ಜನರೊಂದಿಗೆ ದರ್ಪದ ವರ್ತನೆ ತೋರುತ್ತಿರುವ ಮೇಲಿನ ಕುರುವಳ್ಳಿ ಪಿಡಿಒ ವರ್ಗಾವಣೆಗೆ ಆಗ್ರಹ
Team Udayavani, Feb 8, 2023, 5:43 PM IST
ತೀರ್ಥಹಳ್ಳಿ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ದಿನಗಳಿಂದ ನೀರು ಸರಬರಾಜು ಇಲ್ಲದೆ ಮತ್ತು ಗ್ರಾಮ ಪಂಚಾಯಿತಿಯಲ್ಲಿ ಕಳೆದ ಆರು ತಿಂಗಳಿನಿಂದ ಗ್ರಾಮ ಸಭೆ, ವಾರ್ಡ್ ಸಭೆ, ಸಾಮಾನ್ಯ ಸಭೆಯು ನಡೆಸದೆ ಪಂಚಾಯಿತಿ ಪಿಡಿಒ ಸರಿತ ಎಂಬುವವರು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸದೆ ಇದ್ದ ಕಾರಣ ಗ್ರಾಮ ಪಂಚಾಯಿತಿಗೆ ಮಾಜಿ ಉಪಾಧ್ಯಕ್ಷರದ ಶ್ರೀಮತಿ ಗೀತಾ ರಾಘವೇಂದ್ರ ಇವರ ನೇತೃತ್ವದಲ್ಲಿ ನೂರಾರು ಗ್ರಾಮಸ್ಥರು ಮತ್ತು ವಿಠಲ ನಗರದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ್ದು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸದೇ ಅಧಿಕಾರ ದರ್ಪ ತೋರುತ್ತಿರುವ ಪಿಡಿಓ ಅವವರನ್ನು ವರ್ಗಾವಣೆ ಮಾಡುವಂತೆ ಮಾಜಿ ಉಪಾಧ್ಯಕ್ಷ ರಾದ ಶ್ರೀಮತಿ ಗೀತಾ ರಾಘವೇಂದ್ರ ಸೇರಿದಂತೆ ನೂರಾರು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಸ್ಥಳೀಯವಾದ ಯಾವುದೇ ಸಮಸ್ಯೆಗಳಿಗೆ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ, ಯಾವುದೇ ಸಮಸ್ಯೆ ಕೇಳುವುದಕ್ಕೆ ಬಂದರೆ ಸೌಜನ್ಯದಿಂದ ವರ್ತಿಸುವುದಿಲ್ಲ, ಯಾವುದೇ ಸಮಸ್ಯೆಗಳು ಆಲಿಸುವುದಿಲ್ಲ, ಸಮಸ್ಯೆ ಇರುವ ಸ್ಥಳಕ್ಕೆ ಬರುವುದಿಲ್ಲ ತಕ್ಷಣ ಪ್ರತಿಭಟನ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಬರಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿದ್ದು ವಿಷಯ ತಿಳಿದು ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗಳು ಬಂದಿದ್ದು ಗ್ರಾಮಸ್ಥರ ಸಮಸ್ಯೆ ಆಲಿಸಿ ತಕ್ಷಣ ಸಮಸ್ಯೆ ಇತ್ಯರ್ಥ ಮಾಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದೆ ಪಡೆದುಕೊಳ್ಳಲಾಯಿತು.
ಇದನ್ನೂ ಓದಿ: ವಂದನಾ ನಿರ್ಣಯ; ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
MUST WATCH
ಹೊಸ ಸೇರ್ಪಡೆ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ