Watch Video: ಇದೊಳ್ಳೆ ಉಪಾಯ…ಪರಿಸರ ಸ್ನೇಹಿ ಬಿದಿರಿನ ವಾಶ್ ಬೇಸಿನ್ ಹೇಗಿದೆ ನೋಡಿ…
ಕೌಶಲ್ಯಯುತವಾಗಿ ತಯಾರಿಸಿರುವ ಈ ವಾಶ್ ಬೇಸಿನ್ ಬಗ್ಗೆ ಸಚಿವ ಇಮ್ನಾ ಶ್ಲಾಘನೆ
Team Udayavani, Aug 11, 2023, 11:35 AM IST
ನವದೆಹಲಿ: ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಸಾಮಾಜಿಕ ಜಾಲತಾಣದಲ್ಲಿ ವೈವಿಧ್ಯಮಯ ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಸಕ್ರಿಯರಾಗಿದ್ದು, ಇದೀಗ ತಮ್ಮ ರಾಜ್ಯದಲ್ಲಿನ ಹಳ್ಳಿಗಳಲ್ಲಿ ಜನರು ಬಿದಿರನ್ನು ಬಳಸಿ ಪರಿಸರ ಸ್ನೇಹಿ ವಾಶ್ ಬೇಸಿನ್ ತಯಾರಿಸಿರುವ ಕುರಿತು ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:600 Million Instagram Followers ಪಡೆದ ರೊನಾಲ್ಡೊ: ಇಲ್ಲಿದೆ ಟಾಪ್ 6 ಆಟಗಾರರ ಪಟ್ಟಿ
ಪರಿಸರದಲ್ಲಿ ದೊರಕುವ ವಸ್ತುಗಳನ್ನೇ ಬಳಸಿಕೊಂಡು ತುಂಬಾ ಕೌಶಲ್ಯಯುತವಾಗಿ ತಯಾರಿಸಿರುವ ಈ ವಾಶ್ ಬೇಸಿನ್ ಬಗ್ಗೆ ಇಮ್ನಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
“ಇದು ಬಿದಿರನ್ನು ಬಳಸಿ ಕಂಡು ಹಿಡಿದಿರುವ ನೂತನ ವಾಶ್ ಬೇಸಿನ್ , ಶೇ.100ರಷ್ಟು ನೈಸರ್ಗಿಕವಾಗಿದೆ. ಇದರ ಬಳಕೆಯಿಂದ ಪರಿಹಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ನಾಗಾಲ್ಯಾಂಡ್ ಜನರು ತಮ್ಮ ಹಳ್ಳಿಗಳಲ್ಲಿ ಇಂತಹ ಪರಿಸರ ಸ್ನೇಹಿ ವಾಶ್ ಬೇಸಿನ್ ಗಳನ್ನು ತಯಾರಿಸಿ ಬಳಸುತ್ತಿದ್ದಾರೆ. ಪರ್ವತ ಪ್ರದೇಶದಿಂದ ಹರಿದು ಬರುವ ನೀರನ್ನು ಬಿದಿರಿನ ಮೂಲಕ ಹಾಯಿಸಿ ಅದಕ್ಕೆ ರಂಧ್ರಗಳನ್ನು ಕೊರೆದು ತಮಗೆ ಅಗತ್ಯವಿದ್ದಾಗ ರಂಧ್ರಕ್ಕೆ ಸಿಕ್ಕಿಸಿದ ಮರದ ತಂಡುಗಳನ್ನು ಹೊರತೆಗೆದು ಕೈ, ಕಾಲುಗಳನ್ನು ತೊಳೆದುಕೊಳ್ಳಬಹುದಾಗಿದೆ. ನಂತರ ಪುನಃ ಮರದ ಚೂಪಾದ ತುಂಡನ್ನು ರಂಧ್ರವನ್ನು ಮುಚ್ಚುತ್ತಾರೆ” ಎಂಬುದಾಗಿ ಇಮ್ನಾ ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
देखा है कहीं ऐसा?
🎥: ontheground.with.sai pic.twitter.com/SxBzMzgEjv
— Temjen Imna Along (@AlongImna) August 10, 2023
ಇಂತಹ ಉಪಾಯವನ್ನು ಎಲ್ಲೆಡೆ ಅನುಸರಿಸಿದರೆ ಇದರಿಂದ ಪರಿಸರಕ್ಕೆ ಬಹಳಷ್ಟು ಸಹಕಾರಿಯಾಗಲಿದೆ ಎಂದು ತೆಮ್ಜೆನ್ ಇಮ್ನಾ ಟ್ವೀಟ್ ನಲ್ಲಿ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ X ನಲ್ಲಿ ವೈರಲ್ ಆಗಿದ್ದು, ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
MUST WATCH
ಹೊಸ ಸೇರ್ಪಡೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ