

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

1-sdsa-dsd

ಮಕ್ಕಳಲ್ಲೂ ಹೃದಯ ಸಂಬಂಧಿ ಕಾಯಿಲೆ; ತಾಯಂದಿರು ಎಚ್ಚರ ವಹಿಸಲೇ ಬೇಕು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ