ಸಚಿವ ನಾರಾಯಣಗೌಡ ವಿರುದ್ದ ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ
Team Udayavani, Jan 10, 2022, 1:37 PM IST
ಶ್ರೀರಂಗಪಟ್ಟಣ: ಕೊರೊನಾ ವಿಚಾರದಲ್ಲಿ ಶಾಸಕ ಮತ್ತು ಸಚಿವರ ನಡುವಿನ ಜಟಾಪಟಿ ಮುಂದುವರೆದಿದೆ. ಸೋಮವಾರ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ಸಚಿವ ನಾರಾಯಣಗೌಡರ ವಿರುದ್ದ ವಾಗ್ದಾಳಿ ನಡೆಸಿದ್ದು, “ಇವರು ನಾಲಾಯಕ್ ಸಚಿವರು” ಎಂದಿದ್ದಾರೆ.
ಭಾನುವಾರ ಶ್ರೀರಂಗಪಟ್ಟಣ ಕೋವಿಡ್ ಕೇರ್ ಗೆ ಭೇಟಿ ನೀಡಿದ್ದ ಸಚಿವ ನಾರಾಯಣಗೌಡ, ಕ್ಷೇತ್ರದ ಶಾಸಕನಿಂದ ನಾನು ಬುದ್ದಿ ಕಲಿಯಬೇಕಿಲ್ಲ. ನಮ್ಮ ಸರ್ಕಾರ ಎಲ್ಲವನ್ನು ಮಾಡುತ್ತಿದೆ. ಇವರಿಗೆ ಹೇಳಿಸಿಕೊಂಡು ಕಲಿಯಬೇಕಿಲ್ಲ. ಅವನಿಗೆ ಅನುಭವವಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.
ಇಂದು ಪಟ್ಟಣದ ಮಂಜುನಾಥ ಸಮುದಾಯ ಭವನದ ಕೋವಿಡ್ ಕೇರ್ ಗೆ ಭೇಟಿ ನೀಡಿದ್ದ ವೇಳೆ ಶಾಸಕ ರವೀಂದ್ರ ಶ್ರೀಕಂಠಯ್ಯ, ಸಚಿವರು ಪುಕ್ಕಟೆ ಏನು ಅಂತ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ವ್ಯವಸ್ಥೆ ಅದ್ವಾನ ಆಗಿರುವುದಕ್ಕೆ ನೀವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ರವೀಂದ್ರ ಶ್ರೀಕಂಠಯ್ಯ, ಸಚಿವರು ಮಾನವೀಯತೆ ಕಲಿಯಬೇಕಿದೆ. ಇವರ ಮನೆಯಲ್ಲಿ ಇದೇ ರೀತಿ ಆಗಿದ್ದರೆ ನೀವು ಅಡ್ಜೆಸ್ಟ್ ಮಾಡಿಕೊಂಡು ಸುಮ್ಮನಿರುತ್ತಿದ್ದಿರಾ? ಅವನು ಯಾವ ಸೀಮೆ ಮಂತ್ರಿ, ಜಿಲ್ಲೆಯ ಮರ್ಯಾದೆ ತೆಗೆದಿದ್ದಿರಾ ಎಂದು ಕಿಡಿಕಾರಿದರು.
ಕೋವಿಡ್ ಲೆಕ್ಕದ ವಿಚಾರದಲ್ಲಿ ಸಭೆಯಲ್ಲಿ ಲೆಕ್ಕ ಕೇಳಿದರೂ ತಲೆ ತಗ್ಗಿಸಿಕೊಂಡು ಕುಳಿತಿದ್ದರು. ಜಿಲ್ಲೆಯಲ್ಲಿ ಇಷ್ಟೆಲ್ಲಾ ಆಗುತ್ತಿದ್ದರೂ ಇನ್ನು ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದಿಲ್ಲ ಎಂದು ಸಚಿವರು ಸೇರಿದಂತೆ ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳಿಂದ ಕೆಲಸ ತೆಗೆದುಕೊಳ್ಳುವ ಯೋಗ್ಯತೆ ಜಿಲ್ಲೆಯ ಸಚಿವರಿಗಿಲ್ಲ ಎಂದು ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ