‘ಮಿನಿ ವಿಧಾನಸೌಧ’ಗಳು ಇನ್ನು ಮುಂದೆ ‘ತಾಲೂಕು ಆಡಳಿತ ಸೌಧ’ : ಸರಕಾರದ ಆದೇಶ
Team Udayavani, Nov 16, 2021, 6:37 PM IST
ಬೆಂಗಳೂರು : ತಾಲೂಕು ಕೇಂದ್ರಗಳಲ್ಲಿರುವ “ಮಿನಿ ವಿಧಾನಸೌಧ’ಗಳ ಹೆಸರನ್ನು “ತಾಲೂಕು ಆಡಳಿತ ಸೌಧ’ಗಳೆಂದು ಬದಲಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದ ಎಲ್ಲಾ ತಾಲೂಕುಗಳಲ್ಲಿರುವ ಮಿನಿ ವಿಧಾನಸೌಧ ಎಂಬ ತಾಲೂಕು ಆಡಳಿತ ಕಛೇರಿಗಳನ್ನು ರಾಜ್ಯದ ಭಾಷಾ ನೀತಿಗೆ ಒಳಪಡುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆ ಕನ್ನಡವಾಗಿರುವುದರಿಂದ ನಾಡು-ನುಡಿ ಸಂಸ್ಕೃತಿಗೆ ಪೂರಕವಾಗಿ “ತಾಲೂಕು ಆಡಳಿತ ಸೌಧ’ ಎಂದು ಬದಲಿಸುವುದು ಸೂಕ್ತವೆಂದು ಸರ್ಕಾರ ಹೇಳಿದೆ.
ಪ್ರಸ್ತುತ ಬಳಕೆಯಲ್ಲಿರುವ ಮಿನಿ ಎಂಬ ಪದ ಆಂಗ್ಲಭಾಷೆಯದ್ದಾಗಿದ್ದು, ತಾಲೂಕು ಮಟ್ಟದ ಆಡಳಿತ ಕಟ್ಟಡಗಳಲ್ಲಿ ಯಾವುದೇ ಕಲಾಪಗಳನ್ನಾಗಲಿ ಕಾಯ್ದೆ-ಕಾನೂನುಗಳನ್ನಾಗಲಿ ರೂಪಿಸುವ ಶಕ್ತಿ ಕೇಂದ್ರಗಳಲ್ಲದ ಕಾರಣ “ಮಿನಿ ವಿಧಾನಸೌಧ’ ಎಂಬುದರ ಬದಲಿಗೆ ತಾಲೂಕು ಆಡಳಿತ ಸೌಧ ಎಂದು ಬದಲಿಸುವುದು ಅರ್ಥಪೂರ್ಣವಾಗಿರುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸಾರ್ವಜನಿಕರು ಮತ್ತು ಗಣ್ಯ ವ್ಯಕ್ತಿಗಳ ಕೋರಿಕೆಯನ್ನು ಸರ್ಕಾರ ಪರಿಗಣಿಸಿದೆ.
ಆದ್ದರಿಂದ ರಾಜ್ಯದ ಎಲ್ಲಾ ತಾಲೂಕುಗಳಲ್ಲಿನ “ಮಿನಿ ವಿಧಾನಸೌಧ’ ಎಂಬ ನಾಮಾಂಕಿತದ ಬದಲು “ತಾಲೂಕು ಆಡಳಿತ ಸೌಧ’ ಎಂದು ನಾಮಾಂಕಿತಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಇದನ್ನೂ ಓದಿ : ದೇಶದ ಗ್ರೀನರ್ ಎಕಾನಮಿಯ ಸಂಶೋಧನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ: ನಿತಿನ್ ಗಡ್ಕರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು