ಮೇಕೆದಾಟು ಪಾದಯಾತ್ರೆ ಮತ್ತೆ ಪ್ರಾರಂಭ: ರಾಮಲಿಂಗಾರೆಡ್ಡಿ
Team Udayavani, Feb 2, 2022, 10:15 PM IST
ಬೆಂಗಳೂರು:ಮೇಕೆದಾಟು ಯೋಜನೆಯ ಅನುಷ್ಟಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಮತ್ತೆ ಆರಂಭಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಿ ಪಾದಯಾತ್ರೆ ನಿಂತಿತ್ತೋ ಅಲ್ಲಿಂದಲೇ ಮತ್ತೆ ಸದ್ಯದಲ್ಲೇ ಆರಂಭವಾಗಲಿದೆ ಎಂದು ತಿಳಿಸಿದರು.
ಕೋವಿಡ್ ಕಡಿಮೆಯಾದ ನಂತರ ಪೊಲೀಸರು ಅನುಮತಿ ನೀಡುತ್ತಾರೆ. ಕಡಿಮೆಯಾದ ನಂತರ ಅವರು ಅನುಮತಿ ನೀಡಲೇಬೇಕಾಗುತ್ತದೆ ಎಂದು ಹೇಳಿದರು.
ಇದು ಎರಡೂವರೆ ಕೋಟಿ ಜನರ ಕುಡಿಯುವ ನೀರಿನ ವಿಚಾರವಾಗಿದೆ. ನಮ್ಮ ಒತ್ತಡಕ್ಕಾದರೂ ಕೇಂದ್ರದಿಂದ ಅನುಮತಿ ಪಡೆದು ಸರ್ಕಾರ ಯೋಜನೆ ಆರಂಭಿಸಿದರೆ ಅನುಕೂಲವಾಗಲಿದೆ. ಬೆಂಗಳೂರು ಸುತ್ತಮುತ್ತಲ ಹೊರವಲಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರದೇಶದ ಜನರಿಗೂ ಕುಡಿಯುವ ನೀರು ದೊರೆಯಲಿದೆ ಎಂದರು.
ಇದನ್ನೂ ಓದಿ:1008 ಕಿ. ಮೀ. ರಾಜ್ಯ ಹೆದ್ದಾರಿ ಮರು ಡಾಂಬರೀಕರಣ: ಡಿಪಿಆರ್ ಸಿದ್ಧ ಪಡಿಸಲು ಸಿಎಂ ಸೂಚನೆ
ಎರಡನೇ ಹಂತದ ಪಾದಯಾತ್ರೆ ಮಾರ್ಗದಲ್ಲಿ ಮಲ್ಲೇಶ್ವರಂ ಸೇರಬೇಕು ಎಂದು ಅಧ್ಯಕ್ಷರು ಹೇಳಿದ್ದಾರೆ. ಈ ಹಿಂದೆ ಚಾಮರಾಜಪೇಟೆ ಮೇಲೆ ಬರಲು ಸಾಧ್ಯವಾಗುತ್ತಿರಲಿಲ್ಲ. ಮೇಕ್ರಿ ಸರ್ಕಲ್ ನಿಂದ ಮಲ್ಲೇಶ್ವರಂ ಕಡೆ ಹೋದರೆ, ಅಲ್ಲಿಂದ ಚಾಮರಾಜಪೇಟೆ ಮಾರ್ಗವಾಗಿ ಬರಬಹುದು ಎಂದು ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಪಾದಯಾತ್ರೆ ವ್ಯಕ್ತಿ ಪ್ರತಿಷ್ಠೆಗಾಗಿಯೂ ಅಲ್ಲ, ಕಾಂಗ್ರೆಸ್ ಪ್ರತಿಷ್ಠೆಗಾಗಿಯೂ ಅಲ್ಲ, ಇದು ಜನರ ಹಿತ ಕುಡಿಯುವ ನೀರಿನ ದೃಷ್ಟಿಯಿಂದ ಮಾಡುತ್ತಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ