ಸಚಿವರ ಸಭೆಯಲ್ಲಿ ಅನರ್ಹ ಶಾಸಕ: ರಾಮುಲು ಜೊತೆ ವೇದಿಕೆಯಲ್ಲಿ ಪ್ರತಾಪ್ ಗೌಡ ಪಾಟೀಲ್
Team Udayavani, Apr 5, 2020, 1:39 PM IST
ರಾಯಚೂರು: ಆರೋಗ್ಯ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀ ರಾಮುಲು ಅವರು ಕೈಗೊಂಡ ಸಭೆಯಲ್ಲಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಾಲ್ಗೊಳ್ಳುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ ಘಟನೆ ರವಿವಾರ ನಡೆದಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕೋವಿಡ್ 19 ಪರಿಶೀಲನಾ ಸಭೆಯಲ್ಲಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಾಲ್ಗೊಂಡಿದ್ದರು.
ಶಾಸಕರಲ್ಲದವರು ಸಭೆಯ ವೇದಿಕೆಯಲ್ಲಿ ಆಸೀನರಾದರೂ ಯಾರು ಆಕ್ಷೇಪ ವ್ಯಕ್ತಪಡಿಸಲಿಲ್ಲ. ಸಾಮಾಜಿಕ ಅಂತರ ಕಾಪಾಡಲು ವೇದಿಕೆಯಲ್ಲಿ ಸ್ಥಳಾಭಾವ ಇತ್ತು. ಆದರೂ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಶಾಸಕರ ಜತೆಗೇ ವೇದಿಕೆ ಹಂಚಿಕೊಂಡಿದ್ದಾರೆ. ಉಸ್ತುವಾರಿ ಸಚಿವರು ಕೂಡ ಈ ಬಗ್ಗೆ ಮೌನ ವಹಿಸುವ ಮೂಲಕ ಶಿಷ್ಟಚಾರ ಉಲ್ಲಂಘನೆಗೆ ಅನುವು ಮಾಡಿಕೊಟ್ಟಂತಾಯಿತು.
ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಭೆಯಲ್ಲಿ ಪಾಲ್ಗೊಂಡಿದ್ದಲ್ಲದೇ ಮಾತನಾಡಿದರು. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು.
ಇನ್ನೂ ಕೊಪ್ಪಳ ಸಂಸದ ಕರಡಿ ಸಂಗಣ್ಣ ಪಾಲ್ಗೊಂಡಿದ್ದರೆ ಜಿಲ್ಲೆಯ ಸಂಸದ ರಾಜಾ ಅಮರೇಶ್ವರ ನಾಯಕ ಸಭೆಗೆ ಗೈರಾಗಿದ್ದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ