ಚುನಾವಣೆ ವೇಳೆ ಸಮಾಜ ವಿಭಜಿಸುವ ಜೆಡಿಎಸ್‌, ಕಾಂಗ್ರೆಸ್‌: ಸಚಿವ ಸುನಿಲ್‌ ಕುಮಾರ್‌ ಆರೋಪ


Team Udayavani, Feb 9, 2023, 6:40 AM IST

ಚುನಾವಣೆ ವೇಳೆ ಸಮಾಜ ವಿಭಜಿಸುವ ಜೆಡಿಎಸ್‌, ಕಾಂಗ್ರೆಸ್‌: ಸಚಿವ ಸುನಿಲ್‌ ಕುಮಾರ್‌ ಆರೋಪ

ಉಡುಪಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಾಜದ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಯಾವುದೇ ಚುನಾವಣೆ ಮಾಡಿಲ್ಲ. ಜಾತಿಯ ಆಧಾರದಲ್ಲಿ ಎಲ್ಲ ಚುನಾವಣೆಯಲ್ಲೂ ಸಮಾಜವನ್ನು ವಿಭಜಿಸುವ ಕಾರ್ಯವನ್ನು ಹಿಂದಿನಿಂದಲೂ ಮಾಡುತ್ತಾ ಬಂದಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಆರೋಪಿಸಿದರು.

ಉಡುಪಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಫೆ. 11, 12ರಂದು ನಡೆಯಲಿರುವ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನದ ಪೂರ್ವ ಸಿದ್ಧತೆಗಳನ್ನು ಬುಧವಾರ ಪರಿಶೀಲಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಬಿಜೆಪಿ ಸರಕಾರ ಬರಲಿದೆ ಎಂಬುದನ್ನು ಎಚ್‌.ಡಿ. ಕುಮಾರಸ್ವಾಮಿಯವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಬಿಜೆಪಿ ಸರಕಾರ ಬಂದ ಅನಂತರದಲ್ಲಿ ಮುಖ್ಯಮಂತ್ರಿ ಯಾರು ಆಗಬೇಕು ಎನ್ನುವುದನ್ನು ಪಕ್ಷ ತೀರ್ಮಾನಿಸಲಿದೆ. ಬ್ರಾಹ್ಮಣರು ಅಥವಾ ಯಾವುದೇ ಜಾತಿಯ ಹೆಸರಿನಲ್ಲಿ ಕೀಳಾಗಿ ಮಾತಾಡುವುದು ಕುಮಾರಸ್ವಾಮಿಯವರಿಗೆ ಶೋಭೆ ತರುವುದಿಲ್ಲ. ಅರ್ಹತೆ ಇದ್ದವರು ಮುಖ್ಯಮಂತ್ರಿ ಆಗುತ್ತಾರೆ. ಜಾತಿ, ಕುಟುಂಬ ಆಧಾರದಲ್ಲಿ ಜೆಡಿಎಸ್‌ ಪಕ್ಷದಿಂದ ಮಾತ್ರ ಮುಖ್ಯಮಂತ್ರಿ ಆಗುತ್ತದೆ. ಬಿಜೆಪಿಯಲ್ಲಿ ಜಾತಿ, ಕುಟುಂಬದ ಆಧಾರವಲ್ಲ, ಪಕ್ಷನಿಷ್ಠೆ ಮತ್ತು ಅನುಭವ ಇದ್ದವರು ಮುಖ್ಯಮಂತ್ರಿಯಾಗುತ್ತಾರೆ ಎಂದು ವ್ಯಂಗ್ಯವಾಡಿದರು.

ಉತ್ಸಾಹ ಇದೆ
ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್‌ ಶಾ ಅವರ ದ.ಕ. ಭೇಟಿ ಹಿನ್ನೆಲೆಯಲ್ಲಿ ಈಗಾಗಲೇ ಪುತ್ತೂರಿಗೆ ಹೋಗಿ ಸಮಾವೇಶ ನಡೆಯುವ ಸ್ಥಳ ಪರಿಶೀಲಿಸಲಾಗಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರ ಹಾಗೂ ಸಹಕಾರಿಗಳ ದೊಡ್ಡ ಸಮ್ಮೇಳನ ನಡೆಯಲಿದೆ. ಶಾ ಆಗಮನದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ನಾಲ್ಕು ವಿಧಾನಸಭೆ ಕ್ಷೇತ್ರ ಹಾಗೂ ಇಡೀ ಜಿಲ್ಲೆಗೆ ಸೀಮಿತವಾಗಿ ದೊಡ್ಡ ಸಮಾವೇಶ ನಡೆಯುತ್ತಿದ್ದು, ಲಕ್ಷಕ್ಕೂ ಅಧಿಕ ಜನರು ಸೇರಲಿದ್ದಾರೆ. ಅಮಿತ್‌ ಶಾ ಬರುತ್ತಿರುವುದರಿಂದ ತಾನಾಗೀಯ ಚುನಾವಣೆ ರಂಗೇರಲಿದೆ. ಉಭಯ ಜಿಲ್ಲೆಯ ಎಲ್ಲ ಕ್ಷೇತ್ರ ಗೆಲ್ಲಲು ತಯಾರಿ ಮಾಡುತ್ತಿದ್ದೇವೆ ಎಂದರು.

ಪದ್ಧತಿಯಂತೆ ನಡೆಯಲಿದೆ
ಎಸ್ಕಾಂಗಳು ಪ್ರತೀ ವರ್ಷ ಮುಂದಿನ ಯೋಜನೆ ಹಾಗೂ ಬಜೆಟ್‌ ಆಧಾರದಲ್ಲಿ ವಿದ್ಯುತ್‌ ದರದ ನಿಗದಿ ಹೇಗೆ ಮಾಡಬೇಕು ಎಂಬುದರ ಅಭಿಪ್ರಾಯವನ್ನು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮುಂದೆ ಇಡಲಿದೆ. ಕೆಇಆರ್‌ಸಿ ಅದಾಲತ್‌ ಮೂಲಕ ಸಾರ್ವಜನಿಕರ ಮುಂದಿಟ್ಟು, ಅವರ ಅಭಿಪ್ರಾಯ ಪಡೆಯಲಿದೆ. ಎಸ್ಕಾಂ ಮತ್ತು ಸಾರ್ವಜನಿಕರ ಅಭಿಪ್ರಾಯ ಕ್ರೋಢೀಕರಿಸಿ ಅನಂತರ ಕೆಇಆರ್‌ಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಶಾಸಕ ಕೆ. ರಘುಪತಿ ಭಟ್‌ ಉಪಸ್ಥಿತರಿದ್ದರು.

ಪ್ರತ್ಯೇಕ ರಾಜ್ಯ ಕೇಳಿಲ್ಲ
ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ. ಕನ್ನಡ ಬಿಟ್ಟು ಬೇರೆ ಯಾವುದೇ ಯೋಚನೆ ಮಾಡಲು ಸಾಧ್ಯವೇ ಇಲ್ಲ. ಕನ್ನಡದ ಎಲ್ಲ ಚಟುವಟಿಕೆ ಹಾಗೂ ಕನ್ನಡಿಗರ ಜತೆಗೆ ತುಳುನಾಡು ಅವಿನಾಭಾವ ಸಂಬಂಧ ಹೊಂದಿದೆ. ನಾವೇನು ಪ್ರತ್ಯೇಕ ತುಳುನಾಡು ಕೇಳುತ್ತಿಲ್ಲ. ತುಳು ಭಾಷೆಗೆ ಎರಡನೇ ಆದ್ಯತೆ ನೀಡುವಂತೆ ಕೇಳಿದ್ದೇವೆ. ಕನ್ನಡಕ್ಕೆ ಮೊದಲ ಆದ್ಯತೆ ಮತ್ತು ಪರಮೋಚ್ಚ ಸ್ಥಾನಮಾನ. ತುಳು ಕನ್ನಡದ್ದೇ ಇನ್ನೊಂದು ಭಾಗವಾಗಿರುವುದರಿಂದ ಪ್ರಸ್ತಾವನೆ ಸರಕಾರದ ಮುಂದಿಟ್ಟಿದ್ದೇವೆ. ಬೇರೆ ರಾಜ್ಯಗಳಲ್ಲಿ ಮೊದಲ ಆದ್ಯತೆ ಭಾಷೆಯ ಜತೆಗೆ ಬೇರೆ ಬೇರೆ ಭಾಷೆಗೂ ಆದ್ಯತೆ ನೀಡಿದ್ದಾರೆ. ಹೀಗಾಗಿ ಇಲ್ಲಿಯೂ ತುಳು ಭಾಷೆಗೆ ಎರಡನೇ ಆದ್ಯತೆ ನೀಡುವಂತೆ ಅನೇಕರು ಮನವಿ ಸಲ್ಲಿಸಿದ್ದಾರೆ. ಇದರ ಸಾಧಕ-ಬಾಧಕ ಚರ್ಚೆಗೆ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಆಧಾರದಲ್ಲಿ ಸರಕಾರ ಮುಂದೆ ಕ್ರಮ ತೆಗೆದುಕೊಳ್ಳಲಿದೆ ಎಂದು ಸುನಿಲ್‌ ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.