ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್
Team Udayavani, Jan 31, 2023, 8:02 PM IST
ತೀರ್ಥಹಳ್ಳಿ: ತಾಲೂಕಿನ ಅತೀ ದೊಡ್ಡ ಗ್ರಾಮಪಂಚಾಯಿತಿಗಳಲ್ಲಿ ಒಂದಾಗಿರುವ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ಹಲವು ದಿನಗಳಿಂದ ಗಲಾಟೆ ನೆಡೆಯುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸೋಮವಾರ ರಾತ್ರಿ ಹೈಡ್ರಾಮವೊಂದು ನೆಡೆದಿದೆ.
ಗ್ರಾಮಪಂಚಾಯಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಯ ನೆಡೆಯುತ್ತಿದ್ದ ಮುಸುಕಿನ ಗುದ್ದಾಟ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅದರಲ್ಲೂ ಅಲ್ಲಿನ ಅಭಿವೃದ್ಧಿ ಅಧಿಕಾರಿಯನ್ನು ಎತ್ತಂಗಡಿ ಮಾಡಬೇಕು ಇಲ್ಲದಿದ್ದರೆ ಗ್ರಾಮಪಂಚಾಯಿತಿಗೆ ಬರುವುದಿಲ್ಲ ಎಂದು ಅಧ್ಯಕ್ಷರು ಹಾಗೂ ಕೆಲವು ಸದಸ್ಯರು ಹೇಳಿದ್ದರು. ಇದರಿಂದ ಗ್ರಾಮಪಂಚಾಯಿತಿ ಆವರಣದಲ್ಲಿ ಸೋಮವಾರ ಸಾರ್ವಜನಿಕರಿಂದ ಪ್ರತಿಭಟನೆ ಕೂಡ ನೆಡೆದಿತ್ತು.
ಪಿಡಿಓ ಎತ್ತಂಗಡಿ
ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಕೆಲವು ಸದಸ್ಯರು ಈಓ ಬಳಿ ಹೋಗಿ ಪಿಡಿಓ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದ್ದೂ ಈಓ ವಿಷಯವನ್ನು ಹಿಂದೂ ಮುಂದೆ ನೋಡದೆ ರಾತ್ರೋ ರಾತ್ರಿ ಪಿಡಿಓ ಅವರನ್ನು ತಾಲೂಕು ಪಂಚಾಯತ್ ಕಚೇರಿಗೆ ವರ್ಗಾವಣೆ ಮಾಡಲು ಆದೇಶ ಮಾಡಿದ್ದರು.
ಗೃಹಸಚಿವರ ಆದೇಶ – ವರ್ಗಾವಣೆ ವಾಪಾಸ್
ಈ ವಿಷಯ ತಿಳಿದ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷರಾದ ಅನಿಲ್ ಅವರು ಗೃಹಸಚಿವರಿಗೆ ಮಾಹಿತಿ ನೀಡಿ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ದಕ್ಷ ಅಧಿಕಾರಿಯಾಗಿದ್ದು ಅವರನ್ನು ವರ್ಗಾವಣೆ ಮಾಡಲು ಆದೇಶಿಸಿದ್ದಾರೆ. ಈ ರೀತಿ ಮಾಡಬಾರದು ಎಂದು ಗೃಹಸಚಿವರ ಬಳಿ ಮನವಿ ಮಾಡಿದ್ದರು. ನಂತರ ಗೃಹಸಚಿವರು ಈಓ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ತಾವೇ ನೀಡಿದ್ದ ಆದೇಶವನ್ನು ಈಓ ವಾಪಾಸ್ ಪಡೆದಿದ್ದಾರೆ. ಒಟ್ಟಿನಲ್ಲಿ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮ ನೆಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ