ಸರ್ಕಾರಿ ಬಂಗಲೆ ತೊರೆಯುವಂತೆ ಮೆಹಬೂಬಾ ಮುಫ್ತಿಗೆ ಜಮ್ಮು-ಕಾಶ್ಮೀರ ಸರ್ಕಾರ ನೋಟಿಸ್
ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ನೋಟಿಸ್ ಬಂದಿರುವುದನ್ನು ಮೆಹಬೂಬಾ ಮುಫ್ತಿ ಖಚಿತಪಡಿಸಿದ್ದಾರೆ.
Team Udayavani, Oct 21, 2022, 4:42 PM IST
ಶ್ರೀನಗರ: ಗುಪ್ಕಾರ್ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ಜಮ್ಮು-ಕಾಶ್ಮೀರ ಸರ್ಕಾರ ಮಾಜಿ ಮುಖ್ಯಮಂತ್ರಿ, ಪೀಪಲ್ಸ್ ಡೆಮೋಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬ್ ಮುಫ್ತಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಂಜೇಶ್ವರ: ಪೆಂಡಾಲ್ ಕುಸಿದು ಬಿದ್ದು 30 ವಿದ್ಯಾರ್ಥಿಗಳಿಗೆ ಗಾಯ
ಮುಫ್ತಿ ತಂದೆ ಮುಫ್ತಿ ಮುಹಮ್ಮದ್ ಸಯೀದ್ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದ(2005ನೇ ಇಸವಿ) ಸಂದರ್ಭದಿಂದ ಈವರೆಗೂ ಮೆಹಬೂಬಾ ಕುಟುಂಬ ಫೇರ್ ವೀವ್ ಸರ್ಕಾರಿ ಬಂಗಲೆಯಲ್ಲಿ ವಾಸವಾಗಿದ್ದರು. ಇದೀಗ ಕೇಂದ್ರಾಡಳಿತ ಪ್ರದೇಶವಾಗಿದ್ದು, ಮುಫ್ತಿ ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
2020ರಲ್ಲಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ಕಲಂ 371 ರದ್ದುಪಡಿಸಿದ ನಂತರ ಮಾಜಿ ಮುಖ್ಯಮಂತ್ರಿ ಸರ್ಕಾರಿ ಬಂಗಲೆಯಲ್ಲಿ ಹೆಚ್ಚು ಕಾಲ ವಾಸ್ತವ್ಯ ಹೂಡುವಂತಿಲ್ಲ ಎಂದು ಮೂಲಗಳು ತಿಳಿಸಿವೆ.
ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ನೋಟಿಸ್ ಬಂದಿರುವುದನ್ನು ಮೆಹಬೂಬಾ ಮುಫ್ತಿ ಖಚಿತಪಡಿಸಿದ್ದಾರೆ. ಅಷ್ಟೇ ಅಲ್ಲ ಮೆಹಬೂಬಾ ಮುಫ್ತಿಗೆ ಪರ್ಯಾಯ ನಿವಾಸ ಕೊಡುವುದಾಗಿಯೂ ಆಫರ್ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ